Homeಕರ್ನಾಟಕಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

- Advertisement -
- Advertisement -

ಈ ಎರಡು ದಶಕಗಳಲ್ಲಿ ಕಾಂಗ್ರೆಸ್ ಈ ಸಲ ಮೊದಲ ಬಾರಿಗೆ ಬೆಳಗಾವಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗುತ್ತಿದೆ. ಅದಕ್ಕೇ ಈ ಸಲ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಕಾಂಗ್ರೆಸ್ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಯವರನ್ನು ಅಖಾಡಕ್ಕೆ ಇಳಿಸಿದೆ.

ಇತ್ತ ಸುರೇಶ ಅಂಗಡಿಯವರ ಅಕಾಲಿಕ ನಿಧನದ ಕಾರಣಕ್ಕೆ ಬಿಜೆಪಿ ಅನುಕಂಪದ ಮತಗಳ ಬೇಟೆಯಲ್ಲಿ ಸುರೇಶ ಅಂಗಡಿಯವರ ಪತ್ನಿ ಮಂಗಳಾ ಅಂಗಡಿಯವರನ್ನು ಕಣಕ್ಕಿಳಿಸಿದೆ.
ಸತೀಶ್ ಜಾರಕಿಹೊಳಿ ಈಗ ಈ ಇರಬಹುದಯ ಎನ್ನಲಾದ ಅನುಕಂಪದ ಅಲೆಯನ್ನು ಹಿಮ್ಮೆಟ್ಟಿಸಬಹುದೇನೊ, ಆದರೆ, ಇಲ್ಲಿ ಲಿಂಗಾಯತರೇ ಮತಗಳೇ ಕಳೆದ ಎರಡು ದಶಕಗಳಿಂದ ಡಿಸೈಡಿಂಗ್ ಫ್ಯಾಕ್ಟರ್ ಆಗಿವೆ. ಹಳೆ ಲೆಕ್ಕದ ಪ್ರಕಾರ ಇಲ್ಲಿ ಲಿಂಗಾಯತರು 4 ಲಕ್ಷ 40 ಸಾವಿರ ಮತದಾರರಿದ್ದಾರೆ. ಇವರಲ್ಲಿ ಬಹುಪಾಲು ಜನ ಇಲ್ಲಿ ಬಿಜೆಪಿಯ ಬೆಂಬಲಿಗರೇ ಆಗಿದ್ದಾರೆ. ಇದರಲ್ಲಿ ಅರ್ಧಕ್ಕೂ ಹೆಚ್ಚು ಜನ ಮೋದಿಯ ಕಟ್ಟಾ ಬೆಂಬಲಿಗರೂ ಹೌದು ಎನ್ನುವ ಮಾತುಗಳಿವೆ.

ಅಂದರೆ ಈ ಲಿಂಗಾಯತರ ಕೋಟೆ ಭೇದಿಸಲು ಸತೀಶ್ ಜಾರಕಿಹೊಳಿ ಹೋರಾಟ ನಡೆಸಿದ್ದಾರೆ. ಹಿಂದೆಲ್ಲ ಅವರು ಯಮಕನಮರಡಿ ಅಸೆಂಬ್ಲಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ ಪ್ರಚಾರಕ್ಕೆ ಹೋಗದೇ ಗೆದ್ದು ಬಂದಿದ್ದಾರೆ ಎಂಬುದು ಅವರ ಅಭಿಮಾನಿಗಳ ‘ಹೆಮ್ಮೆ’. ಈ ಸಲವೂ ‘ಸಾಹೇಬ್ರು’ ಪ್ರಚಾರಕ್ಕೆ ಇಳಿಯದೇ ಗೆಲ್ಲುತ್ತಾರೆ ಎಂಬುದು ಅವರ ಅಭಿಮಾನಿಗಳ ಅತಿ ಆತ್ಮವಿಶ್ವಾಸವಾಗಿತ್ತು.

ಆದರೆ ವಾಸ್ತವವೇ ಬೇರೆ ಇದೆ, ಸತೀಶ್ ಕಳೆದ ಸಲದ ವಿಧಾನಸಭಾ ಚುನಾವಣೆಯಲ್ಲಿಯೂ ಯಮಕನಮರಡಿಯ ಕೆಲವು ಕಡೆ ಪ್ರಚಾರ ಕೈಗೊಂಡಿದ್ದರು. ಈ ಸಲ ಬೆಳಗಾವಿ ಕ್ಷೇತ್ರದ ಎಂಟೂ ಕೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರು ಮಕ್ಕಳು ಪ್ರಚಾರದ ನೇತೃತ್ವ ಹೊತ್ತು ಎಲ್ಲಾ ಕಡೆ ಪ್ರಚಾರದಲ್ಲಿ ಮಗ್ನರಾಗಿದ್ದಾರೆ.

ಅಂದರೆ ಆಟ ಕಠಿಣವಾಗಿದೆ ಎಂದರ್ಥ. ಬಿಜೆಪಿಯ ಪಕ್ಕಾ ಮತದಾರರನ್ನು ಬದಲಿಸಲು ಸತೀಶ್ ಕಡೆಯಿಂದ ಸಾಧ್ಯವಿಲ್ಲ. ಏಕೆಂದರೆ ಕಳೆದ ನಾಲ್ಕೈದು ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಿಯೇ ಇಲ್ಲ! ಒಮ್ಮೆ ಮಾತ್ರ ಲಿಂಗಾಯತ ಲಕ್ಷ್ಮಿ ಹೆಬ್ಬಾಳಕರ್ ಕಾಂಗ್ರೆಸ್‌ನಿಂದ ನಿಂತಾಗ ಟಫ್ ಕಾಂಪಿಟೇಷನ್ ಕೊಟ್ಟಿದ್ದರು ಎಂಬ ಅಂಶ ಸತೀಶ್‌ಗೆ ನೆರವಾಗಬಲ್ಲದೇ?

ಲಿಂಗಾಯತರ ನಂತರ ಇಲ್ಲಿ ಮರಾಠಾ ಮತದಾರರು (2.25 ಲಕ್ಷ) ಹೆಚ್ಚಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಇವರೆಲ್ಲ ಬಹುತೇಕ ಬಿಜೆಪಿ ಬೆಂಬಲಿಸಿದ್ದಾರೆ. ಆದರೆ ಈ ಸಲ ಹಾಗಿಲ್ಲ. ಜಾರಕಿಹೊಳಿ ಕುಟುಂಬ ಅದರಲ್ಲೂ ಮುಖ್ಯವಾಗಿ ಸತೀಶ್ ಜೊತೆ ಮರಾಠಿ ಸಮುದಾಯದ ಒಂದು ‘ಆಪ್ತ ಸಂಬಂಧವಿದೆ. ಹೀಗಾಗಿ ಈ ಸಲ ಎಲ್ಲ ಮರಾಠಾ ಮತಗಳು ಬಿಜೆಪಿಗೆ ಇಡುಗಂಟಲ್ಲ.

ಇಷ್ಟಾದರೂ ಸತೀಶ್ ಜಾರಕಿಹೊಳಿ ಹೋರಾಟ ಯಾವುದರ ಮೇಲೆ ನಿಂತಿದೆ:

• ಇಲ್ಲಿ 1.80 ಲಕ್ಷ ಮುಸ್ಲಿಂ ಮತಗಳಿವೆ, 1.50 ಲಕ್ಷ ಕುರುಬರ ಮತಗಳು, 1.50 ಲಕ್ಷ ಎಸ್‌ಸಿ ಮತಗಳು ಮತ್ತು 85 ಸಾವಿರ ಎಸ್‌ಟಿ ಮತಗಳಿವೆ. ಅಹಿಂದ ಶಕ್ತಿ ಒಂದಾದರೆ ಗೆಲವು ಸುಲಭ ಎಂಬುದು ಒಂದು ಲೆಕ್ಕಾಚಾರ.

• ಈ ಕೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ ಶಾಸಕರು ಇರುವುದು ಮೇಲ್ನೋಟಕ್ಕೆ ಮಂಜುಳಾ ಅಂಗಡಿಯವರಿಗೆ ಅಡ್ವಾಂಟೇಜ್ ಅನಿಸುತ್ತಿದೆ. ಆದರೆ ಕೆಲವು ಬಿಜೆಪಿ ಶಾಸಕರಿಗೆ ಮಂಜುಳಾರನ್ನು ಕಣಕ್ಕೆ ಇಳಿಸಿದ್ದು ಅತೃಪ್ತಿ ಮೂಡಿಸಿದೆ.

• ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಮತ್ತು ಪಕ್ಕದ ಅರಭಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದ ಗೆದ್ದವರು. ಆದರೆ ಈ ಕುಟುಂಬದ ‘ಆಟ’ ಹೇಗಿರುತ್ತೇ ಅಂದರೆ ಈ ಸಲ ಸತೀಶ್ ಜಾರಕಿಹೊಳಿ ಗೆಲುವಿಗೆ ಅವರು ಪರೋಕ್ಷವಾಗಿ ಶ್ರಮಿಸಲಿದ್ದಾರೆ ಎಂಬ ಆಸೆ ಅಭಿಮಾನಿಗಳದ್ದು!

ಚುನಾವಣಾ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ

ಸತೀಶ್ ಜಾರಕಿಹೊಳಿಯವರಿಗೆ ರಾಜ್ಯ ರಾಜಕೀಯ ಬೇಡವಾಯಿತೆ?

ಈ ಪ್ರಶ್ನೆ ಸಹಜವಾಗಿಯೇ ಏಳುತ್ತದೆ. ಹಿಂದೊಮ್ಮೆ ಸಿದ್ದರಾಮಯ್ಯರ ಪರಮಾಪ್ತರಾಗಿದ್ದ ಸತೀಶ್ ಜಾರಕಿಹೊಳಿ ಡಿಸಿಎಂ ಆಕಾಂಕ್ಷಿ ಎನ್ನಲಾಗಿತ್ತು. ಆದರೆ ಈಗ ಅವರನ್ನು ದೆಹಲಿಗೆ ಕಳಿಸಲು ಕಾಂಗ್ರೆಸ್ ಯೋಚಿಸಿದೆ. ಸತೀಶ್‌ಗೆ ಇದು ಇಷ್ಟವಿಲ್ಲ ಎಂಬುದು ಅರ್ಧಸತ್ಯವಷ್ಟೇ.
ಏಕೆಂದರೆ ಜಾರಕಿಹೊಳಿ ಕುಟುಂಬದ ಎರಡನೇ ತಲೆಮಾರನ್ನು ರಾಜಕೀಯಕ್ಕೆ ತರುವ ಒಂದು ಯೋಜನೆ ಚಾಲ್ತಿಯಲ್ಲಿದೆ. ಸತೀಶ್ ಗೆದ್ದರೆ, ಯಮನಕಮರಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮಗಳು ಪ್ರಿಯಾಂಕಾ ಕಾಂಗ್ರೆಸ್ ಕ್ಯಾಂಡಿಡೇಟ್ ಎಂದು ಅವರು ಆಪ್ತರು ಮಾತಾಡಿಕೊಳ್ಳುತ್ತಿದ್ದಾರೆ. ಇವೆಲ್ಲಕ್ಕೂ ನಾವು ಮೇ 02 ರ ಉಪಚುನಾವಣೆ ಫಲಿತಾಂಶದವರೆಗೂ ಕಾಯಬೇಕಿದೆ.


ಇದನ್ನೂ ಓದಿ: ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...