Homeಮುಖಪುಟಮೈಕ್ ಆಫ್ ಮಾಡಿರುವುದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ, ಅವಮಾನ ಮಾಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

ಮೈಕ್ ಆಫ್ ಮಾಡಿರುವುದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ, ಅವಮಾನ ಮಾಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ರಾಜ್ಯಸಭೆಯ ಕಲಾಪದಲ್ಲಿ ಮಾತನಾಡುವಾಗ ಮೈಕ್ ಆಫ್ ಮಾಡಿದ್ದರ ಬಗ್ಗೆ ಬುಧವಾರ ಪ್ರಸ್ತಾಪಿಸಿದ್ದು, ನನ್ನ ಮೈಕ್ ಆಫ್ ಮಾಡುವ ಮೂಲಕ ನನ್ನ “ಸ್ವಾಭಿಮಾನಕ್ಕೆ ಸವಾಲು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಮಂಗಳವಾರ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್​ ಆಫ್​​ ಮಾಡಿದ ಕುರಿತು ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಪ್ರತಿಭಟಿಸಿ ಸಭಾತ್ಯಾಗ ಮಾಡಿದ್ದವು.

ಮಣಿಪುರದಲ್ಲಿ ಮೂರು ತಿಂಗಳ ಕಾಲ ನಡೆದ ಜನಾಂಗೀಯ ಘರ್ಷಣೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಎತ್ತುವುದರೊಂದಿಗೆ ಸದನದಲ್ಲಿ ಗದ್ದಲದ ನಡುವೆಯೇ ಈ ಕ್ರಮವು ನಡೆಯಿತು. ಇದಕ್ಕೆ ಪ್ರತಿಯಾಗಿ ಆಡಳಿತಾರೂಢ ಬಿಜೆಪಿ ನೇತೃತ್ವದ ಮೈತ್ರಿಕೂಟದ ಸದಸ್ಯರು ‘ಮೋದಿ, ಮೋದಿ’ ಎಂದು ಘೋಷಣೆ ಕೂಗಿ ಸದನವನ್ನು ಗೊಂದಲದಲ್ಲಿ ಮುಳುಗಿಸಿದರು. ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

ಈ ಕುರಿತು ಬುಧವಾರ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು, ”ನನ್ನ ಸ್ವಾಭಿಮಾನಕ್ಕೆ ಧಕ್ಕೆ ಉಂಟಾಗಿದೆ. ಮಣಿಪುರದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಜನಾಂಗೀಯ ಘರ್ಷಣೆ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದೆವು. ಆದರೆ, ಮಾತನಾಡುವ ವೇಳೆ ಮೈಕ್​ ಆಫ್​​ ಮಾಡಿರುವ ಕ್ರಮ ಸರಿಯಲ್ಲ” ಎಂದು ಕಿಡಿಕಾರಿದ್ಧಾರೆ.

”ನಾನು ನನ್ನ ಸಮಸ್ಯೆಗಳನ್ನು ಸದನದ ಮುಂದೆ ಇಡುತ್ತಿದ್ದೆ ಮತ್ತು 267ರ ಮೇಲೆ 50 ಜನರು ನೋಟಿಸ್ ನೀಡಿದಾಗ ಸಂಸತ್ತಿನಲ್ಲಿ ಮಾತನಾಡಲು ನನಗೆ ಅವಕಾಶ ಸಿಗಲಿಲ್ಲ. ಆದರೆ ನಾನು ಮಾತನಾಡುವಾಗ ನನ್ನ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಗಿದೆ. ಈ ಮೂಲಕ ನನ್ನ ಅವಕಾಶಗಳನ್ನು ಕಿತ್ತುಕೊಳ್ಳಲಾಗಿದೆ. ಇದು ನನಗೆ ಮಾಡಿದ ಅವಮಾನ, ನನ್ನ ಸ್ವಾಭಿಮಾನಕ್ಕೆ ಸವಾಲು ಹಾಕಿದ್ದಾರೆ. ಸರ್ಕಾರದ ಸೂಚನೆಯ ಮೇರೆಗೆ ಸದನ ನಡೆಸಿದರೆ, ಅದು ಪ್ರಜಾಪ್ರಭುತ್ವವಲ್ಲ” ಎಂದು ಖರ್ಗೆ ಹೇಳಿದ್ದಾರೆ.

ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಖರ್ಗೆ ಅವರು ಭಾಷಣವನ್ನು ಮಧ್ಯದಲ್ಲಿ ಅಡ್ಡಿಪಡಿಸಿದ ನಂತರ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಇದು ಪ್ರತಿಪಕ್ಷ ಸದಸ್ಯರ ತಕ್ಷಣದ ಗದ್ದಲಕ್ಕೆ ಕಾರಣವಾಯಿತು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಎಲ್ಲರಿಗೂ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳಲು ಹೇಳಿದರು.

ಸಂಸದರು ತಮ್ಮ ಹಿಂದಿನ ಸಾಲಿನಲ್ಲಿ ನಿಂತಿದ್ದಾರೆ ೆನ್ನುವುದನ್ನು ಗಮನಿಸಿದ ಖರ್ಗೆ ಅವರು, ”ಅವರು ನನ್ನ ಹಿಂದೆ ನಿಲ್ಲಬಾರದು ಎಂದರೆ ಅವರು ಹೋಗಿ ಮೋದಿ ಹಿಂದೆ ನಿಲ್ಲಬೇಕೇ?” ಎಂದು ಕೇಳಿದರು.

ಶಾಂತಿಯಿಂದ ಕಲಾಪ ನಡೆಯಲು ಅವಕಾಶ ಮಾಡಿಕೊಡಬೇಕು ಎಂದು ಧನಕರ್‌ ಅವರು ಖರ್ಗೆ ಮತ್ತು ಸಭಾನಾಯಕ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದರು.

ಮೈಕ್ ಆಫ್ ಮಾಡಿಲ್ಲ ಎಂದು ಹೇಳಿದ ಸಭಾಪತಿಗಳು, ಸದನವು ಶಾಸಕಾಂಗ ವಿಷಯದ ಬಗ್ಗೆ ಚರ್ಚೆ ನಡೆಸುತ್ತಿದ್ದಾಗ  ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಲಾಯಿತು ಎಂದು ಹೇಳಿದರು.

ಮುಂಗಾರು ಅಧಿವೇಶನದ ಆರಂಭದಿಂದಲೂ ಸಂಸತ್ತಿನಲ್ಲಿ ನಿರಂತರ ಸ್ತಬ್ಧತೆಗೆ ಕಾರಣವಾಗಿರುವ ವಿವಾದದ ಕೇಂದ್ರ ಬಿಂದುವಾದ ಮಣಿಪುರದಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಸಂಸದರು ನೋಟಿಸ್‌ಗಳನ್ನು ಮಂಡಿಸಿದ್ದರಿಂದ ಅಧಿವೇಶನದಲ್ಲಿ ಗದ್ದಲ ನಡೆಯಿತು.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್: ವಿಪಕ್ಷಗಳ ಸಭಾತ್ಯಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...