Homeಕರ್ನಾಟಕಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

- Advertisement -
- Advertisement -

ಈ ಎರಡು ದಶಕಗಳಲ್ಲಿ ಕಾಂಗ್ರೆಸ್ ಈ ಸಲ ಮೊದಲ ಬಾರಿಗೆ ಬೆಳಗಾವಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗುತ್ತಿದೆ. ಅದಕ್ಕೇ ಈ ಸಲ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಕಾಂಗ್ರೆಸ್ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಯವರನ್ನು ಅಖಾಡಕ್ಕೆ ಇಳಿಸಿದೆ.

ಇತ್ತ ಸುರೇಶ ಅಂಗಡಿಯವರ ಅಕಾಲಿಕ ನಿಧನದ ಕಾರಣಕ್ಕೆ ಬಿಜೆಪಿ ಅನುಕಂಪದ ಮತಗಳ ಬೇಟೆಯಲ್ಲಿ ಸುರೇಶ ಅಂಗಡಿಯವರ ಪತ್ನಿ ಮಂಗಳಾ ಅಂಗಡಿಯವರನ್ನು ಕಣಕ್ಕಿಳಿಸಿದೆ.
ಸತೀಶ್ ಜಾರಕಿಹೊಳಿ ಈಗ ಈ ಇರಬಹುದಯ ಎನ್ನಲಾದ ಅನುಕಂಪದ ಅಲೆಯನ್ನು ಹಿಮ್ಮೆಟ್ಟಿಸಬಹುದೇನೊ, ಆದರೆ, ಇಲ್ಲಿ ಲಿಂಗಾಯತರೇ ಮತಗಳೇ ಕಳೆದ ಎರಡು ದಶಕಗಳಿಂದ ಡಿಸೈಡಿಂಗ್ ಫ್ಯಾಕ್ಟರ್ ಆಗಿವೆ. ಹಳೆ ಲೆಕ್ಕದ ಪ್ರಕಾರ ಇಲ್ಲಿ ಲಿಂಗಾಯತರು 4 ಲಕ್ಷ 40 ಸಾವಿರ ಮತದಾರರಿದ್ದಾರೆ. ಇವರಲ್ಲಿ ಬಹುಪಾಲು ಜನ ಇಲ್ಲಿ ಬಿಜೆಪಿಯ ಬೆಂಬಲಿಗರೇ ಆಗಿದ್ದಾರೆ. ಇದರಲ್ಲಿ ಅರ್ಧಕ್ಕೂ ಹೆಚ್ಚು ಜನ ಮೋದಿಯ ಕಟ್ಟಾ ಬೆಂಬಲಿಗರೂ ಹೌದು ಎನ್ನುವ ಮಾತುಗಳಿವೆ.

ಅಂದರೆ ಈ ಲಿಂಗಾಯತರ ಕೋಟೆ ಭೇದಿಸಲು ಸತೀಶ್ ಜಾರಕಿಹೊಳಿ ಹೋರಾಟ ನಡೆಸಿದ್ದಾರೆ. ಹಿಂದೆಲ್ಲ ಅವರು ಯಮಕನಮರಡಿ ಅಸೆಂಬ್ಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಪ್ರಚಾರಕ್ಕೆ ಹೋಗದೇ ಗೆದ್ದು ಬಂದಿದ್ದಾರೆ ಎಂಬುದು ಅವರ ಅಭಿಮಾನಿಗಳ ‘ಹೆಮ್ಮೆ’. ಈ ಸಲವೂ ‘ಸಾಹೇಬ್ರು’ ಪ್ರಚಾರಕ್ಕೆ ಇಳಿಯದೇ ಗೆಲ್ಲುತ್ತಾರೆ ಎಂಬುದು ಅವರ ಅಭಿಮಾನಿಗಳ ಅತಿ ಆತ್ಮವಿಶ್ವಾಸವಾಗಿತ್ತು.

ಆದರೆ ವಾಸ್ತವವೇ ಬೇರೆ ಇದೆ, ಸತೀಶ್ ಕಳೆದ ಸಲದ ವಿಧಾನಸಭಾ ಚುನಾವಣೆಯಲ್ಲಿಯೂ ಯಮಕನಮರಡಿಯ ಕೆಲವು ಕಡೆ ಪ್ರಚಾರ ಕೈಗೊಂಡಿದ್ದರು. ಈ ಸಲ ಬೆಳಗಾವಿ ಕ್ಷೇತ್ರದ ಎಂಟೂ ಕೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರು ಮಕ್ಕಳು ಪ್ರಚಾರದ ನೇತೃತ್ವ ಹೊತ್ತು ಎಲ್ಲಾ ಕಡೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ.

ಅಂದರೆ ಆಟ ಕಠಿಣವಾಗಿದೆ ಎಂದರ್ಥ. ಬಿಜೆಪಿಯ ಪಕ್ಕಾ ಮತದಾರರನ್ನು ಬದಲಿಸಲು ಸತೀಶ್ ಕಡೆಯಿಂದ ಸಾಧ್ಯವಿಲ್ಲ. ಏಕೆಂದರೆ ಕಳೆದ ನಾಲ್ಕೈದು ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿಯೇ ಇಲ್ಲ! ಒಮ್ಮೆ ಮಾತ್ರ ಲಿಂಗಾಯತ ಲಕ್ಷ್ಮಿ ಹೆಬ್ಬಾಳಕರ್ ಕಾಂಗ್ರೆಸ್‌ನಿಂದ ನಿಂತಾಗ ಟಫ್ ಕಾಂಪಿಟೇಷನ್ ಕೊಟ್ಟಿದ್ದರು ಎಂಬ ಅಂಶ ಸತೀಶ್‌ಗೆ ನೆರವಾಗಬಲ್ಲದೇ?

ಲಿಂಗಾಯತರ ನಂತರ ಇಲ್ಲಿ ಮರಾಠಾ ಮತದಾರರು (2.25 ಲಕ್ಷ) ಹೆಚ್ಚಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಇವರೆಲ್ಲ ಬಹುತೇಕ ಬಿಜೆಪಿ ಬೆಂಬಲಿಸಿದ್ದಾರೆ. ಆದರೆ ಈ ಸಲ ಹಾಗಿಲ್ಲ. ಜಾರಕಿಹೊಳಿ ಕುಟುಂಬ ಅದರಲ್ಲೂ ಮುಖ್ಯವಾಗಿ ಸತೀಶ್ ಜೊತೆ ಮರಾಠಿ ಸಮುದಾಯದ ಒಂದು ‘ಆಪ್ತ ಸಂಬಂಧವಿದೆ. ಹೀಗಾಗಿ ಈ ಸಲ ಎಲ್ಲ ಮರಾಠಾ ಮತಗಳು ಬಿಜೆಪಿಗೆ ಇಡುಗಂಟಲ್ಲ.

ಇಷ್ಟಾದರೂ ಸತೀಶ್ ಜಾರಕಿಹೊಳಿ ಹೋರಾಟ ಯಾವುದರ ಮೇಲೆ ನಿಂತಿದೆ:

• ಇಲ್ಲಿ 1.80 ಲಕ್ಷ ಮುಸ್ಲಿಂ ಮತಗಳಿವೆ, 1.50 ಲಕ್ಷ ಕುರುಬರ ಮತಗಳು, 1.50 ಲಕ್ಷ ಎಸ್‌ಸಿ ಮತಗಳು ಮತ್ತು 85 ಸಾವಿರ ಎಸ್‌ಟಿ ಮತಗಳಿವೆ. ಅಹಿಂದ ಶಕ್ತಿ ಒಂದಾದರೆ ಗೆಲವು ಸುಲಭ ಎಂಬುದು ಒಂದು ಲೆಕ್ಕಾಚಾರ.

• ಈ ಕೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ ಶಾಸಕರು ಇರುವುದು ಮೇಲ್ನೋಟಕ್ಕೆ ಮಂಜುಳಾ ಅಂಗಡಿಯವರಿಗೆ ಅಡ್ವಾಂಟೇಜ್ ಅನಿಸುತ್ತಿದೆ. ಆದರೆ ಕೆಲವು ಬಿಜೆಪಿ ಶಾಸಕರಿಗೆ ಮಂಜುಳಾರನ್ನು ಕಣಕ್ಕೆ ಇಳಿಸಿದ್ದು ಅತೃಪ್ತಿ ಮೂಡಿಸಿದೆ.

• ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಮತ್ತು ಪಕ್ಕದ ಅರಭಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ಗೆದ್ದವರು. ಆದರೆ ಈ ಕುಟುಂಬದ ‘ಆಟ’ ಹೇಗಿರುತ್ತೇ ಅಂದರೆ ಈ ಸಲ ಸತೀಶ್ ಜಾರಕಿಹೊಳಿ ಗೆಲುವಿಗೆ ಅವರು ಪರೋಕ್ಷವಾಗಿ ಶ್ರಮಿಸಲಿದ್ದಾರೆ ಎಂಬ ಆಸೆ ಅಭಿಮಾನಿಗಳದ್ದು!

ಚುನಾವಣಾ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ

ಸತೀಶ್ ಜಾರಕಿಹೊಳಿಯವರಿಗೆ ರಾಜ್ಯ ರಾಜಕೀಯ ಬೇಡವಾಯಿತೆ?

ಈ ಪ್ರಶ್ನೆ ಸಹಜವಾಗಿಯೇ ಏಳುತ್ತದೆ. ಹಿಂದೊಮ್ಮೆ ಸಿದ್ದರಾಮಯ್ಯರ ಪರಮಾಪ್ತರಾಗಿದ್ದ ಸತೀಶ್ ಜಾರಕಿಹೊಳಿ ಡಿಸಿಎಂ ಆಕಾಂಕ್ಷಿ ಎನ್ನಲಾಗಿತ್ತು. ಆದರೆ ಈಗ ಅವರನ್ನು ದೆಹಲಿಗೆ ಕಳಿಸಲು ಕಾಂಗ್ರೆಸ್ ಯೋಚಿಸಿದೆ. ಸತೀಶ್‌ಗೆ ಇದು ಇಷ್ಟವಿಲ್ಲ ಎಂಬುದು ಅರ್ಧಸತ್ಯವಷ್ಟೇ.
ಏಕೆಂದರೆ ಜಾರಕಿಹೊಳಿ ಕುಟುಂಬದ ಎರಡನೇ ತಲೆಮಾರನ್ನು ರಾಜಕೀಯಕ್ಕೆ ತರುವ ಒಂದು ಯೋಜನೆ ಚಾಲ್ತಿಯಲ್ಲಿದೆ. ಸತೀಶ್ ಗೆದ್ದರೆ, ಯಮನಕಮರಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮಗಳು ಪ್ರಿಯಾಂಕಾ ಕಾಂಗ್ರೆಸ್ ಕ್ಯಾಂಡಿಡೇಟ್ ಎಂದು ಅವರು ಆಪ್ತರು ಮಾತಾಡಿಕೊಳ್ಳುತ್ತಿದ್ದಾರೆ. ಇವೆಲ್ಲಕ್ಕೂ ನಾವು ಮೇ 02 ರ ಉಪಚುನಾವಣೆ ಫಲಿತಾಂಶದವರೆಗೂ ಕಾಯಬೇಕಿದೆ.


ಇದನ್ನೂ ಓದಿ: ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...