Homeಕರ್ನಾಟಕಬೆಳಗಾವಿ | 29 ಕೃಷ್ಣಮೃಗಗಳು ಸಾವು : ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ತಜ್ಞರ ತಂಡ...

ಬೆಳಗಾವಿ | 29 ಕೃಷ್ಣಮೃಗಗಳು ಸಾವು : ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ತಜ್ಞರ ತಂಡ ಭೇಟಿ

- Advertisement -
- Advertisement -

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಭಾನುವಾರ (ನವೆಂಬರ್ 16) ಭೇಟಿ ನೀಡಿದ ತಜ್ಞರ ತಂಡ ನಾಲ್ಕು ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿದೆ ಎಂದು ವರದಿಯಾಗಿದೆ.

ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಬೆಂಗಳೂರು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಕರ್ನಾಟಕ ಮೃಗಾಲಯಗಳ ಪ್ರಾಧಿಕಾರದ ತಜ್ಞರ ತಂಡ ನಾಲ್ಕು ಕೃಷ್ಣ ಮೃಗಗಳ ಕಳೇಬರವನ್ನು ಪರೀಕ್ಷೆ ನಡೆಸಿದೆ ಎಂದು ತಿಳಿದು ಬಂದಿದೆ.

ಮೃಗಾಲಯದಲ್ಲಿ ಕಳೆದ ಗುರುವಾರ 20, ಶನಿವಾರ 9 ಸೇರಿ ಒಟ್ಟು 29 ಕೃಷ್ಣಮೃಗಗಳು ಸಾವನ್ನಪ್ಪಿವೆ. ಈ ಪೈಕಿ 25 ಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಲಾಗಿತ್ತು. ಉಳಿದ ನಾಲ್ಕು ಮೃಗಗಳ ಮರಣೋತ್ತರ ಪರೀಕ್ಷೆಯನ್ನು ತಜ್ಞರ ತಂಡ ಭಾನುವಾರ ನಡೆಸಿದೆ ಎಂದು ವರದಿ ತಿಳಿಸಿದೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕೃಷ್ಣಮೃಗಗಳ ಸರಣಿ ಸಾವಿನ ಕುರಿತು ತನಿಖೆ ನಡೆಸಲು ಶನಿವಾರ (ನ.15) ಆದೇಶ ನೀಡಿದ್ದರು.

ಮೃಗಾಲಯದಲ್ಲಿ ಒಟ್ಟು 38 ಕೃಷ್ಣಮೃಗಗಳಿದ್ದವು. ಈ ಪೈಕಿ 4ರಿಂದ 6 ವರ್ಷ ವಯಸ್ಸಿನ 29 ಮೃಗಗಳು ಯಾವುದೋ ಸೋಂಕಿನಿಂದ ಮೃತಪಟ್ಟಿರುವ ಅನುಮಾನ ಇದೆ. ಆದರೂ, ತನಿಖೆ ನಡೆಸಿ ಸಾವಿನ ಕಾರಣವನ್ನು ಪತ್ತೆ ಹಚ್ಚುವುದಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾಗಲಕೋಟೆ | ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...