Homeಮುಖಪುಟಮೈಕ್ ಆಫ್ ಮಾಡಿರುವುದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ, ಅವಮಾನ ಮಾಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

ಮೈಕ್ ಆಫ್ ಮಾಡಿರುವುದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ, ಅವಮಾನ ಮಾಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ರಾಜ್ಯಸಭೆಯ ಕಲಾಪದಲ್ಲಿ ಮಾತನಾಡುವಾಗ ಮೈಕ್ ಆಫ್ ಮಾಡಿದ್ದರ ಬಗ್ಗೆ ಬುಧವಾರ ಪ್ರಸ್ತಾಪಿಸಿದ್ದು, ನನ್ನ ಮೈಕ್ ಆಫ್ ಮಾಡುವ ಮೂಲಕ ನನ್ನ “ಸ್ವಾಭಿಮಾನಕ್ಕೆ ಸವಾಲು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಮಂಗಳವಾರ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್​ ಆಫ್​​ ಮಾಡಿದ ಕುರಿತು ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಪ್ರತಿಭಟಿಸಿ ಸಭಾತ್ಯಾಗ ಮಾಡಿದ್ದವು.

ಮಣಿಪುರದಲ್ಲಿ ಮೂರು ತಿಂಗಳ ಕಾಲ ನಡೆದ ಜನಾಂಗೀಯ ಘರ್ಷಣೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಎತ್ತುವುದರೊಂದಿಗೆ ಸದನದಲ್ಲಿ ಗದ್ದಲದ ನಡುವೆಯೇ ಈ ಕ್ರಮವು ನಡೆಯಿತು. ಇದಕ್ಕೆ ಪ್ರತಿಯಾಗಿ ಆಡಳಿತಾರೂಢ ಬಿಜೆಪಿ ನೇತೃತ್ವದ ಮೈತ್ರಿಕೂಟದ ಸದಸ್ಯರು ‘ಮೋದಿ, ಮೋದಿ’ ಎಂದು ಘೋಷಣೆ ಕೂಗಿ ಸದನವನ್ನು ಗೊಂದಲದಲ್ಲಿ ಮುಳುಗಿಸಿದರು. ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

ಈ ಕುರಿತು ಬುಧವಾರ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು, ”ನನ್ನ ಸ್ವಾಭಿಮಾನಕ್ಕೆ ಧಕ್ಕೆ ಉಂಟಾಗಿದೆ. ಮಣಿಪುರದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಜನಾಂಗೀಯ ಘರ್ಷಣೆ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದೆವು. ಆದರೆ, ಮಾತನಾಡುವ ವೇಳೆ ಮೈಕ್​ ಆಫ್​​ ಮಾಡಿರುವ ಕ್ರಮ ಸರಿಯಲ್ಲ” ಎಂದು ಕಿಡಿಕಾರಿದ್ಧಾರೆ.

”ನಾನು ನನ್ನ ಸಮಸ್ಯೆಗಳನ್ನು ಸದನದ ಮುಂದೆ ಇಡುತ್ತಿದ್ದೆ ಮತ್ತು 267ರ ಮೇಲೆ 50 ಜನರು ನೋಟಿಸ್ ನೀಡಿದಾಗ ಸಂಸತ್ತಿನಲ್ಲಿ ಮಾತನಾಡಲು ನನಗೆ ಅವಕಾಶ ಸಿಗಲಿಲ್ಲ. ಆದರೆ ನಾನು ಮಾತನಾಡುವಾಗ ನನ್ನ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಗಿದೆ. ಈ ಮೂಲಕ ನನ್ನ ಅವಕಾಶಗಳನ್ನು ಕಿತ್ತುಕೊಳ್ಳಲಾಗಿದೆ. ಇದು ನನಗೆ ಮಾಡಿದ ಅವಮಾನ, ನನ್ನ ಸ್ವಾಭಿಮಾನಕ್ಕೆ ಸವಾಲು ಹಾಕಿದ್ದಾರೆ. ಸರ್ಕಾರದ ಸೂಚನೆಯ ಮೇರೆಗೆ ಸದನ ನಡೆಸಿದರೆ, ಅದು ಪ್ರಜಾಪ್ರಭುತ್ವವಲ್ಲ” ಎಂದು ಖರ್ಗೆ ಹೇಳಿದ್ದಾರೆ.

ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಖರ್ಗೆ ಅವರು ಭಾಷಣವನ್ನು ಮಧ್ಯದಲ್ಲಿ ಅಡ್ಡಿಪಡಿಸಿದ ನಂತರ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಇದು ಪ್ರತಿಪಕ್ಷ ಸದಸ್ಯರ ತಕ್ಷಣದ ಗದ್ದಲಕ್ಕೆ ಕಾರಣವಾಯಿತು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಎಲ್ಲರಿಗೂ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳಲು ಹೇಳಿದರು.

ಸಂಸದರು ತಮ್ಮ ಹಿಂದಿನ ಸಾಲಿನಲ್ಲಿ ನಿಂತಿದ್ದಾರೆ ೆನ್ನುವುದನ್ನು ಗಮನಿಸಿದ ಖರ್ಗೆ ಅವರು, ”ಅವರು ನನ್ನ ಹಿಂದೆ ನಿಲ್ಲಬಾರದು ಎಂದರೆ ಅವರು ಹೋಗಿ ಮೋದಿ ಹಿಂದೆ ನಿಲ್ಲಬೇಕೇ?” ಎಂದು ಕೇಳಿದರು.

ಶಾಂತಿಯಿಂದ ಕಲಾಪ ನಡೆಯಲು ಅವಕಾಶ ಮಾಡಿಕೊಡಬೇಕು ಎಂದು ಧನಕರ್‌ ಅವರು ಖರ್ಗೆ ಮತ್ತು ಸಭಾನಾಯಕ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದರು.

ಮೈಕ್ ಆಫ್ ಮಾಡಿಲ್ಲ ಎಂದು ಹೇಳಿದ ಸಭಾಪತಿಗಳು, ಸದನವು ಶಾಸಕಾಂಗ ವಿಷಯದ ಬಗ್ಗೆ ಚರ್ಚೆ ನಡೆಸುತ್ತಿದ್ದಾಗ  ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಲಾಯಿತು ಎಂದು ಹೇಳಿದರು.

ಮುಂಗಾರು ಅಧಿವೇಶನದ ಆರಂಭದಿಂದಲೂ ಸಂಸತ್ತಿನಲ್ಲಿ ನಿರಂತರ ಸ್ತಬ್ಧತೆಗೆ ಕಾರಣವಾಗಿರುವ ವಿವಾದದ ಕೇಂದ್ರ ಬಿಂದುವಾದ ಮಣಿಪುರದಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಸಂಸದರು ನೋಟಿಸ್‌ಗಳನ್ನು ಮಂಡಿಸಿದ್ದರಿಂದ ಅಧಿವೇಶನದಲ್ಲಿ ಗದ್ದಲ ನಡೆಯಿತು.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಮೈಕ್ರೋಫೋನ್‌ ಸ್ವಿಚ್ಡ್ ಆಫ್: ವಿಪಕ್ಷಗಳ ಸಭಾತ್ಯಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...