Homeರಾಷ್ಟ್ರೀಯಪ್ರವಾದಿ ನಿಂದನೆ ವಿವಾದ ಹಿನ್ನಲೆ: ಪಕ್ಷದ ಪರವಾಗಿ ಚರ್ಚೆಗಳಲ್ಲಿ ಭಾಗವಹಿಸುವವರಿಗೆ ಹೊಸ ನಿಯಮ ಹೇರಿದ ಬಿಜೆಪಿ

ಪ್ರವಾದಿ ನಿಂದನೆ ವಿವಾದ ಹಿನ್ನಲೆ: ಪಕ್ಷದ ಪರವಾಗಿ ಚರ್ಚೆಗಳಲ್ಲಿ ಭಾಗವಹಿಸುವವರಿಗೆ ಹೊಸ ನಿಯಮ ಹೇರಿದ ಬಿಜೆಪಿ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದ ಪಕ್ಷದ ನಾಯಕಿ, ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಯ ನಂತರ ಒಕ್ಕೂಟ ಸರ್ಕಾರವು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಒತ್ತಡಕ್ಕೆ ಸಿಲುಕಿದೆ. ಈ ನಡುವೆ ಆಡಳಿತಾರೂಢ ಬಿಜೆಪಿ ತನ್ನ ಪಕ್ಷದ ವಕ್ತಾರರು ಮತ್ತು ಟಿವಿ ಚರ್ಚೆಗಳಲ್ಲಿ ಭಾಗವಹಿಸುವ ನಾಯಕರಿಗೆ ಹೊಸ ನಿಯಮಗಳನ್ನು ನಿಗದಿಪಡಿಸಿದೆ.

ಅಧಿಕೃತ ವಕ್ತಾರರು ಮತ್ತು ಪ್ಯಾನೆಲಿಸ್ಟ್‌ಗಳು ಮಾತ್ರ ಟಿವಿ ಚರ್ಚೆಗಳಲ್ಲಿ ಭಾಗವಹಿಸುವುದಾಗಿ ಬಿಜೆಪಿ ಮೂಲಗಳು ಹೇಳಿದ್ದು, ಅವರನ್ನು ಮಾಧ್ಯಮ ಸೆಲ್ ನಿಯೋಜಿಸುತ್ತದೆ. ಹೀಗೆ ಭಾಗವಹಿಸುವರಿಗೆ ಯಾವುದೇ ಧರ್ಮ, ಅದರ ಚಿಹ್ನೆಗಳು ಅಥವಾ ಧಾರ್ಮಿಕ ವ್ಯಕ್ತಿಗಳನ್ನು ಟೀಕಿಸದಂತೆ ಎಚ್ಚರಿಕೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೀವ್ರ ಚರ್ಚೆಯ ವೇಳೆ ಕೂಡಾ ಬಿಜೆಪಿ ಪ್ಯಾನೆಲಿಸ್ಟ್‌ಗಳು ತಮ್ಮ ಗಡಿಯನ್ನು ದಾಟದಂತೆ ನಿರ್ಬಂಧ ಹೇರಲಾಗಿದ್ದು, ಅವರು ತಮ್ಮ ಭಾಷೆಯನ್ನು ಸಂಯಮದಲ್ಲಿಟ್ಟುಕೊಳ್ಳಬೇಕು ಎಂದು ಬಿಜೆಪಿ ಹೇಳಿದೆ. ಯಾವುದೇ ಸಮಯದಲ್ಲಿ ಉದ್ರೇಕಗೊಳ್ಳಬಾರದು ಎಂದು ಪಕ್ಷವು ತಿಳಿಸಿದ್ದು, ಯಾವುದೇ ಪ್ರಚೋದನೆಗೂ ಪಕ್ಷದ ಸಿದ್ಧಾಂತ ಅಥವಾ ಆದರ್ಶಗಳನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಪಕ್ಷವು ತನ್ನ ನಿಯಮದಲ್ಲಿ ಹೇಳಿದೆ.

ಇದನ್ನೂ ಓದಿ: ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ವ್ಯಂಗ್ಯ

ಟಿವಿ ಚರ್ಚೆಯ ವಿಷಯವನ್ನು ಮೊದಲು ಪರಿಶೀಲಿಸಿ, ಅದಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಚಾನೆಲ್‌ನಲ್ಲಿ ಕಾಣಿಸಿಕೊಳ್ಳುವ ಮೊದಲು ಅದರ ಬಗ್ಗೆ ಪಕ್ಷದ ನಿಲುವೇನು ಎಂದು ತಿಳಿದುಕೊಳ್ಳುವಂತೆ ಬಿಜೆಪಿ ತನ್ನ ವಕ್ತಾರರಿಗೆ ಆದೇಶಿಸಿದೆ.

“ಪಕ್ಷದ ವಕ್ತಾರರು ಮತ್ತು ಪ್ಯಾನೆಲಿಸ್ಟ್‌ಗಳು ತಮ್ಮ ಅಜೆಂಡಾದಲ್ಲಿ ಉಳಿಯಬೇಕು. ಅವರು ಯಾವುದೇ ಬಲೆಗೆ ಬೀಳಬಾರದು” ಎಂದು ಪಕ್ಷವು ಹೇಳಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ತನ್ನ ವಕ್ತಾರರು ಸರ್ಕಾರದ ಸಮಾಜ ಕಲ್ಯಾಣ ಕಾರ್ಯಗಳತ್ತ ಗಮನ ಹರಿಸಬೇಕೆಂದು ಬಿಜೆಪಿ ಬಯಸುತ್ತಿದೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಸುಮಾರು 10 ದಿನಗಳ ಹಿಂದೆ ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಇದರ ನಂತರ ಪಕ್ಷದ ಮತ್ತೊಬ್ಬ ನಾಯಕ ನವೀನ್ ಜಿಂದಾಲ್ ಪ್ರವಾದಿ ಕುರಿತು ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಚರಂಡಿಯಲ್ಲಿ ಇರಬೇಕಾದವನನ್ನು ಬಿಸಿ ನಾಗೇಶ್‌ ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಮಾಡಿದ್ದಾರೆ: ಬಿಕೆ ಹರಿಪ್ರಸಾದ್ ವಾಗ್ದಾಳಿ

ತನ್ನ ನಾಯಕರ ಹೇಳಿಕೆಯನ್ನು ಪಕ್ಷವು ಖಂಡಿಸಿದ್ದು ನೂಪುರ್‌ ಅವರನ್ನು ಅಮಾನತು ಮಾಡಿದ್ದು, ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಒಕ್ಕೂಟ ಸರ್ಕಾರ ಈ ವಿವಾದಾತ್ಮಕ ಹೇಳಿಕೆಗಳಿಂದ ಅಂತರ ಕಾಯ್ದುಕೊಂಡಿದ್ದು, ಅವರನ್ನು “ಫ್ರಿಂಜ್ ಎಲಿಮೆಂಟ್‌ಗಳು” ಎಂದು ಕರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...