Homeಕರ್ನಾಟಕಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ...

ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ

ಪ್ರಮುಖ ಆರೋಪಿ ಸಾಗರ್ ಪಾಟೀಲ್ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ , ಮಕ್ಕಳನ್ನು ಕೊಂದು ಶಿಕ್ಷಕನಿಗೆ ಕೆಟ್ಟ ಹೆಸರು ತರಲು ಯತ್ನಿಸಿದ ದುರುಳರು

- Advertisement -
- Advertisement -

ಬೆಳಗಾವಿ ಜಿಲ್ಲೆ ಸವದತ್ತಿ ‌ತಾಲೂಕು ಹೂಲಿಕಟ್ಟಿ ಗ್ರಾಮದ ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ (ಕೀಟನಾಶಕ) ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಗರ ಪಾಟೀಲ, ನಾಗನಗೌಡ ಪಾಟೀಲ ಮತ್ತು ಕೃಷ್ಣ ಮಾದರ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ ಪಾಟೀಲ ಪ್ರಕರಣದ ಪ್ರಮುಖ ಆರೋಪಿ. ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಘಟಕದ ಅಧ್ಯಕ್ಷನಾಗಿರುವ ಈತ, ಸರ್ಕಾರಿ ಶಾಲೆಯಲ್ಲಿ 13 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿರುವ ಮುಸ್ಲಿಂ ಸಮುದಾಯದ ಸುಲೇಮಾನ್ ಗೋರಿನಾಯ್ಕ ಅವರಿಗೆ ಕೆಟ್ಟ ಹೆಸರು ತರಲು ಮತ್ತು ಅವರ ವರ್ಗಾವಣೆ ಆಗಬೇಕು ಎಂಬ ಉದ್ದೇಶದಿಂದ ಈ ದುಷ್ಕೃತ್ಯವೆಸಗಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಶನಿವಾರ (ಆ.2) ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಸ್ಪಿ) ಡಾ. ಭೀಮಾಶಂಕರ ಗುಳೇದ್‌ ಪ್ರಕರಣದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದರಿಂದ ಹಲವು ಮಕ್ಕಳು ಅಸ್ವಸ್ತಗೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಸವದತ್ತಿ ಠಾಣೆ ಪೊಲೀಸರು ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲೊಂದು ಬಾಟಲಿ ದೊರೆತಿತ್ತು. ಅದರಲ್ಲಿ ವಿಷದ ಅಂಶ ಇದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರ ಆಧಾರದ ಮೇಲೆ ಮತ್ತು ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುಲೇಮಾನ್ ಗೋರಿನಾಯ್ಕ್ ಅವರು ನೀಡಿರುವ ದೂರಿನ ಆಧಾರ ಮೇಲೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದ್ದಾರೆ.

ಸವದತ್ತಿ ಠಾಣೆಯ ಪೊಲೀಸರು ಬಹಳ ವೈಜ್ಞಾನಿಕವಾಗಿ, ತುಂಬಾ ಮುತುವರ್ಜಿ ವಹಿಸಿಕೊಂಡು ಈ ಪ್ರಕರಣವನ್ನು ಬೇಧಿಸಿದ್ದಾರೆ. ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಹೂಲಿಕಟ್ಟೆ ಗ್ರಾಮದ ಕೃಷ್ಣ ಮಾದರ, ನಾಗನಗೌಡ ಪಾಟೀಲ್ ಮತ್ತು ನಾಗನಗೌಡನ ಹತ್ತಿರದ ಸಂಬಂಧಿ ಸಾಗರ್ ಪಾಟೀಲ್ ಬಂಧಿತ ಆರೋಪಿಗಳು ಎಂದು ತಿಳಿಸಿದ್ದಾರೆ.
ದುರದೃಷ್ಟಕರ ಸಂಗತಿಯೆಂದರೆ ಬಂಧಿತರೆಲ್ಲ ಯುವಕರು. ನಾಡನ್ನು ಕಟ್ಟಿ ಬೆಳೆಸಬೇಕಾದ ವಯಸ್ಸಲ್ಲಿ ಈ ರೀತಿಯ ದುಷ್ಕೃತ್ಯಕ್ಕೆ ಕೈ ಹಾಕಿದ್ದಾರೆ. ತಮ್ಮ ಕೃತ್ಯಕ್ಕೆ ಒಬ್ಬರ ಬಾಲಕನನ್ನೂ ಬಳಸಿಕೊಂಡಿದ್ದಾರೆ. ಆದರೆ, ತನಿಖೆಯಲ್ಲಿ ಆತ ಅಮಾಯಕ ಎಂದು ಗೊತ್ತಾಗಿದೆ. ಆರೋಪಿಗಳು ಅವನ ಮುಗ್ದತೆಯನ್ನು ತಮ್ಮ ಹೀನಾಯ ಕೃತ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಸಾಗರ್ ಪಾಟೀಲ್. ಈತನೇ ಈ ದುಷ್ಕೃತ್ಯದ ಕಾರಣೀಕರ್ತ. ಈತ ಈ ಆಘಾತಕಾರಿ ಕೃತ್ಯವೆಸಗಲು ಎರಡ್ಮೂರು ತಿಂಗಳಿನಿಂದ ಪೂರ್ವ ತಯಾರಿ ಮಾಡಿಕೊಂಡಿದ್ದ. ಅದಕ್ಕೆ ತನ್ನ ಜೊತೆ ಕೆಲಸ ಮಾಡುತ್ತಿದ್ದ ಚಾಲಕ ಕೃಷ್ಣ ಮಾದರನ ಸಹಾಯ ಪಡೆದಿದ್ದ. ಕೃಷ್ಣಗೆ ಸ್ವಲ್ಪ ಹಣ ಕೊಟ್ಟಿದ್ದ. ಆತನ ಮೂಲಕವೇ ವಿಷ ಖರೀದಿ ಮಾಡಿಸಿದ್ದ. ಅಪ್ರಾಪ್ತ ಬಾಲಕನನ್ನೂ ಆತನ ಮೂಲಕವೇ ಕರೆ ತಂದಿದ್ದ ಎಂದು ವಿವರಿಸಿದ್ದಾರೆ.

ಆರೋಪಿಗಳಾದ ಕೃಷ್ಣ ಮಾದರ ಮತ್ತು ನಾಗನಗೌಡ ಪಾಟೀಲ್ ದುಷ್ಕೃತ್ಯ ಎಸಗುವುದಕ್ಕಿಂತ 6 ದಿನಗಳ ಮುಂಚೆ (8ನೇ ತಾರೀಖು) ಮುನವಲ್ಲಿಗೆ ಹೋಗಿ ರಸಗೊಬ್ಬ ಮತ್ತು ಕೀಟನಾಶಕದ ಅಂಗಡಿಯಿಂದ ವಿಷ ಖರೀದಿಸಿದ್ದರು.
ಅದಕ್ಕೂ ಮುನ್ನ ಹೂಲಿಕಟ್ಟೆಯಲ್ಲಿ ಸಾಗರ್ ಪಾಟೀಲ ಜೊತೆ ಚರ್ಚೆ ನಡೆಸಿದ್ದರು ಎಂದು ಎಸ್ಪಿ ಹೇಳಿದ್ದಾರೆ.

13ನೇ ತಾರೀಕು ಆರೋಪಿಗಳು ಮತ್ತೊಮ್ಮೆ ಪರಸ್ಪರ ಚರ್ಚೆ ನಡೆಸಿದ್ದರು. ಅಂದೇ ಸಾಗರ್ ಪಾಟೀಲ್‌ಗೆ ವಿಷದ ಬಾಟಲಿಯನ್ನು ಹಸ್ತಾಂತರಿಸಿದ್ದರು. ಮಾಝಾ ಜ್ಯೂಸ್ ಬಾಟಲಿಯಲ್ಲಿ ವಿಷವನ್ನು ತುಂಬಲಾಗಿತ್ತು. ಸಾಗರ್ ಪಾಟೀಲ್ ರೈತನಾಗಿರುವುದರಿಂದ ಆತನಿಗೆ ಕೀಟನಾಶಕ ಖರೀದಿಸುವ ಅವಕಾಶವಿತ್ತು. ಆತ ಕೃಷ್ಣ ಮಾದರ ಮತ್ತು ನಾಗನಗೌಡನ ಭೇಟಿಗೆ ಬರುವ ಮುನ್ನವೇ ಮಾಝಾ ಬಾಟಲಿಯಲ್ಲಿ ಕೀಟನಾಶಕ ತುಂಬಿಕೊಂಡು ಬಂದಿದ್ದ. ನಂತರ ಇವರಿಬ್ಬರು ತಂದ ಕೀಟನಾಶಕವನ್ನೂ ಅದಕ್ಕೆ ಸೇರಿಸಿದ್ದರು. ನಂತರ ಬಾಟಲಿಯನ್ನು ಕೃಷ್ಣ ಮಾದರ ಕೈಗೆ ಕೊಡಲಾಗಿತ್ತು ಎಂದು ವಿವರಿಸಿದ್ದಾರೆ.

ಕೃಷ್ಣ ಮಾದರ ವಿಷವನ್ನು ತೆಗೆದುಕೊಂಡು ಹೋಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಬಾಲಕನಿಗೆ ಕೊಟ್ಟಿದ್ದ. ಅದನ್ನು ಶಾಲೆಯ ಟ್ಯಾಂಕ್‌ಗೆ ಸುರಿಯುವಂತೆ ಸೂಚಿಸಿದ್ದ. ಇದಕ್ಕಾಗಿ ಬಾಲಕನಿಗೆ ಸ್ವಲ್ಪ ದುಡ್ಡು ಕೊಟ್ಟಿದ್ದ. ತಿಂಡಿ ತಿನಿಸುಗಳನ್ನು ನೀಡಿ ಪುಸಲಾಯಿಸಿದ್ದ. ಬಾಲಕ ಶಾಲೆಯ ಟ್ಯಾಂಕ್‌ಗೆ ಕೀಟನಾಶಕ ಸುರಿಯುವ ಮುನ್ನ ಈ ಬಾಟಲಿಯಲ್ಲಿ ಏನಿದೆ? ಎಂದು ಕೇಳಿದ್ದ. ಅದಕ್ಕೆ ಆರೋಪಿಗಳು ಇದರಲ್ಲಿ ಜ್ಯೂಸ್ ಇದೆ. ಟ್ಯಾಂಕ್‌ಗೆ ಸುರಿದರೆ ನೀರು ಸಿಹಿಯಾಗುತ್ತದೆ ಎಂದಿದ್ದರು. ಈ ಮಾತನ್ನು ನಂಬಿದ್ದ ಮುಗ್ದ ಬಾಲಕ ನೀರಿನ ಟ್ಯಾಂಕ್‌ಗೆ ಕೀಟನಾಶಕ ಸುರಿದಿದ್ದ. ಬಾಲಕ ವಿಷ ಸುರಿದು ಆ ಟ್ಯಾಂಕ್‌ನಿಂದ ಸ್ವಲ್ಪ ನೀರು ತೆಗೆದುಕೊಂಡು ಬರುವಾಗ ಕೊಂಚ ಗಲಿಬಿಲಿಗೊಂಡಿದ್ದ. ಈ ವೇಳೆ ಆತನ ಕೈಯಿಂದ ವಿಷದ ಬಾಟಲಿ ಕೆಳಗೆ ಬಿದ್ದಿತ್ತು. ಅದು ದುಷ್ಕೃತ್ಯದ ಸುಳಿವನ್ನು ನೀಡಿತ್ತು ಎಂದು ಹೇಳಿದ್ದಾರೆ.

ಪ್ರಮುಖ ಆರೋಪಿ ಸಾಗರ್ ಪಾಟೀಲ್, ಇನ್ನೊಬ್ಬ ಆರೋಪಿ ಕೃಷ್ಣ ಮಾದರ ಮೂಲಕ ದುಷ್ಕೃತ್ಯವನ್ನು ಮಾಡಿಸಿದ್ದ. ಮೂಲಗಳ ಪ್ರಕಾರ, ಈ ಕೃಷ್ಣ ಮಾದರ ಅನ್ಯಜಾತಿಯ ಹುಡುಗಿಯೊಬ್ಬರನ್ನು ಪ್ರೀತಿಸುತಿದ್ದಾರೆ. ಇದಕ್ಕೆ ಅಸ್ತ್ರವಾಗಿ ಮಾಡಿಕೊಂಡ ಸಾಗರ್ ಪಾಟೀಲ್, ತಾನು ಹೇಳಿದ ಕೆಲಸ ಮಾಡದಿದ್ದೆ “ನೀನು ಅನ್ಯಜಾತಿಯ ಹುಡುಗಿಯನ್ನು ಪ್ರೀತಿಸುತ್ತಿರುವ ವಿಷಯ ಬಹಿರಂಗಪಡಿಸುತ್ತೇನೆ” ಎಂದು ಬೆದರಿಸಿದ್ದ. ಹಾಗಾಗಿ, ಕೃಷ್ಣ ಮಾದರ ವಿಷ ಬೆರೆಸಲು ಒಪ್ಪಿಕೊಂಡಿದ್ದ ಎನ್ನಲಾಗಿದೆ.

ಧರ್ಮಸ್ಥಳ ಪ್ರಕರಣ: ನ್ಯಾಯಾಧೀಶರ ಮೇಲೆ ಆಕ್ಷೇಪ, ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...