Homeಕರ್ನಾಟಕಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

- Advertisement -
- Advertisement -

ಈ ಎರಡು ದಶಕಗಳಲ್ಲಿ ಕಾಂಗ್ರೆಸ್ ಈ ಸಲ ಮೊದಲ ಬಾರಿಗೆ ಬೆಳಗಾವಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗುತ್ತಿದೆ. ಅದಕ್ಕೇ ಈ ಸಲ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಕಾಂಗ್ರೆಸ್ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಯವರನ್ನು ಅಖಾಡಕ್ಕೆ ಇಳಿಸಿದೆ.

ಇತ್ತ ಸುರೇಶ ಅಂಗಡಿಯವರ ಅಕಾಲಿಕ ನಿಧನದ ಕಾರಣಕ್ಕೆ ಬಿಜೆಪಿ ಅನುಕಂಪದ ಮತಗಳ ಬೇಟೆಯಲ್ಲಿ ಸುರೇಶ ಅಂಗಡಿಯವರ ಪತ್ನಿ ಮಂಗಳಾ ಅಂಗಡಿಯವರನ್ನು ಕಣಕ್ಕಿಳಿಸಿದೆ.
ಸತೀಶ್ ಜಾರಕಿಹೊಳಿ ಈಗ ಈ ಇರಬಹುದಯ ಎನ್ನಲಾದ ಅನುಕಂಪದ ಅಲೆಯನ್ನು ಹಿಮ್ಮೆಟ್ಟಿಸಬಹುದೇನೊ, ಆದರೆ, ಇಲ್ಲಿ ಲಿಂಗಾಯತರೇ ಮತಗಳೇ ಕಳೆದ ಎರಡು ದಶಕಗಳಿಂದ ಡಿಸೈಡಿಂಗ್ ಫ್ಯಾಕ್ಟರ್ ಆಗಿವೆ. ಹಳೆ ಲೆಕ್ಕದ ಪ್ರಕಾರ ಇಲ್ಲಿ ಲಿಂಗಾಯತರು 4 ಲಕ್ಷ 40 ಸಾವಿರ ಮತದಾರರಿದ್ದಾರೆ. ಇವರಲ್ಲಿ ಬಹುಪಾಲು ಜನ ಇಲ್ಲಿ ಬಿಜೆಪಿಯ ಬೆಂಬಲಿಗರೇ ಆಗಿದ್ದಾರೆ. ಇದರಲ್ಲಿ ಅರ್ಧಕ್ಕೂ ಹೆಚ್ಚು ಜನ ಮೋದಿಯ ಕಟ್ಟಾ ಬೆಂಬಲಿಗರೂ ಹೌದು ಎನ್ನುವ ಮಾತುಗಳಿವೆ.

ಅಂದರೆ ಈ ಲಿಂಗಾಯತರ ಕೋಟೆ ಭೇದಿಸಲು ಸತೀಶ್ ಜಾರಕಿಹೊಳಿ ಹೋರಾಟ ನಡೆಸಿದ್ದಾರೆ. ಹಿಂದೆಲ್ಲ ಅವರು ಯಮಕನಮರಡಿ ಅಸೆಂಬ್ಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಪ್ರಚಾರಕ್ಕೆ ಹೋಗದೇ ಗೆದ್ದು ಬಂದಿದ್ದಾರೆ ಎಂಬುದು ಅವರ ಅಭಿಮಾನಿಗಳ ‘ಹೆಮ್ಮೆ’. ಈ ಸಲವೂ ‘ಸಾಹೇಬ್ರು’ ಪ್ರಚಾರಕ್ಕೆ ಇಳಿಯದೇ ಗೆಲ್ಲುತ್ತಾರೆ ಎಂಬುದು ಅವರ ಅಭಿಮಾನಿಗಳ ಅತಿ ಆತ್ಮವಿಶ್ವಾಸವಾಗಿತ್ತು.

ಆದರೆ ವಾಸ್ತವವೇ ಬೇರೆ ಇದೆ, ಸತೀಶ್ ಕಳೆದ ಸಲದ ವಿಧಾನಸಭಾ ಚುನಾವಣೆಯಲ್ಲಿಯೂ ಯಮಕನಮರಡಿಯ ಕೆಲವು ಕಡೆ ಪ್ರಚಾರ ಕೈಗೊಂಡಿದ್ದರು. ಈ ಸಲ ಬೆಳಗಾವಿ ಕ್ಷೇತ್ರದ ಎಂಟೂ ಕೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರು ಮಕ್ಕಳು ಪ್ರಚಾರದ ನೇತೃತ್ವ ಹೊತ್ತು ಎಲ್ಲಾ ಕಡೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ.

ಅಂದರೆ ಆಟ ಕಠಿಣವಾಗಿದೆ ಎಂದರ್ಥ. ಬಿಜೆಪಿಯ ಪಕ್ಕಾ ಮತದಾರರನ್ನು ಬದಲಿಸಲು ಸತೀಶ್ ಕಡೆಯಿಂದ ಸಾಧ್ಯವಿಲ್ಲ. ಏಕೆಂದರೆ ಕಳೆದ ನಾಲ್ಕೈದು ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿಯೇ ಇಲ್ಲ! ಒಮ್ಮೆ ಮಾತ್ರ ಲಿಂಗಾಯತ ಲಕ್ಷ್ಮಿ ಹೆಬ್ಬಾಳಕರ್ ಕಾಂಗ್ರೆಸ್‌ನಿಂದ ನಿಂತಾಗ ಟಫ್ ಕಾಂಪಿಟೇಷನ್ ಕೊಟ್ಟಿದ್ದರು ಎಂಬ ಅಂಶ ಸತೀಶ್‌ಗೆ ನೆರವಾಗಬಲ್ಲದೇ?

ಲಿಂಗಾಯತರ ನಂತರ ಇಲ್ಲಿ ಮರಾಠಾ ಮತದಾರರು (2.25 ಲಕ್ಷ) ಹೆಚ್ಚಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಇವರೆಲ್ಲ ಬಹುತೇಕ ಬಿಜೆಪಿ ಬೆಂಬಲಿಸಿದ್ದಾರೆ. ಆದರೆ ಈ ಸಲ ಹಾಗಿಲ್ಲ. ಜಾರಕಿಹೊಳಿ ಕುಟುಂಬ ಅದರಲ್ಲೂ ಮುಖ್ಯವಾಗಿ ಸತೀಶ್ ಜೊತೆ ಮರಾಠಿ ಸಮುದಾಯದ ಒಂದು ‘ಆಪ್ತ ಸಂಬಂಧವಿದೆ. ಹೀಗಾಗಿ ಈ ಸಲ ಎಲ್ಲ ಮರಾಠಾ ಮತಗಳು ಬಿಜೆಪಿಗೆ ಇಡುಗಂಟಲ್ಲ.

ಇಷ್ಟಾದರೂ ಸತೀಶ್ ಜಾರಕಿಹೊಳಿ ಹೋರಾಟ ಯಾವುದರ ಮೇಲೆ ನಿಂತಿದೆ:

• ಇಲ್ಲಿ 1.80 ಲಕ್ಷ ಮುಸ್ಲಿಂ ಮತಗಳಿವೆ, 1.50 ಲಕ್ಷ ಕುರುಬರ ಮತಗಳು, 1.50 ಲಕ್ಷ ಎಸ್‌ಸಿ ಮತಗಳು ಮತ್ತು 85 ಸಾವಿರ ಎಸ್‌ಟಿ ಮತಗಳಿವೆ. ಅಹಿಂದ ಶಕ್ತಿ ಒಂದಾದರೆ ಗೆಲವು ಸುಲಭ ಎಂಬುದು ಒಂದು ಲೆಕ್ಕಾಚಾರ.

• ಈ ಕೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ ಶಾಸಕರು ಇರುವುದು ಮೇಲ್ನೋಟಕ್ಕೆ ಮಂಜುಳಾ ಅಂಗಡಿಯವರಿಗೆ ಅಡ್ವಾಂಟೇಜ್ ಅನಿಸುತ್ತಿದೆ. ಆದರೆ ಕೆಲವು ಬಿಜೆಪಿ ಶಾಸಕರಿಗೆ ಮಂಜುಳಾರನ್ನು ಕಣಕ್ಕೆ ಇಳಿಸಿದ್ದು ಅತೃಪ್ತಿ ಮೂಡಿಸಿದೆ.

• ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಮತ್ತು ಪಕ್ಕದ ಅರಭಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ಗೆದ್ದವರು. ಆದರೆ ಈ ಕುಟುಂಬದ ‘ಆಟ’ ಹೇಗಿರುತ್ತೇ ಅಂದರೆ ಈ ಸಲ ಸತೀಶ್ ಜಾರಕಿಹೊಳಿ ಗೆಲುವಿಗೆ ಅವರು ಪರೋಕ್ಷವಾಗಿ ಶ್ರಮಿಸಲಿದ್ದಾರೆ ಎಂಬ ಆಸೆ ಅಭಿಮಾನಿಗಳದ್ದು!

ಚುನಾವಣಾ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ

ಸತೀಶ್ ಜಾರಕಿಹೊಳಿಯವರಿಗೆ ರಾಜ್ಯ ರಾಜಕೀಯ ಬೇಡವಾಯಿತೆ?

ಈ ಪ್ರಶ್ನೆ ಸಹಜವಾಗಿಯೇ ಏಳುತ್ತದೆ. ಹಿಂದೊಮ್ಮೆ ಸಿದ್ದರಾಮಯ್ಯರ ಪರಮಾಪ್ತರಾಗಿದ್ದ ಸತೀಶ್ ಜಾರಕಿಹೊಳಿ ಡಿಸಿಎಂ ಆಕಾಂಕ್ಷಿ ಎನ್ನಲಾಗಿತ್ತು. ಆದರೆ ಈಗ ಅವರನ್ನು ದೆಹಲಿಗೆ ಕಳಿಸಲು ಕಾಂಗ್ರೆಸ್ ಯೋಚಿಸಿದೆ. ಸತೀಶ್‌ಗೆ ಇದು ಇಷ್ಟವಿಲ್ಲ ಎಂಬುದು ಅರ್ಧಸತ್ಯವಷ್ಟೇ.
ಏಕೆಂದರೆ ಜಾರಕಿಹೊಳಿ ಕುಟುಂಬದ ಎರಡನೇ ತಲೆಮಾರನ್ನು ರಾಜಕೀಯಕ್ಕೆ ತರುವ ಒಂದು ಯೋಜನೆ ಚಾಲ್ತಿಯಲ್ಲಿದೆ. ಸತೀಶ್ ಗೆದ್ದರೆ, ಯಮನಕಮರಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮಗಳು ಪ್ರಿಯಾಂಕಾ ಕಾಂಗ್ರೆಸ್ ಕ್ಯಾಂಡಿಡೇಟ್ ಎಂದು ಅವರು ಆಪ್ತರು ಮಾತಾಡಿಕೊಳ್ಳುತ್ತಿದ್ದಾರೆ. ಇವೆಲ್ಲಕ್ಕೂ ನಾವು ಮೇ 02 ರ ಉಪಚುನಾವಣೆ ಫಲಿತಾಂಶದವರೆಗೂ ಕಾಯಬೇಕಿದೆ.


ಇದನ್ನೂ ಓದಿ: ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...