Homeಕರ್ನಾಟಕಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

- Advertisement -
- Advertisement -

ಈ ಎರಡು ದಶಕಗಳಲ್ಲಿ ಕಾಂಗ್ರೆಸ್ ಈ ಸಲ ಮೊದಲ ಬಾರಿಗೆ ಬೆಳಗಾವಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗುತ್ತಿದೆ. ಅದಕ್ಕೇ ಈ ಸಲ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಕಾಂಗ್ರೆಸ್ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಯವರನ್ನು ಅಖಾಡಕ್ಕೆ ಇಳಿಸಿದೆ.

ಇತ್ತ ಸುರೇಶ ಅಂಗಡಿಯವರ ಅಕಾಲಿಕ ನಿಧನದ ಕಾರಣಕ್ಕೆ ಬಿಜೆಪಿ ಅನುಕಂಪದ ಮತಗಳ ಬೇಟೆಯಲ್ಲಿ ಸುರೇಶ ಅಂಗಡಿಯವರ ಪತ್ನಿ ಮಂಗಳಾ ಅಂಗಡಿಯವರನ್ನು ಕಣಕ್ಕಿಳಿಸಿದೆ.
ಸತೀಶ್ ಜಾರಕಿಹೊಳಿ ಈಗ ಈ ಇರಬಹುದಯ ಎನ್ನಲಾದ ಅನುಕಂಪದ ಅಲೆಯನ್ನು ಹಿಮ್ಮೆಟ್ಟಿಸಬಹುದೇನೊ, ಆದರೆ, ಇಲ್ಲಿ ಲಿಂಗಾಯತರೇ ಮತಗಳೇ ಕಳೆದ ಎರಡು ದಶಕಗಳಿಂದ ಡಿಸೈಡಿಂಗ್ ಫ್ಯಾಕ್ಟರ್ ಆಗಿವೆ. ಹಳೆ ಲೆಕ್ಕದ ಪ್ರಕಾರ ಇಲ್ಲಿ ಲಿಂಗಾಯತರು 4 ಲಕ್ಷ 40 ಸಾವಿರ ಮತದಾರರಿದ್ದಾರೆ. ಇವರಲ್ಲಿ ಬಹುಪಾಲು ಜನ ಇಲ್ಲಿ ಬಿಜೆಪಿಯ ಬೆಂಬಲಿಗರೇ ಆಗಿದ್ದಾರೆ. ಇದರಲ್ಲಿ ಅರ್ಧಕ್ಕೂ ಹೆಚ್ಚು ಜನ ಮೋದಿಯ ಕಟ್ಟಾ ಬೆಂಬಲಿಗರೂ ಹೌದು ಎನ್ನುವ ಮಾತುಗಳಿವೆ.

ಅಂದರೆ ಈ ಲಿಂಗಾಯತರ ಕೋಟೆ ಭೇದಿಸಲು ಸತೀಶ್ ಜಾರಕಿಹೊಳಿ ಹೋರಾಟ ನಡೆಸಿದ್ದಾರೆ. ಹಿಂದೆಲ್ಲ ಅವರು ಯಮಕನಮರಡಿ ಅಸೆಂಬ್ಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಪ್ರಚಾರಕ್ಕೆ ಹೋಗದೇ ಗೆದ್ದು ಬಂದಿದ್ದಾರೆ ಎಂಬುದು ಅವರ ಅಭಿಮಾನಿಗಳ ‘ಹೆಮ್ಮೆ’. ಈ ಸಲವೂ ‘ಸಾಹೇಬ್ರು’ ಪ್ರಚಾರಕ್ಕೆ ಇಳಿಯದೇ ಗೆಲ್ಲುತ್ತಾರೆ ಎಂಬುದು ಅವರ ಅಭಿಮಾನಿಗಳ ಅತಿ ಆತ್ಮವಿಶ್ವಾಸವಾಗಿತ್ತು.

ಆದರೆ ವಾಸ್ತವವೇ ಬೇರೆ ಇದೆ, ಸತೀಶ್ ಕಳೆದ ಸಲದ ವಿಧಾನಸಭಾ ಚುನಾವಣೆಯಲ್ಲಿಯೂ ಯಮಕನಮರಡಿಯ ಕೆಲವು ಕಡೆ ಪ್ರಚಾರ ಕೈಗೊಂಡಿದ್ದರು. ಈ ಸಲ ಬೆಳಗಾವಿ ಕ್ಷೇತ್ರದ ಎಂಟೂ ಕೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರು ಮಕ್ಕಳು ಪ್ರಚಾರದ ನೇತೃತ್ವ ಹೊತ್ತು ಎಲ್ಲಾ ಕಡೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ.

ಅಂದರೆ ಆಟ ಕಠಿಣವಾಗಿದೆ ಎಂದರ್ಥ. ಬಿಜೆಪಿಯ ಪಕ್ಕಾ ಮತದಾರರನ್ನು ಬದಲಿಸಲು ಸತೀಶ್ ಕಡೆಯಿಂದ ಸಾಧ್ಯವಿಲ್ಲ. ಏಕೆಂದರೆ ಕಳೆದ ನಾಲ್ಕೈದು ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿಯೇ ಇಲ್ಲ! ಒಮ್ಮೆ ಮಾತ್ರ ಲಿಂಗಾಯತ ಲಕ್ಷ್ಮಿ ಹೆಬ್ಬಾಳಕರ್ ಕಾಂಗ್ರೆಸ್‌ನಿಂದ ನಿಂತಾಗ ಟಫ್ ಕಾಂಪಿಟೇಷನ್ ಕೊಟ್ಟಿದ್ದರು ಎಂಬ ಅಂಶ ಸತೀಶ್‌ಗೆ ನೆರವಾಗಬಲ್ಲದೇ?

ಲಿಂಗಾಯತರ ನಂತರ ಇಲ್ಲಿ ಮರಾಠಾ ಮತದಾರರು (2.25 ಲಕ್ಷ) ಹೆಚ್ಚಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಇವರೆಲ್ಲ ಬಹುತೇಕ ಬಿಜೆಪಿ ಬೆಂಬಲಿಸಿದ್ದಾರೆ. ಆದರೆ ಈ ಸಲ ಹಾಗಿಲ್ಲ. ಜಾರಕಿಹೊಳಿ ಕುಟುಂಬ ಅದರಲ್ಲೂ ಮುಖ್ಯವಾಗಿ ಸತೀಶ್ ಜೊತೆ ಮರಾಠಿ ಸಮುದಾಯದ ಒಂದು ‘ಆಪ್ತ ಸಂಬಂಧವಿದೆ. ಹೀಗಾಗಿ ಈ ಸಲ ಎಲ್ಲ ಮರಾಠಾ ಮತಗಳು ಬಿಜೆಪಿಗೆ ಇಡುಗಂಟಲ್ಲ.

ಇಷ್ಟಾದರೂ ಸತೀಶ್ ಜಾರಕಿಹೊಳಿ ಹೋರಾಟ ಯಾವುದರ ಮೇಲೆ ನಿಂತಿದೆ:

• ಇಲ್ಲಿ 1.80 ಲಕ್ಷ ಮುಸ್ಲಿಂ ಮತಗಳಿವೆ, 1.50 ಲಕ್ಷ ಕುರುಬರ ಮತಗಳು, 1.50 ಲಕ್ಷ ಎಸ್‌ಸಿ ಮತಗಳು ಮತ್ತು 85 ಸಾವಿರ ಎಸ್‌ಟಿ ಮತಗಳಿವೆ. ಅಹಿಂದ ಶಕ್ತಿ ಒಂದಾದರೆ ಗೆಲವು ಸುಲಭ ಎಂಬುದು ಒಂದು ಲೆಕ್ಕಾಚಾರ.

• ಈ ಕೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ ಶಾಸಕರು ಇರುವುದು ಮೇಲ್ನೋಟಕ್ಕೆ ಮಂಜುಳಾ ಅಂಗಡಿಯವರಿಗೆ ಅಡ್ವಾಂಟೇಜ್ ಅನಿಸುತ್ತಿದೆ. ಆದರೆ ಕೆಲವು ಬಿಜೆಪಿ ಶಾಸಕರಿಗೆ ಮಂಜುಳಾರನ್ನು ಕಣಕ್ಕೆ ಇಳಿಸಿದ್ದು ಅತೃಪ್ತಿ ಮೂಡಿಸಿದೆ.

• ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಮತ್ತು ಪಕ್ಕದ ಅರಭಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ಗೆದ್ದವರು. ಆದರೆ ಈ ಕುಟುಂಬದ ‘ಆಟ’ ಹೇಗಿರುತ್ತೇ ಅಂದರೆ ಈ ಸಲ ಸತೀಶ್ ಜಾರಕಿಹೊಳಿ ಗೆಲುವಿಗೆ ಅವರು ಪರೋಕ್ಷವಾಗಿ ಶ್ರಮಿಸಲಿದ್ದಾರೆ ಎಂಬ ಆಸೆ ಅಭಿಮಾನಿಗಳದ್ದು!

ಚುನಾವಣಾ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ

ಸತೀಶ್ ಜಾರಕಿಹೊಳಿಯವರಿಗೆ ರಾಜ್ಯ ರಾಜಕೀಯ ಬೇಡವಾಯಿತೆ?

ಈ ಪ್ರಶ್ನೆ ಸಹಜವಾಗಿಯೇ ಏಳುತ್ತದೆ. ಹಿಂದೊಮ್ಮೆ ಸಿದ್ದರಾಮಯ್ಯರ ಪರಮಾಪ್ತರಾಗಿದ್ದ ಸತೀಶ್ ಜಾರಕಿಹೊಳಿ ಡಿಸಿಎಂ ಆಕಾಂಕ್ಷಿ ಎನ್ನಲಾಗಿತ್ತು. ಆದರೆ ಈಗ ಅವರನ್ನು ದೆಹಲಿಗೆ ಕಳಿಸಲು ಕಾಂಗ್ರೆಸ್ ಯೋಚಿಸಿದೆ. ಸತೀಶ್‌ಗೆ ಇದು ಇಷ್ಟವಿಲ್ಲ ಎಂಬುದು ಅರ್ಧಸತ್ಯವಷ್ಟೇ.
ಏಕೆಂದರೆ ಜಾರಕಿಹೊಳಿ ಕುಟುಂಬದ ಎರಡನೇ ತಲೆಮಾರನ್ನು ರಾಜಕೀಯಕ್ಕೆ ತರುವ ಒಂದು ಯೋಜನೆ ಚಾಲ್ತಿಯಲ್ಲಿದೆ. ಸತೀಶ್ ಗೆದ್ದರೆ, ಯಮನಕಮರಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮಗಳು ಪ್ರಿಯಾಂಕಾ ಕಾಂಗ್ರೆಸ್ ಕ್ಯಾಂಡಿಡೇಟ್ ಎಂದು ಅವರು ಆಪ್ತರು ಮಾತಾಡಿಕೊಳ್ಳುತ್ತಿದ್ದಾರೆ. ಇವೆಲ್ಲಕ್ಕೂ ನಾವು ಮೇ 02 ರ ಉಪಚುನಾವಣೆ ಫಲಿತಾಂಶದವರೆಗೂ ಕಾಯಬೇಕಿದೆ.


ಇದನ್ನೂ ಓದಿ: ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...