Homeಮುಖಪುಟರಾಜಕಾರಣಿ ಎಂದರೆ ಫಾರ್ಚೂನರ್‌ ಕಾರನ್ನು ಯಾರ ಮೇಲಾದರೂ ಹರಿಸುವುದಲ್ಲ: ಯುಪಿ ಬಿಜೆಪಿ ಅಧ್ಯಕ್ಷ

ರಾಜಕಾರಣಿ ಎಂದರೆ ಫಾರ್ಚೂನರ್‌ ಕಾರನ್ನು ಯಾರ ಮೇಲಾದರೂ ಹರಿಸುವುದಲ್ಲ: ಯುಪಿ ಬಿಜೆಪಿ ಅಧ್ಯಕ್ಷ

ಲಖಿಂಪುರ್‌ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ಬಿಜೆಪಿ ನಾಯಕ ವರುಣ್ ಗಾಂಧಿ ನಂತರ, ಇದೀಗ ಮತ್ತೊಬ್ಬ ಬಿಜೆಪಿ ನಾಯಕ ಘಟನೆಯ ಬಗ್ಗೆ ಮಾತನಾಡಿದ್ದಾರೆ.

- Advertisement -
- Advertisement -

ಲಖಿಂಪುರ್‌ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ಬಿಜೆಪಿ ನಾಯಕ ವರುಣ್ ಗಾಂಧಿ ನಂತರ, ಇದೀಗ ಮತ್ತೊಬ್ಬ ಬಿಜೆಪಿ ನಾಯಕ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾಗಿರುವ ಸ್ವತಂತ್ರ ದೇವ್ ಸಿಂಗ್ ಅವರು, “ರಾಜಕೀಯ ನಾಯಕರಾಗಿರುವುದು ಎಂದರೆ, ಫಾರ್ಚುನರ್ ಕಾರಿನಿಂದ ಯಾರನ್ನಾದರೂ ಅಡಿಗೆ ಹಾಕುವುದಲ್ಲ” ಎಂದು ಭಾನುವಾರ ಹೇಳಿದ್ದಾರೆ.

ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ವರುಣ್ ಗಾಂಧಿ ಅವರನ್ನು ಪಕ್ಷವು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಿಂದ ಹೊರಕಾಕಿತ್ತು. ಅದಾಗಿಯು ಮತ್ತೊಬ್ಬ ಬಿಜೆಪಿ ನಾಯಕ ಲಿಖಿಂಪುರ್‌ ಘಟನೆ ಬಗ್ಗೆ ಮಾತನಾಡಿ, ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌: ಪ್ರಧಾನ ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ಸ್ವತಂತ್ರ ಸಿಂಗ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಪಕ್ಷದ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಅಧಿವೇಶನದಲ್ಲಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

“ಚುನಾವಣೆಗಳನ್ನು ನಡವಳಿಕೆಯ ಆಧಾರದ ಮೇಲೆ ಗೆಲ್ಲಬೇಕು. ರಾಜಕೀಯವು ನಿಮ್ಮ ಸಮಾಜಕ್ಕೆ, ನಿಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದಾಗಿದೆ. ಇದರಲ್ಲಿ ಯಾವುದೇ ಜಾತಿ ಮತ್ತು ಧರ್ಮವಿಲ್ಲ. ರಾಜಕೀಯ ನಾಯಕರಾಗುವುದೆಂದರೆ ಲೂಟಿ ಮಾಡುವುದಲ್ಲ ಹಾಗೂ ಫಾರ್ಚೂನರ್‌ನಿಂದ ಯಾರನ್ನಾದರೂ ಅಡಿಗೆ ಹಾಕುವುದಲ್ಲ. ನಾವು ಬಡವರ ಸೇವೆಗಾಗಿ ಪಕ್ಷದಲ್ಲಿ ಈ ಇದ್ದೇವೆ. ರಾಜಕೀಯವೆಂದರೆ ಅರೆಕಾಲಿಕ ಕೆಲಸವಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌: 2 ನೇ FIR ನಲ್ಲಿ ರೈತರ ಮೇಲೆಯೇ ಆರೋಪ; ರೈತರ ಸಾವಿನ ಬಗ್ಗೆ ಉಲ್ಲೇಖವಿಲ್ಲ!

ತನ್ನ ಭಾಷಣದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿದ್ದು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಒಂದು ದಶಕದಿಂದ ರಾಷ್ಟ್ರವನ್ನು ಲೂಟಿ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಅವರು ಕಾರು ಹರಿಸಿ ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಬಂಧನವು ಆಗಿದೆ. ಇದರ ಮಧ್ಯೆ ಸ್ವತಂತ್ರ ಸಿಂಗ್ ಅವರ ಹೇಳಿಕೆ ಹೊರ ಬಿದ್ದಿದೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸೇರಿದಂತೆ ಇತರ ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆಗಾಗಿ ತಯಾರಿ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: ಲಖಿಂಪುರ್‌: ಪತ್ರಕರ್ತ ಮತ್ತು ರೈತರ ಕುಟುಂಬಗಳಿಗೆ 50 ಲಕ್ಷ ರೂ ನೀಡುವುದಾಗಿ ಘೋಷಿಸಿದ ಛತ್ತೀಸ್‌ಗಡ, ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...