Homeಕರ್ನಾಟಕಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ?

- Advertisement -
- Advertisement -

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದೂ ಇಲ್ಲ, ನಾನು ಬರುತ್ತೇನೆ ಅಥವಾ ಬರುವುದಿಲ್ಲ ಎಂದು ಅವರಿಗೆ ಹೇಳಿಲ್ಲ. ಈಶ್ವರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಮೋದಿಯವರು ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅನ್ನದಾತರ ಹೋರಾಟದ ಪರವಾಗಿ ನಾವಿದ್ದೇವೆ: ಸಿದ್ದರಾಮಯ್ಯ

“ಆರ್‌ಎಸ್ಎಸ್ ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲಾ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿವೆ. ಆರ್‌ಎಸ್‌ಎಸ್ ಸ್ಥಾಪಕರಾದ ಹೆಡಗೆವಾರ್ ಆಗಲಿ, ಎಂ.ಎಸ್ ಗೋಲವಾಲ್ಕಾರ್ ಇಲ್ಲವೇ ಇತರ ಆರ್‌ಎಸ್‌ಎಸ್ ನಾಯಕರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ?” ಎಂದು ಪ್ರಶ್ನಿಸಿದ್ದಾರೆ.

“ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ನಾಯಕ ಯಾರೆಂದು ಜನ ತೀರ್ಮಾನ ಮಾಡುತ್ತಾರೆ, ನಾವೇ ಘೋಷಿಸಿಕೊಳ್ಳುವುದಲ್ಲ. ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ ಕನಿಷ್ಠ ಶೇ. 20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ. 3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಿದರೆ ಏನು ಲಾಭ?” ಎಂದು ಅವರು ಕೇಳಿದ್ದಾರೆ.

“ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಒಪ್ಪಿಕೊಳ್ಳಲಿ. ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಅವರು ಎಲ್ಲಿದ್ದರು. ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮಠದ ಉದ್ಘಾಟನಾ ಸಭೆಗೂ ಅವರು ಆಗ ಬಂದಿರಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

“ಉಡುಪಿಯ ಕನಕ ಗೋಪುರ ಕೆಡವಿದಾಗ ಈಶ್ವರಪ್ಪ ಎಲ್ಲಿ ಹೋಗಿದ್ದರು? ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ? ರಾಜ್ಯ ಸಭಾ ಸದಸ್ಯರಾಗಿದ್ದ ರಾಮಾ ಜೋಯಿಸರು ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಎಲ್ಲಿದ್ದರು. ಬಿಜೆಪಿಯಲ್ಲಿ ಆಗ ಈಶ್ವರಪ್ಪ ಇದ್ದರಲ್ಲವೇ? ಏಕೆ ವಿರೋಧ ಮಾಡಲಿಲ್ಲ ಈಗ ಇದ್ದಕ್ಕಿಂದ್ದರೆ ಈಶ್ವರಪ್ಪ ಅವರಿಗೆ ಕುರುಬರ ಮೇಲೆ ಪ್ರೀತಿ ಬಂದಿದೆ. ಅವರು ಹೋರಾಟ ಮಾಡಲಿ. ಬೇಡ ಎನ್ನುವುದಿಲ್ಲ. ಮೊದಲು ಬೀದರ್, ಕಲಬರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ” ಎಂದು ಆಗ್ರಹಿಸಿದ್ದಾರೆ.

“ಈಶ್ವರಪ್ಪ ಅವರು ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಈಶ್ವರಪ್ಪ ಅವರು ಎಲ್ಲಿ ಬಿಟ್ಟರು? ಹೀಗೆ ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್‌ಎಸ್‌ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್‌ಎಸ್‌ಎಸ್, ಬಿಜೆಪಿಯವರ ಹುನ್ನಾರವಿದೆ” ಎಂದು ಎಂದ ಅವರು ತಿಳಿಸಿದ್ದಾರೆ.

ಗೋಹತ್ಯೆ ನಿಷೇಧ ಬಿಜೆಪಿ ಆಡಳಿತದ ಗೋವಾದಲ್ಲಿ ಯಾಕಿಲ್ಲ?

“ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ. ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ – ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನ ಒಳ ಒಪ್ಪಂದದಿಂದ ಉಪಚುನಾವಣೆಯನ್ನು ಗೆಲ್ಲಲಾಗಿದೆ: ಸಿದ್ದರಾಮಯ್ಯ

“ಲವ್ ಜಿಹಾದ್ ನಿಷೇಧದಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ” ಎಂದು ಅವರು ತಿಳಿಸಿದ್ದಾರೆ.

“ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ಅವರು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು? ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ?” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿದ್ದಾರೆ.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...