Homeಮುಖಪುಟಚೀನಾ ಅತಿಕ್ರಮಣ ಪ್ರಶ್ನಿಸಲು ಬೀಜಿಂಗ್‌ ಜನತಾ ಪಾರ್ಟಿಗೆ ಹಿಂಜರಿಕೆ: ಬಿಜೆಪಿ ವಿರುದ್ಧ ಖರ್ಗೆ ವ್ಯಂಗ್ಯ

ಚೀನಾ ಅತಿಕ್ರಮಣ ಪ್ರಶ್ನಿಸಲು ಬೀಜಿಂಗ್‌ ಜನತಾ ಪಾರ್ಟಿಗೆ ಹಿಂಜರಿಕೆ: ಬಿಜೆಪಿ ವಿರುದ್ಧ ಖರ್ಗೆ ವ್ಯಂಗ್ಯ

- Advertisement -
- Advertisement -

ಅರುಣಾಚಲ ಪ್ರದೇಶದ 15 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ. ನಮ್ಮ ಪ್ರದೇಶದಲ್ಲಿ ಚೀನಾ ಎರಡು ಗ್ರಾಮಗಳನ್ನು ನಿರ್ಮಿಸಿದೆ ಎಂದು ಉಪಗ್ರಹ ಚಿತ್ರಗಳು ಇತ್ತೀಚೆಗೆ ಬಯಲು ಮಾಡಿವೆ ಎಂದು ಖರ್ಗೆ ಟ್ವೀಟ್‌ ಮಾಡಿದ್ದು, ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಬೀಜಿಂಗ್ ಜನತಾ ಪಕ್ಷದ (ಬಿಜೆಪಿ) ನಾಯಕರು ಚೀನಾದ ಹೆಸರು ಹೇಳಲೂ ಹಿಂಜರಿಯುತ್ತಾರೆ! ಚೀನಾ ಮಾಡಿರುವ ಭೂ ಅತಿಕ್ರಮಣದ ವಿಚಾರವನ್ನು ನಿರಾಕರಿಸುವ, ಆ ವಿಚಾರವನ್ನು ಚರ್ಚೆಯಿಂದ ದೂರ ಉಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘ದಕ್ಷಿಣ ಟಿಬೆಟ್’ ಎಂದು ಕರೆಯಲ್ಪಡುವ ಅರುಣಾಚಲ ಪ್ರದೇಶ ರಾಜ್ಯದಲ್ಲಿ ಇರುವ ವಸತಿ ಪ್ರದೇಶಗಳು, ಪರ್ವತಗಳು, ನದಿಗಳು ಮತ್ತು ಮೌಂಟೇನ್ ಪಾಸ್ ಸೇರಿದಂತೆ 15 ಸ್ಥಳಗಳಿಗೆ ಚೀನಾ ಗುರುವಾರ ‘ಮರುನಾಮಕರಣ’ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

‘ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಭೂ ಗಡಿ ಕಾನೂನು’ ಜನವರಿ 1ರಿಂದ ಜಾರಿಗೆ ಬರಲಿದ್ದು, ಇದಕ್ಕೆ ಮುಂಚಿತವಾಗಿ ಈ ಬೆಳವಣಿಗೆ ಆಗಿರುವುದು ಆತಂಕ ತಂದಿದೆ. ಗಡಿ ನಿಯಂತ್ರಣವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಕಾನೂನು ಇದಾಗಿದ್ದು, ಚೀನಾದೊಂದಿಗೆ ಭೂ ಗಡಿಯನ್ನು ಹಂಚಿಕೊಳ್ಳುವ ದೇಶಗಳಿಗೆ ಈ ಕಾನೂನು ನೇರವಾಗಿ ಸಂಬಂಧಿಸಿದೆ ಎಂದು ವರದಿಗಳಾಗಿವೆ.

ಭಾರತದ ಪ್ರದೇಶದೊಳಗೆ ಚೀನಾ ಅತಿಕ್ರಮಣ ಮಾಡುತ್ತಿರುವುದನ್ನು ಕಾಂಗ್ರೆಸ್ ನಾಯಕರು ಮೊದಲಿನಿಂದಲೂ ಪ್ರಶ್ನಿಸುತ್ತಲೇ ಬಂದಿದ್ದಾರೆ. ನವೆಂಬರ್‌ನಲ್ಲಿ ರಾಹುಲ್ ಗಾಂಧಿಯವರು ಈ ಕುರಿತು ಪ್ರಶ್ನಿಸಿದ್ದರು. “ಒಕ್ಕೂಟ ಸರ್ಕಾರವು ಚೀನಾದ ವಿರುದ್ದ ಯಾವುದೇ ತಂತ್ರವನ್ನು ಹೊಂದಿಲ್ಲದಿರುವುದರಿಂದ, ಭಾರತದ ರಾಷ್ಟ್ರೀಯ ಭದ್ರತೆಯು ‘ಕ್ಷಮಿಸಲಾಗದಷ್ಟು ರಾಜಿಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದರು.

‘56 ಇಂಚಿನ ಎದೆ’ ಎಂಬ ಉಲ್ಲೇಖದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ಮಿಸ್ಟರ್‌ 56 ಹೆದರುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದರು. ಸರ್ಕಾರ ಸುಳ್ಳುಗಳನ್ನೇ ಹೇಳುತ್ತಿರುವಾಗ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರ ಪರವಾಗಿ ತಾನು ನಿಲ್ಲುತ್ತೇನೆ ಎಂದು ಅವರು ತಿಳಿಸಿದ್ದರು.

ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರು ಚೀನಾ ಗಡಿ ಸಮಸ್ಯೆಯ ಬಗ್ಗೆ ವಿಭಿನ್ನ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ್ದರು.

ಭಾರತದ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ದೇಶವು ನೂರು ಮನೆಗಳುಳ್ಳ ಗ್ರಾಮ ನಿರ್ಮಾಣ ಮಾಡಿರುವುದನ್ನು ಮತ್ತು ಲೈನ್ ಆಫ್ ಕಂಟ್ರೋಲ್‌ನಲ್ಲಿ ಉದ್ವಿಗ್ವ ಸ್ಥಿತಿ ಇರುವುದನ್ನು ಅಮೆರಿಕ ರಕ್ಷಣಾ ವಿಭಾಗದ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿತ್ತು.

ವರದಿಯ ‘ಚೀನಾ-ಭಾರತ ಗಡಿ ಬಿಕ್ಕಟ್ಟು’ ಎಂಬ ಅಧ್ಯಾಯದಲ್ಲಿ 2020ರಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವು 100 ಮನೆಗಳ ಒಂದು ಹಳ್ಳಿಯನ್ನು ಸ್ವಾಯುತ್ತ ಟಿಬೇಟ್ ಮತ್ತು ಭಾರತದ ಅರುಣಾಚಲ ಪ್ರದೇಶದ ಲೈನ್ ಆಫ್ ಕಂಟ್ರೋಲ್‌ನ ವಿವಾದಿತ ಜಾಗದಲ್ಲಿ ನಿರ್ಮಿಸಿದೆ ಎಂದು ಬರೆಯಲಾಗಿತ್ತು. ವರದಿಯನ್ನು ಯುಎಸ್ ಕಾಂಗ್ರೆಸ್‌ಗೆ ಸಲ್ಲಿಸಲಾಗಿತ್ತು.

ಚೀನಾದ ಈ ನಡೆ ಮತ್ತು ಆ ಜಾಗದಲ್ಲಿ ಹಲವು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿರುವುದು ಭಾರತೀಯ ಸರ್ಕಾರ ಮತ್ತು ಮಾಧ್ಯಮಗಳನ್ನು ದಿಗ್ಭ್ರಮೆಗೆ ದೂಡಿದೆ ಎಂದು ವರದಿ ಹೇಳಿತ್ತು. ಈ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಸೈನ್ಯದ ತುಕಡಿಯನ್ನು ದಶಕಕ್ಕೂ ಮೊದಲೇ ಚೀನಾ ದೇಶವು ನಿಯೋಜಿಸಿತ್ತು. ಆದರೆ 2020 ರಲ್ಲಿ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಭಾರತಕ್ಕೆ ಸೇರಿದ ಪ್ರದೇಶದೊಳಗೆ ಚೀನಾವು ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಾಮವನ್ನೇ ನಿರ್ಮಾಣ ಮಾಡಿತ್ತು ಎನ್ನಲಾಗಿದೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...