Homeಮುಖಪುಟರಾಜಕಾರಣಿ ಎಂದರೆ ಫಾರ್ಚೂನರ್‌ ಕಾರನ್ನು ಯಾರ ಮೇಲಾದರೂ ಹರಿಸುವುದಲ್ಲ: ಯುಪಿ ಬಿಜೆಪಿ ಅಧ್ಯಕ್ಷ

ರಾಜಕಾರಣಿ ಎಂದರೆ ಫಾರ್ಚೂನರ್‌ ಕಾರನ್ನು ಯಾರ ಮೇಲಾದರೂ ಹರಿಸುವುದಲ್ಲ: ಯುಪಿ ಬಿಜೆಪಿ ಅಧ್ಯಕ್ಷ

ಲಖಿಂಪುರ್‌ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ಬಿಜೆಪಿ ನಾಯಕ ವರುಣ್ ಗಾಂಧಿ ನಂತರ, ಇದೀಗ ಮತ್ತೊಬ್ಬ ಬಿಜೆಪಿ ನಾಯಕ ಘಟನೆಯ ಬಗ್ಗೆ ಮಾತನಾಡಿದ್ದಾರೆ.

- Advertisement -
- Advertisement -

ಲಖಿಂಪುರ್‌ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ಬಿಜೆಪಿ ನಾಯಕ ವರುಣ್ ಗಾಂಧಿ ನಂತರ, ಇದೀಗ ಮತ್ತೊಬ್ಬ ಬಿಜೆಪಿ ನಾಯಕ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾಗಿರುವ ಸ್ವತಂತ್ರ ದೇವ್ ಸಿಂಗ್ ಅವರು, “ರಾಜಕೀಯ ನಾಯಕರಾಗಿರುವುದು ಎಂದರೆ, ಫಾರ್ಚುನರ್ ಕಾರಿನಿಂದ ಯಾರನ್ನಾದರೂ ಅಡಿಗೆ ಹಾಕುವುದಲ್ಲ” ಎಂದು ಭಾನುವಾರ ಹೇಳಿದ್ದಾರೆ.

ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ವರುಣ್ ಗಾಂಧಿ ಅವರನ್ನು ಪಕ್ಷವು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಿಂದ ಹೊರಕಾಕಿತ್ತು. ಅದಾಗಿಯು ಮತ್ತೊಬ್ಬ ಬಿಜೆಪಿ ನಾಯಕ ಲಿಖಿಂಪುರ್‌ ಘಟನೆ ಬಗ್ಗೆ ಮಾತನಾಡಿ, ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌: ಪ್ರಧಾನ ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ಸ್ವತಂತ್ರ ಸಿಂಗ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಪಕ್ಷದ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಅಧಿವೇಶನದಲ್ಲಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

“ಚುನಾವಣೆಗಳನ್ನು ನಡವಳಿಕೆಯ ಆಧಾರದ ಮೇಲೆ ಗೆಲ್ಲಬೇಕು. ರಾಜಕೀಯವು ನಿಮ್ಮ ಸಮಾಜಕ್ಕೆ, ನಿಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದಾಗಿದೆ. ಇದರಲ್ಲಿ ಯಾವುದೇ ಜಾತಿ ಮತ್ತು ಧರ್ಮವಿಲ್ಲ. ರಾಜಕೀಯ ನಾಯಕರಾಗುವುದೆಂದರೆ ಲೂಟಿ ಮಾಡುವುದಲ್ಲ ಹಾಗೂ ಫಾರ್ಚೂನರ್‌ನಿಂದ ಯಾರನ್ನಾದರೂ ಅಡಿಗೆ ಹಾಕುವುದಲ್ಲ. ನಾವು ಬಡವರ ಸೇವೆಗಾಗಿ ಪಕ್ಷದಲ್ಲಿ ಈ ಇದ್ದೇವೆ. ರಾಜಕೀಯವೆಂದರೆ ಅರೆಕಾಲಿಕ ಕೆಲಸವಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌: 2 ನೇ FIR ನಲ್ಲಿ ರೈತರ ಮೇಲೆಯೇ ಆರೋಪ; ರೈತರ ಸಾವಿನ ಬಗ್ಗೆ ಉಲ್ಲೇಖವಿಲ್ಲ!

ತನ್ನ ಭಾಷಣದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿದ್ದು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಒಂದು ದಶಕದಿಂದ ರಾಷ್ಟ್ರವನ್ನು ಲೂಟಿ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಅವರು ಕಾರು ಹರಿಸಿ ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಬಂಧನವು ಆಗಿದೆ. ಇದರ ಮಧ್ಯೆ ಸ್ವತಂತ್ರ ಸಿಂಗ್ ಅವರ ಹೇಳಿಕೆ ಹೊರ ಬಿದ್ದಿದೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸೇರಿದಂತೆ ಇತರ ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆಗಾಗಿ ತಯಾರಿ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: ಲಖಿಂಪುರ್‌: ಪತ್ರಕರ್ತ ಮತ್ತು ರೈತರ ಕುಟುಂಬಗಳಿಗೆ 50 ಲಕ್ಷ ರೂ ನೀಡುವುದಾಗಿ ಘೋಷಿಸಿದ ಛತ್ತೀಸ್‌ಗಡ, ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...