Homeಮುಖಪುಟಚೀನಾ ಅತಿಕ್ರಮಣ ಪ್ರಶ್ನಿಸಲು ಬೀಜಿಂಗ್‌ ಜನತಾ ಪಾರ್ಟಿಗೆ ಹಿಂಜರಿಕೆ: ಬಿಜೆಪಿ ವಿರುದ್ಧ ಖರ್ಗೆ ವ್ಯಂಗ್ಯ

ಚೀನಾ ಅತಿಕ್ರಮಣ ಪ್ರಶ್ನಿಸಲು ಬೀಜಿಂಗ್‌ ಜನತಾ ಪಾರ್ಟಿಗೆ ಹಿಂಜರಿಕೆ: ಬಿಜೆಪಿ ವಿರುದ್ಧ ಖರ್ಗೆ ವ್ಯಂಗ್ಯ

- Advertisement -
- Advertisement -

ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ. ನಮ್ಮ ಪ್ರದೇಶದಲ್ಲಿ ಚೀನಾ ಎರಡು ಗ್ರಾಮಗಳನ್ನು ನಿರ್ಮಿಸಿದೆ ಎಂದು ಉಪಗ್ರಹ ಚಿತ್ರಗಳು ಇತ್ತೀಚೆಗೆ ಬಯಲು ಮಾಡಿವೆ ಎಂದು ಖರ್ಗೆ ಟ್ವೀಟ್‌ ಮಾಡಿದ್ದು, ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಬೀಜಿಂಗ್ ಜನತಾ ಪಕ್ಷದ (ಬಿಜೆಪಿ) ನಾಯಕರು ಚೀನಾದ ಹೆಸರು ಹೇಳಲೂ ಹಿಂಜರಿಯುತ್ತಾರೆ! ಚೀನಾ ಮಾಡಿರುವ ಭೂ ಅತಿಕ್ರಮಣದ ವಿಚಾರವನ್ನು ನಿರಾಕರಿಸುವ, ಆ ವಿಚಾರವನ್ನು ಚರ್ಚೆಯಿಂದ ದೂರ ಉಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘ದಕ್ಷಿಣ ಟಿಬೆಟ್’ ಎಂದು ಕರೆಯಲ್ಪಡುವ ಅರುಣಾಚಲ ಪ್ರದೇಶ ರಾಜ್ಯದಲ್ಲಿ ಇರುವ ವಸತಿ ಪ್ರದೇಶಗಳು, ಪರ್ವತಗಳು, ನದಿಗಳು ಮತ್ತು ಮೌಂಟೇನ್ ಪಾಸ್ ಸೇರಿದಂತೆ 15 ಸ್ಥಳಗಳಿಗೆ ಚೀನಾ ಗುರುವಾರ ‘ಮರುನಾಮಕರಣ’ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಭೂ ಗಡಿ ಕಾನೂನು’ ಜನವರಿ 1ರಿಂದ ಜಾರಿಗೆ ಬರಲಿದ್ದು, ಇದಕ್ಕೆ ಮುಂಚಿತವಾಗಿ ಈ ಬೆಳವಣಿಗೆ ಆಗಿರುವುದು ಆತಂಕ ತಂದಿದೆ. ಗಡಿ ನಿಯಂತ್ರಣವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಕಾನೂನು ಇದಾಗಿದ್ದು, ಚೀನಾದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ದೇಶಗಳಿಗೆ ಈ ಕಾನೂನು ನೇರವಾಗಿ ಸಂಬಂಧಿಸಿದೆ ಎಂದು ವರದಿಗಳಾಗಿವೆ.

ಭಾರತದ ಪ್ರದೇಶದೊಳಗೆ ಚೀನಾ ಅತಿಕ್ರಮಣ ಮಾಡುತ್ತಿರುವುದನ್ನು ಕಾಂಗ್ರೆಸ್ ನಾಯಕರು ಮೊದಲಿನಿಂದಲೂ ಪ್ರಶ್ನಿಸುತ್ತಲೇ ಬಂದಿದ್ದಾರೆ. ನವೆಂಬರ್‌ನಲ್ಲಿ ರಾಹುಲ್ ಗಾಂಧಿಯವರು ಈ ಕುರಿತು ಪ್ರಶ್ನಿಸಿದ್ದರು. “ಒಕ್ಕೂಟ ಸರ್ಕಾರವು ಚೀನಾದ ವಿರುದ್ದ ಯಾವುದೇ ತಂತ್ರವನ್ನು ಹೊಂದಿಲ್ಲದಿರುವುದರಿಂದ, ಭಾರತದ ರಾಷ್ಟ್ರೀಯ ಭದ್ರತೆಯು ‘ಕ್ಷಮಿಸಲಾಗದಷ್ಟು ರಾಜಿಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದರು.

‘56 ಇಂಚಿನ ಎದೆ’ ಎಂಬ ಉಲ್ಲೇಖದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ಮಿಸ್ಟರ್‌ 56 ಹೆದರುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದರು. ಸರ್ಕಾರ ಸುಳ್ಳುಗಳನ್ನೇ ಹೇಳುತ್ತಿರುವಾಗ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರ ಪರವಾಗಿ ತಾನು ನಿಲ್ಲುತ್ತೇನೆ ಎಂದು ಅವರು ತಿಳಿಸಿದ್ದರು.

ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರು ಚೀನಾ ಗಡಿ ಸಮಸ್ಯೆಯ ಬಗ್ಗೆ ವಿಭಿನ್ನ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ್ದರು.

ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ದೇಶವು ನೂರು ಮನೆಗಳುಳ್ಳ ಗ್ರಾಮ ನಿರ್ಮಾಣ ಮಾಡಿರುವುದನ್ನು ಮತ್ತು ಲೈನ್ ಆಫ್ ಕಂಟ್ರೋಲ್‌ನಲ್ಲಿ ಉದ್ವಿಗ್ವ ಸ್ಥಿತಿ ಇರುವುದನ್ನು ಅಮೆರಿಕ ರಕ್ಷಣಾ ವಿಭಾಗದ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿತ್ತು.

ವರದಿಯ ‘ಚೀನಾ-ಭಾರತ ಗಡಿ ಬಿಕ್ಕಟ್ಟು’ ಎಂಬ ಅಧ್ಯಾಯದಲ್ಲಿ 2020ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವು 100 ಮನೆಗಳ ಒಂದು ಹಳ್ಳಿಯನ್ನು ಸ್ವಾಯುತ್ತ ಟಿಬೇಟ್ ಮತ್ತು ಭಾರತದ ಅರುಣಾಚಲ ಪ್ರದೇಶದ ಲೈನ್ ಆಫ್ ಕಂಟ್ರೋಲ್‌ನ ವಿವಾದಿತ ಜಾಗದಲ್ಲಿ ನಿರ್ಮಿಸಿದೆ ಎಂದು ಬರೆಯಲಾಗಿತ್ತು. ವರದಿಯನ್ನು ಯುಎಸ್ ಕಾಂಗ್ರೆಸ್‌ಗೆ ಸಲ್ಲಿಸಲಾಗಿತ್ತು.

ಚೀನಾದ ಈ ನಡೆ ಮತ್ತು ಆ ಜಾಗದಲ್ಲಿ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಭಾರತೀಯ ಸರ್ಕಾರ ಮತ್ತು ಮಾಧ್ಯಮಗಳನ್ನು ದಿಗ್ಭ್ರಮೆಗೆ ದೂಡಿದೆ ಎಂದು ವರದಿ ಹೇಳಿತ್ತು. ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸೈನ್ಯದ ತುಕಡಿಯನ್ನು ದಶಕಕ್ಕೂ ಮೊದಲೇ ಚೀನಾ ದೇಶವು ನಿಯೋಜಿಸಿತ್ತು. ಆದರೆ 2020 ರಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಭಾರತಕ್ಕೆ ಸೇರಿದ ಪ್ರದೇಶದೊಳಗೆ ಚೀನಾವು ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಾಮವನ್ನೇ ನಿರ್ಮಾಣ ಮಾಡಿತ್ತು ಎನ್ನಲಾಗಿದೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...