Homeಕರ್ನಾಟಕಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ...

ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ

ಪ್ರಮುಖ ಆರೋಪಿ ಸಾಗರ್ ಪಾಟೀಲ್ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ , ಮಕ್ಕಳನ್ನು ಕೊಂದು ಶಿಕ್ಷಕನಿಗೆ ಕೆಟ್ಟ ಹೆಸರು ತರಲು ಯತ್ನಿಸಿದ ದುರುಳರು

- Advertisement -
- Advertisement -

ಬೆಳಗಾವಿ ಜಿಲ್ಲೆ ಸವದತ್ತಿ ‌ತಾಲೂಕು ಹೂಲಿಕಟ್ಟಿ ಗ್ರಾಮದ ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ (ಕೀಟನಾಶಕ) ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಗರ ಪಾಟೀಲ, ನಾಗನಗೌಡ ಪಾಟೀಲ ಮತ್ತು ಕೃಷ್ಣ ಮಾದರ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ ಪಾಟೀಲ ಪ್ರಕರಣದ ಪ್ರಮುಖ ಆರೋಪಿ. ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಘಟಕದ ಅಧ್ಯಕ್ಷನಾಗಿರುವ ಈತ, ಸರ್ಕಾರಿ ಶಾಲೆಯಲ್ಲಿ 13 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿರುವ ಮುಸ್ಲಿಂ ಸಮುದಾಯದ ಸುಲೇಮಾನ್ ಗೋರಿನಾಯ್ಕ ಅವರಿಗೆ ಕೆಟ್ಟ ಹೆಸರು ತರಲು ಮತ್ತು ಅವರ ವರ್ಗಾವಣೆ ಆಗಬೇಕು ಎಂಬ ಉದ್ದೇಶದಿಂದ ಈ ದುಷ್ಕೃತ್ಯವೆಸಗಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಶನಿವಾರ (ಆ.2) ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಸ್ಪಿ) ಡಾ. ಭೀಮಾಶಂಕರ ಗುಳೇದ್‌ ಪ್ರಕರಣದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದರಿಂದ ಹಲವು ಮಕ್ಕಳು ಅಸ್ವಸ್ತಗೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಸವದತ್ತಿ ಠಾಣೆ ಪೊಲೀಸರು ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲೊಂದು ಬಾಟಲಿ ದೊರೆತಿತ್ತು. ಅದರಲ್ಲಿ ವಿಷದ ಅಂಶ ಇದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರ ಆಧಾರದ ಮೇಲೆ ಮತ್ತು ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುಲೇಮಾನ್ ಗೋರಿನಾಯ್ಕ್ ಅವರು ನೀಡಿರುವ ದೂರಿನ ಆಧಾರ ಮೇಲೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದ್ದಾರೆ.

ಸವದತ್ತಿ ಠಾಣೆಯ ಪೊಲೀಸರು ಬಹಳ ವೈಜ್ಞಾನಿಕವಾಗಿ, ತುಂಬಾ ಮುತುವರ್ಜಿ ವಹಿಸಿಕೊಂಡು ಈ ಪ್ರಕರಣವನ್ನು ಬೇಧಿಸಿದ್ದಾರೆ. ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಹೂಲಿಕಟ್ಟೆ ಗ್ರಾಮದ ಕೃಷ್ಣ ಮಾದರ, ನಾಗನಗೌಡ ಪಾಟೀಲ್ ಮತ್ತು ನಾಗನಗೌಡನ ಹತ್ತಿರದ ಸಂಬಂಧಿ ಸಾಗರ್ ಪಾಟೀಲ್ ಬಂಧಿತ ಆರೋಪಿಗಳು ಎಂದು ತಿಳಿಸಿದ್ದಾರೆ.
ದುರದೃಷ್ಟಕರ ಸಂಗತಿಯೆಂದರೆ ಬಂಧಿತರೆಲ್ಲ ಯುವಕರು. ನಾಡನ್ನು ಕಟ್ಟಿ ಬೆಳೆಸಬೇಕಾದ ವಯಸ್ಸಲ್ಲಿ ಈ ರೀತಿಯ ದುಷ್ಕೃತ್ಯಕ್ಕೆ ಕೈ ಹಾಕಿದ್ದಾರೆ. ತಮ್ಮ ಕೃತ್ಯಕ್ಕೆ ಒಬ್ಬರ ಬಾಲಕನನ್ನೂ ಬಳಸಿಕೊಂಡಿದ್ದಾರೆ. ಆದರೆ, ತನಿಖೆಯಲ್ಲಿ ಆತ ಅಮಾಯಕ ಎಂದು ಗೊತ್ತಾಗಿದೆ. ಆರೋಪಿಗಳು ಅವನ ಮುಗ್ದತೆಯನ್ನು ತಮ್ಮ ಹೀನಾಯ ಕೃತ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಸಾಗರ್ ಪಾಟೀಲ್. ಈತನೇ ಈ ದುಷ್ಕೃತ್ಯದ ಕಾರಣೀಕರ್ತ. ಈತ ಈ ಆಘಾತಕಾರಿ ಕೃತ್ಯವೆಸಗಲು ಎರಡ್ಮೂರು ತಿಂಗಳಿನಿಂದ ಪೂರ್ವ ತಯಾರಿ ಮಾಡಿಕೊಂಡಿದ್ದ. ಅದಕ್ಕೆ ತನ್ನ ಜೊತೆ ಕೆಲಸ ಮಾಡುತ್ತಿದ್ದ ಚಾಲಕ ಕೃಷ್ಣ ಮಾದರನ ಸಹಾಯ ಪಡೆದಿದ್ದ. ಕೃಷ್ಣಗೆ ಸ್ವಲ್ಪ ಹಣ ಕೊಟ್ಟಿದ್ದ. ಆತನ ಮೂಲಕವೇ ವಿಷ ಖರೀದಿ ಮಾಡಿಸಿದ್ದ. ಅಪ್ರಾಪ್ತ ಬಾಲಕನನ್ನೂ ಆತನ ಮೂಲಕವೇ ಕರೆ ತಂದಿದ್ದ ಎಂದು ವಿವರಿಸಿದ್ದಾರೆ.

ಆರೋಪಿಗಳಾದ ಕೃಷ್ಣ ಮಾದರ ಮತ್ತು ನಾಗನಗೌಡ ಪಾಟೀಲ್ ದುಷ್ಕೃತ್ಯ ಎಸಗುವುದಕ್ಕಿಂತ 6 ದಿನಗಳ ಮುಂಚೆ (8ನೇ ತಾರೀಖು) ಮುನವಲ್ಲಿಗೆ ಹೋಗಿ ರಸಗೊಬ್ಬ ಮತ್ತು ಕೀಟನಾಶಕದ ಅಂಗಡಿಯಿಂದ ವಿಷ ಖರೀದಿಸಿದ್ದರು.
ಅದಕ್ಕೂ ಮುನ್ನ ಹೂಲಿಕಟ್ಟೆಯಲ್ಲಿ ಸಾಗರ್ ಪಾಟೀಲ ಜೊತೆ ಚರ್ಚೆ ನಡೆಸಿದ್ದರು ಎಂದು ಎಸ್ಪಿ ಹೇಳಿದ್ದಾರೆ.

13ನೇ ತಾರೀಕು ಆರೋಪಿಗಳು ಮತ್ತೊಮ್ಮೆ ಪರಸ್ಪರ ಚರ್ಚೆ ನಡೆಸಿದ್ದರು. ಅಂದೇ ಸಾಗರ್ ಪಾಟೀಲ್‌ಗೆ ವಿಷದ ಬಾಟಲಿಯನ್ನು ಹಸ್ತಾಂತರಿಸಿದ್ದರು. ಮಾಝಾ ಜ್ಯೂಸ್ ಬಾಟಲಿಯಲ್ಲಿ ವಿಷವನ್ನು ತುಂಬಲಾಗಿತ್ತು. ಸಾಗರ್ ಪಾಟೀಲ್ ರೈತನಾಗಿರುವುದರಿಂದ ಆತನಿಗೆ ಕೀಟನಾಶಕ ಖರೀದಿಸುವ ಅವಕಾಶವಿತ್ತು. ಆತ ಕೃಷ್ಣ ಮಾದರ ಮತ್ತು ನಾಗನಗೌಡನ ಭೇಟಿಗೆ ಬರುವ ಮುನ್ನವೇ ಮಾಝಾ ಬಾಟಲಿಯಲ್ಲಿ ಕೀಟನಾಶಕ ತುಂಬಿಕೊಂಡು ಬಂದಿದ್ದ. ನಂತರ ಇವರಿಬ್ಬರು ತಂದ ಕೀಟನಾಶಕವನ್ನೂ ಅದಕ್ಕೆ ಸೇರಿಸಿದ್ದರು. ನಂತರ ಬಾಟಲಿಯನ್ನು ಕೃಷ್ಣ ಮಾದರ ಕೈಗೆ ಕೊಡಲಾಗಿತ್ತು ಎಂದು ವಿವರಿಸಿದ್ದಾರೆ.

ಕೃಷ್ಣ ಮಾದರ ವಿಷವನ್ನು ತೆಗೆದುಕೊಂಡು ಹೋಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಬಾಲಕನಿಗೆ ಕೊಟ್ಟಿದ್ದ. ಅದನ್ನು ಶಾಲೆಯ ಟ್ಯಾಂಕ್‌ಗೆ ಸುರಿಯುವಂತೆ ಸೂಚಿಸಿದ್ದ. ಇದಕ್ಕಾಗಿ ಬಾಲಕನಿಗೆ ಸ್ವಲ್ಪ ದುಡ್ಡು ಕೊಟ್ಟಿದ್ದ. ತಿಂಡಿ ತಿನಿಸುಗಳನ್ನು ನೀಡಿ ಪುಸಲಾಯಿಸಿದ್ದ. ಬಾಲಕ ಶಾಲೆಯ ಟ್ಯಾಂಕ್‌ಗೆ ಕೀಟನಾಶಕ ಸುರಿಯುವ ಮುನ್ನ ಈ ಬಾಟಲಿಯಲ್ಲಿ ಏನಿದೆ? ಎಂದು ಕೇಳಿದ್ದ. ಅದಕ್ಕೆ ಆರೋಪಿಗಳು ಇದರಲ್ಲಿ ಜ್ಯೂಸ್ ಇದೆ. ಟ್ಯಾಂಕ್‌ಗೆ ಸುರಿದರೆ ನೀರು ಸಿಹಿಯಾಗುತ್ತದೆ ಎಂದಿದ್ದರು. ಈ ಮಾತನ್ನು ನಂಬಿದ್ದ ಮುಗ್ದ ಬಾಲಕ ನೀರಿನ ಟ್ಯಾಂಕ್‌ಗೆ ಕೀಟನಾಶಕ ಸುರಿದಿದ್ದ. ಬಾಲಕ ವಿಷ ಸುರಿದು ಆ ಟ್ಯಾಂಕ್‌ನಿಂದ ಸ್ವಲ್ಪ ನೀರು ತೆಗೆದುಕೊಂಡು ಬರುವಾಗ ಕೊಂಚ ಗಲಿಬಿಲಿಗೊಂಡಿದ್ದ. ಈ ವೇಳೆ ಆತನ ಕೈಯಿಂದ ವಿಷದ ಬಾಟಲಿ ಕೆಳಗೆ ಬಿದ್ದಿತ್ತು. ಅದು ದುಷ್ಕೃತ್ಯದ ಸುಳಿವನ್ನು ನೀಡಿತ್ತು ಎಂದು ಹೇಳಿದ್ದಾರೆ.

ಪ್ರಮುಖ ಆರೋಪಿ ಸಾಗರ್ ಪಾಟೀಲ್, ಇನ್ನೊಬ್ಬ ಆರೋಪಿ ಕೃಷ್ಣ ಮಾದರ ಮೂಲಕ ದುಷ್ಕೃತ್ಯವನ್ನು ಮಾಡಿಸಿದ್ದ. ಮೂಲಗಳ ಪ್ರಕಾರ, ಈ ಕೃಷ್ಣ ಮಾದರ ಅನ್ಯಜಾತಿಯ ಹುಡುಗಿಯೊಬ್ಬರನ್ನು ಪ್ರೀತಿಸುತಿದ್ದಾರೆ. ಇದಕ್ಕೆ ಅಸ್ತ್ರವಾಗಿ ಮಾಡಿಕೊಂಡ ಸಾಗರ್ ಪಾಟೀಲ್, ತಾನು ಹೇಳಿದ ಕೆಲಸ ಮಾಡದಿದ್ದೆ “ನೀನು ಅನ್ಯಜಾತಿಯ ಹುಡುಗಿಯನ್ನು ಪ್ರೀತಿಸುತ್ತಿರುವ ವಿಷಯ ಬಹಿರಂಗಪಡಿಸುತ್ತೇನೆ” ಎಂದು ಬೆದರಿಸಿದ್ದ. ಹಾಗಾಗಿ, ಕೃಷ್ಣ ಮಾದರ ವಿಷ ಬೆರೆಸಲು ಒಪ್ಪಿಕೊಂಡಿದ್ದ ಎನ್ನಲಾಗಿದೆ.

ಧರ್ಮಸ್ಥಳ ಪ್ರಕರಣ: ನ್ಯಾಯಾಧೀಶರ ಮೇಲೆ ಆಕ್ಷೇಪ, ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...