Homeಮುಖಪುಟಚೀನಾ ಅತಿಕ್ರಮಣ ಪ್ರಶ್ನಿಸಲು ಬೀಜಿಂಗ್‌ ಜನತಾ ಪಾರ್ಟಿಗೆ ಹಿಂಜರಿಕೆ: ಬಿಜೆಪಿ ವಿರುದ್ಧ ಖರ್ಗೆ ವ್ಯಂಗ್ಯ

ಚೀನಾ ಅತಿಕ್ರಮಣ ಪ್ರಶ್ನಿಸಲು ಬೀಜಿಂಗ್‌ ಜನತಾ ಪಾರ್ಟಿಗೆ ಹಿಂಜರಿಕೆ: ಬಿಜೆಪಿ ವಿರುದ್ಧ ಖರ್ಗೆ ವ್ಯಂಗ್ಯ

- Advertisement -
- Advertisement -

ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ. ನಮ್ಮ ಪ್ರದೇಶದಲ್ಲಿ ಚೀನಾ ಎರಡು ಗ್ರಾಮಗಳನ್ನು ನಿರ್ಮಿಸಿದೆ ಎಂದು ಉಪಗ್ರಹ ಚಿತ್ರಗಳು ಇತ್ತೀಚೆಗೆ ಬಯಲು ಮಾಡಿವೆ ಎಂದು ಖರ್ಗೆ ಟ್ವೀಟ್‌ ಮಾಡಿದ್ದು, ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಬೀಜಿಂಗ್ ಜನತಾ ಪಕ್ಷದ (ಬಿಜೆಪಿ) ನಾಯಕರು ಚೀನಾದ ಹೆಸರು ಹೇಳಲೂ ಹಿಂಜರಿಯುತ್ತಾರೆ! ಚೀನಾ ಮಾಡಿರುವ ಭೂ ಅತಿಕ್ರಮಣದ ವಿಚಾರವನ್ನು ನಿರಾಕರಿಸುವ, ಆ ವಿಚಾರವನ್ನು ಚರ್ಚೆಯಿಂದ ದೂರ ಉಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘ದಕ್ಷಿಣ ಟಿಬೆಟ್’ ಎಂದು ಕರೆಯಲ್ಪಡುವ ಅರುಣಾಚಲ ಪ್ರದೇಶ ರಾಜ್ಯದಲ್ಲಿ ಇರುವ ವಸತಿ ಪ್ರದೇಶಗಳು, ಪರ್ವತಗಳು, ನದಿಗಳು ಮತ್ತು ಮೌಂಟೇನ್ ಪಾಸ್ ಸೇರಿದಂತೆ 15 ಸ್ಥಳಗಳಿಗೆ ಚೀನಾ ಗುರುವಾರ ‘ಮರುನಾಮಕರಣ’ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಭೂ ಗಡಿ ಕಾನೂನು’ ಜನವರಿ 1ರಿಂದ ಜಾರಿಗೆ ಬರಲಿದ್ದು, ಇದಕ್ಕೆ ಮುಂಚಿತವಾಗಿ ಈ ಬೆಳವಣಿಗೆ ಆಗಿರುವುದು ಆತಂಕ ತಂದಿದೆ. ಗಡಿ ನಿಯಂತ್ರಣವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಕಾನೂನು ಇದಾಗಿದ್ದು, ಚೀನಾದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ದೇಶಗಳಿಗೆ ಈ ಕಾನೂನು ನೇರವಾಗಿ ಸಂಬಂಧಿಸಿದೆ ಎಂದು ವರದಿಗಳಾಗಿವೆ.

ಭಾರತದ ಪ್ರದೇಶದೊಳಗೆ ಚೀನಾ ಅತಿಕ್ರಮಣ ಮಾಡುತ್ತಿರುವುದನ್ನು ಕಾಂಗ್ರೆಸ್ ನಾಯಕರು ಮೊದಲಿನಿಂದಲೂ ಪ್ರಶ್ನಿಸುತ್ತಲೇ ಬಂದಿದ್ದಾರೆ. ನವೆಂಬರ್‌ನಲ್ಲಿ ರಾಹುಲ್ ಗಾಂಧಿಯವರು ಈ ಕುರಿತು ಪ್ರಶ್ನಿಸಿದ್ದರು. “ಒಕ್ಕೂಟ ಸರ್ಕಾರವು ಚೀನಾದ ವಿರುದ್ದ ಯಾವುದೇ ತಂತ್ರವನ್ನು ಹೊಂದಿಲ್ಲದಿರುವುದರಿಂದ, ಭಾರತದ ರಾಷ್ಟ್ರೀಯ ಭದ್ರತೆಯು ‘ಕ್ಷಮಿಸಲಾಗದಷ್ಟು ರಾಜಿಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದರು.

‘56 ಇಂಚಿನ ಎದೆ’ ಎಂಬ ಉಲ್ಲೇಖದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ಮಿಸ್ಟರ್‌ 56 ಹೆದರುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದರು. ಸರ್ಕಾರ ಸುಳ್ಳುಗಳನ್ನೇ ಹೇಳುತ್ತಿರುವಾಗ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರ ಪರವಾಗಿ ತಾನು ನಿಲ್ಲುತ್ತೇನೆ ಎಂದು ಅವರು ತಿಳಿಸಿದ್ದರು.

ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರು ಚೀನಾ ಗಡಿ ಸಮಸ್ಯೆಯ ಬಗ್ಗೆ ವಿಭಿನ್ನ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ್ದರು.

ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ದೇಶವು ನೂರು ಮನೆಗಳುಳ್ಳ ಗ್ರಾಮ ನಿರ್ಮಾಣ ಮಾಡಿರುವುದನ್ನು ಮತ್ತು ಲೈನ್ ಆಫ್ ಕಂಟ್ರೋಲ್‌ನಲ್ಲಿ ಉದ್ವಿಗ್ವ ಸ್ಥಿತಿ ಇರುವುದನ್ನು ಅಮೆರಿಕ ರಕ್ಷಣಾ ವಿಭಾಗದ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿತ್ತು.

ವರದಿಯ ‘ಚೀನಾ-ಭಾರತ ಗಡಿ ಬಿಕ್ಕಟ್ಟು’ ಎಂಬ ಅಧ್ಯಾಯದಲ್ಲಿ 2020ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವು 100 ಮನೆಗಳ ಒಂದು ಹಳ್ಳಿಯನ್ನು ಸ್ವಾಯುತ್ತ ಟಿಬೇಟ್ ಮತ್ತು ಭಾರತದ ಅರುಣಾಚಲ ಪ್ರದೇಶದ ಲೈನ್ ಆಫ್ ಕಂಟ್ರೋಲ್‌ನ ವಿವಾದಿತ ಜಾಗದಲ್ಲಿ ನಿರ್ಮಿಸಿದೆ ಎಂದು ಬರೆಯಲಾಗಿತ್ತು. ವರದಿಯನ್ನು ಯುಎಸ್ ಕಾಂಗ್ರೆಸ್‌ಗೆ ಸಲ್ಲಿಸಲಾಗಿತ್ತು.

ಚೀನಾದ ಈ ನಡೆ ಮತ್ತು ಆ ಜಾಗದಲ್ಲಿ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಭಾರತೀಯ ಸರ್ಕಾರ ಮತ್ತು ಮಾಧ್ಯಮಗಳನ್ನು ದಿಗ್ಭ್ರಮೆಗೆ ದೂಡಿದೆ ಎಂದು ವರದಿ ಹೇಳಿತ್ತು. ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸೈನ್ಯದ ತುಕಡಿಯನ್ನು ದಶಕಕ್ಕೂ ಮೊದಲೇ ಚೀನಾ ದೇಶವು ನಿಯೋಜಿಸಿತ್ತು. ಆದರೆ 2020 ರಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಭಾರತಕ್ಕೆ ಸೇರಿದ ಪ್ರದೇಶದೊಳಗೆ ಚೀನಾವು ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಾಮವನ್ನೇ ನಿರ್ಮಾಣ ಮಾಡಿತ್ತು ಎನ್ನಲಾಗಿದೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...