Homeಮುಖಪುಟರಾಜಕಾರಣಿ ಎಂದರೆ ಫಾರ್ಚೂನರ್‌ ಕಾರನ್ನು ಯಾರ ಮೇಲಾದರೂ ಹರಿಸುವುದಲ್ಲ: ಯುಪಿ ಬಿಜೆಪಿ ಅಧ್ಯಕ್ಷ

ರಾಜಕಾರಣಿ ಎಂದರೆ ಫಾರ್ಚೂನರ್‌ ಕಾರನ್ನು ಯಾರ ಮೇಲಾದರೂ ಹರಿಸುವುದಲ್ಲ: ಯುಪಿ ಬಿಜೆಪಿ ಅಧ್ಯಕ್ಷ

ಲಖಿಂಪುರ್‌ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ಬಿಜೆಪಿ ನಾಯಕ ವರುಣ್ ಗಾಂಧಿ ನಂತರ, ಇದೀಗ ಮತ್ತೊಬ್ಬ ಬಿಜೆಪಿ ನಾಯಕ ಘಟನೆಯ ಬಗ್ಗೆ ಮಾತನಾಡಿದ್ದಾರೆ.

- Advertisement -
- Advertisement -

ಲಖಿಂಪುರ್‌ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ಬಿಜೆಪಿ ನಾಯಕ ವರುಣ್ ಗಾಂಧಿ ನಂತರ, ಇದೀಗ ಮತ್ತೊಬ್ಬ ಬಿಜೆಪಿ ನಾಯಕ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾಗಿರುವ ಸ್ವತಂತ್ರ ದೇವ್ ಸಿಂಗ್ ಅವರು, “ರಾಜಕೀಯ ನಾಯಕರಾಗಿರುವುದು ಎಂದರೆ, ಫಾರ್ಚುನರ್ ಕಾರಿನಿಂದ ಯಾರನ್ನಾದರೂ ಅಡಿಗೆ ಹಾಕುವುದಲ್ಲ” ಎಂದು ಭಾನುವಾರ ಹೇಳಿದ್ದಾರೆ.

ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ವರುಣ್ ಗಾಂಧಿ ಅವರನ್ನು ಪಕ್ಷವು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಿಂದ ಹೊರಕಾಕಿತ್ತು. ಅದಾಗಿಯು ಮತ್ತೊಬ್ಬ ಬಿಜೆಪಿ ನಾಯಕ ಲಿಖಿಂಪುರ್‌ ಘಟನೆ ಬಗ್ಗೆ ಮಾತನಾಡಿ, ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌: ಪ್ರಧಾನ ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ಸ್ವತಂತ್ರ ಸಿಂಗ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಪಕ್ಷದ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಅಧಿವೇಶನದಲ್ಲಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

“ಚುನಾವಣೆಗಳನ್ನು ನಡವಳಿಕೆಯ ಆಧಾರದ ಮೇಲೆ ಗೆಲ್ಲಬೇಕು. ರಾಜಕೀಯವು ನಿಮ್ಮ ಸಮಾಜಕ್ಕೆ, ನಿಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದಾಗಿದೆ. ಇದರಲ್ಲಿ ಯಾವುದೇ ಜಾತಿ ಮತ್ತು ಧರ್ಮವಿಲ್ಲ. ರಾಜಕೀಯ ನಾಯಕರಾಗುವುದೆಂದರೆ ಲೂಟಿ ಮಾಡುವುದಲ್ಲ ಹಾಗೂ ಫಾರ್ಚೂನರ್‌ನಿಂದ ಯಾರನ್ನಾದರೂ ಅಡಿಗೆ ಹಾಕುವುದಲ್ಲ. ನಾವು ಬಡವರ ಸೇವೆಗಾಗಿ ಪಕ್ಷದಲ್ಲಿ ಈ ಇದ್ದೇವೆ. ರಾಜಕೀಯವೆಂದರೆ ಅರೆಕಾಲಿಕ ಕೆಲಸವಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌: 2 ನೇ FIR ನಲ್ಲಿ ರೈತರ ಮೇಲೆಯೇ ಆರೋಪ; ರೈತರ ಸಾವಿನ ಬಗ್ಗೆ ಉಲ್ಲೇಖವಿಲ್ಲ!

ತನ್ನ ಭಾಷಣದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿದ್ದು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಒಂದು ದಶಕದಿಂದ ರಾಷ್ಟ್ರವನ್ನು ಲೂಟಿ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಅವರು ಕಾರು ಹರಿಸಿ ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಬಂಧನವು ಆಗಿದೆ. ಇದರ ಮಧ್ಯೆ ಸ್ವತಂತ್ರ ಸಿಂಗ್ ಅವರ ಹೇಳಿಕೆ ಹೊರ ಬಿದ್ದಿದೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸೇರಿದಂತೆ ಇತರ ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆಗಾಗಿ ತಯಾರಿ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: ಲಖಿಂಪುರ್‌: ಪತ್ರಕರ್ತ ಮತ್ತು ರೈತರ ಕುಟುಂಬಗಳಿಗೆ 50 ಲಕ್ಷ ರೂ ನೀಡುವುದಾಗಿ ಘೋಷಿಸಿದ ಛತ್ತೀಸ್‌ಗಡ, ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...