Homeಕರ್ನಾಟಕಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ...

ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ

ಪ್ರಮುಖ ಆರೋಪಿ ಸಾಗರ್ ಪಾಟೀಲ್ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ , ಮಕ್ಕಳನ್ನು ಕೊಂದು ಶಿಕ್ಷಕನಿಗೆ ಕೆಟ್ಟ ಹೆಸರು ತರಲು ಯತ್ನಿಸಿದ ದುರುಳರು

- Advertisement -
- Advertisement -

ಬೆಳಗಾವಿ ಜಿಲ್ಲೆ ಸವದತ್ತಿ ‌ತಾಲೂಕು ಹೂಲಿಕಟ್ಟಿ ಗ್ರಾಮದ ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ (ಕೀಟನಾಶಕ) ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಗರ ಪಾಟೀಲ, ನಾಗನಗೌಡ ಪಾಟೀಲ ಮತ್ತು ಕೃಷ್ಣ ಮಾದರ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ ಪಾಟೀಲ ಪ್ರಕರಣದ ಪ್ರಮುಖ ಆರೋಪಿ. ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಘಟಕದ ಅಧ್ಯಕ್ಷನಾಗಿರುವ ಈತ, ಸರ್ಕಾರಿ ಶಾಲೆಯಲ್ಲಿ 13 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿರುವ ಮುಸ್ಲಿಂ ಸಮುದಾಯದ ಸುಲೇಮಾನ್ ಗೋರಿನಾಯ್ಕ ಅವರಿಗೆ ಕೆಟ್ಟ ಹೆಸರು ತರಲು ಮತ್ತು ಅವರ ವರ್ಗಾವಣೆ ಆಗಬೇಕು ಎಂಬ ಉದ್ದೇಶದಿಂದ ಈ ದುಷ್ಕೃತ್ಯವೆಸಗಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಶನಿವಾರ (ಆ.2) ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಸ್ಪಿ) ಡಾ. ಭೀಮಾಶಂಕರ ಗುಳೇದ್‌ ಪ್ರಕರಣದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದರಿಂದ ಹಲವು ಮಕ್ಕಳು ಅಸ್ವಸ್ತಗೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಸವದತ್ತಿ ಠಾಣೆ ಪೊಲೀಸರು ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲೊಂದು ಬಾಟಲಿ ದೊರೆತಿತ್ತು. ಅದರಲ್ಲಿ ವಿಷದ ಅಂಶ ಇದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರ ಆಧಾರದ ಮೇಲೆ ಮತ್ತು ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುಲೇಮಾನ್ ಗೋರಿನಾಯ್ಕ್ ಅವರು ನೀಡಿರುವ ದೂರಿನ ಆಧಾರ ಮೇಲೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದ್ದಾರೆ.

ಸವದತ್ತಿ ಠಾಣೆಯ ಪೊಲೀಸರು ಬಹಳ ವೈಜ್ಞಾನಿಕವಾಗಿ, ತುಂಬಾ ಮುತುವರ್ಜಿ ವಹಿಸಿಕೊಂಡು ಈ ಪ್ರಕರಣವನ್ನು ಬೇಧಿಸಿದ್ದಾರೆ. ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಹೂಲಿಕಟ್ಟೆ ಗ್ರಾಮದ ಕೃಷ್ಣ ಮಾದರ, ನಾಗನಗೌಡ ಪಾಟೀಲ್ ಮತ್ತು ನಾಗನಗೌಡನ ಹತ್ತಿರದ ಸಂಬಂಧಿ ಸಾಗರ್ ಪಾಟೀಲ್ ಬಂಧಿತ ಆರೋಪಿಗಳು ಎಂದು ತಿಳಿಸಿದ್ದಾರೆ.
ದುರದೃಷ್ಟಕರ ಸಂಗತಿಯೆಂದರೆ ಬಂಧಿತರೆಲ್ಲ ಯುವಕರು. ನಾಡನ್ನು ಕಟ್ಟಿ ಬೆಳೆಸಬೇಕಾದ ವಯಸ್ಸಲ್ಲಿ ಈ ರೀತಿಯ ದುಷ್ಕೃತ್ಯಕ್ಕೆ ಕೈ ಹಾಕಿದ್ದಾರೆ. ತಮ್ಮ ಕೃತ್ಯಕ್ಕೆ ಒಬ್ಬರ ಬಾಲಕನನ್ನೂ ಬಳಸಿಕೊಂಡಿದ್ದಾರೆ. ಆದರೆ, ತನಿಖೆಯಲ್ಲಿ ಆತ ಅಮಾಯಕ ಎಂದು ಗೊತ್ತಾಗಿದೆ. ಆರೋಪಿಗಳು ಅವನ ಮುಗ್ದತೆಯನ್ನು ತಮ್ಮ ಹೀನಾಯ ಕೃತ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಸಾಗರ್ ಪಾಟೀಲ್. ಈತನೇ ಈ ದುಷ್ಕೃತ್ಯದ ಕಾರಣೀಕರ್ತ. ಈತ ಈ ಆಘಾತಕಾರಿ ಕೃತ್ಯವೆಸಗಲು ಎರಡ್ಮೂರು ತಿಂಗಳಿನಿಂದ ಪೂರ್ವ ತಯಾರಿ ಮಾಡಿಕೊಂಡಿದ್ದ. ಅದಕ್ಕೆ ತನ್ನ ಜೊತೆ ಕೆಲಸ ಮಾಡುತ್ತಿದ್ದ ಚಾಲಕ ಕೃಷ್ಣ ಮಾದರನ ಸಹಾಯ ಪಡೆದಿದ್ದ. ಕೃಷ್ಣಗೆ ಸ್ವಲ್ಪ ಹಣ ಕೊಟ್ಟಿದ್ದ. ಆತನ ಮೂಲಕವೇ ವಿಷ ಖರೀದಿ ಮಾಡಿಸಿದ್ದ. ಅಪ್ರಾಪ್ತ ಬಾಲಕನನ್ನೂ ಆತನ ಮೂಲಕವೇ ಕರೆ ತಂದಿದ್ದ ಎಂದು ವಿವರಿಸಿದ್ದಾರೆ.

ಆರೋಪಿಗಳಾದ ಕೃಷ್ಣ ಮಾದರ ಮತ್ತು ನಾಗನಗೌಡ ಪಾಟೀಲ್ ದುಷ್ಕೃತ್ಯ ಎಸಗುವುದಕ್ಕಿಂತ 6 ದಿನಗಳ ಮುಂಚೆ (8ನೇ ತಾರೀಖು) ಮುನವಲ್ಲಿಗೆ ಹೋಗಿ ರಸಗೊಬ್ಬ ಮತ್ತು ಕೀಟನಾಶಕದ ಅಂಗಡಿಯಿಂದ ವಿಷ ಖರೀದಿಸಿದ್ದರು.
ಅದಕ್ಕೂ ಮುನ್ನ ಹೂಲಿಕಟ್ಟೆಯಲ್ಲಿ ಸಾಗರ್ ಪಾಟೀಲ ಜೊತೆ ಚರ್ಚೆ ನಡೆಸಿದ್ದರು ಎಂದು ಎಸ್ಪಿ ಹೇಳಿದ್ದಾರೆ.

13ನೇ ತಾರೀಕು ಆರೋಪಿಗಳು ಮತ್ತೊಮ್ಮೆ ಪರಸ್ಪರ ಚರ್ಚೆ ನಡೆಸಿದ್ದರು. ಅಂದೇ ಸಾಗರ್ ಪಾಟೀಲ್‌ಗೆ ವಿಷದ ಬಾಟಲಿಯನ್ನು ಹಸ್ತಾಂತರಿಸಿದ್ದರು. ಮಾಝಾ ಜ್ಯೂಸ್ ಬಾಟಲಿಯಲ್ಲಿ ವಿಷವನ್ನು ತುಂಬಲಾಗಿತ್ತು. ಸಾಗರ್ ಪಾಟೀಲ್ ರೈತನಾಗಿರುವುದರಿಂದ ಆತನಿಗೆ ಕೀಟನಾಶಕ ಖರೀದಿಸುವ ಅವಕಾಶವಿತ್ತು. ಆತ ಕೃಷ್ಣ ಮಾದರ ಮತ್ತು ನಾಗನಗೌಡನ ಭೇಟಿಗೆ ಬರುವ ಮುನ್ನವೇ ಮಾಝಾ ಬಾಟಲಿಯಲ್ಲಿ ಕೀಟನಾಶಕ ತುಂಬಿಕೊಂಡು ಬಂದಿದ್ದ. ನಂತರ ಇವರಿಬ್ಬರು ತಂದ ಕೀಟನಾಶಕವನ್ನೂ ಅದಕ್ಕೆ ಸೇರಿಸಿದ್ದರು. ನಂತರ ಬಾಟಲಿಯನ್ನು ಕೃಷ್ಣ ಮಾದರ ಕೈಗೆ ಕೊಡಲಾಗಿತ್ತು ಎಂದು ವಿವರಿಸಿದ್ದಾರೆ.

ಕೃಷ್ಣ ಮಾದರ ವಿಷವನ್ನು ತೆಗೆದುಕೊಂಡು ಹೋಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಬಾಲಕನಿಗೆ ಕೊಟ್ಟಿದ್ದ. ಅದನ್ನು ಶಾಲೆಯ ಟ್ಯಾಂಕ್‌ಗೆ ಸುರಿಯುವಂತೆ ಸೂಚಿಸಿದ್ದ. ಇದಕ್ಕಾಗಿ ಬಾಲಕನಿಗೆ ಸ್ವಲ್ಪ ದುಡ್ಡು ಕೊಟ್ಟಿದ್ದ. ತಿಂಡಿ ತಿನಿಸುಗಳನ್ನು ನೀಡಿ ಪುಸಲಾಯಿಸಿದ್ದ. ಬಾಲಕ ಶಾಲೆಯ ಟ್ಯಾಂಕ್‌ಗೆ ಕೀಟನಾಶಕ ಸುರಿಯುವ ಮುನ್ನ ಈ ಬಾಟಲಿಯಲ್ಲಿ ಏನಿದೆ? ಎಂದು ಕೇಳಿದ್ದ. ಅದಕ್ಕೆ ಆರೋಪಿಗಳು ಇದರಲ್ಲಿ ಜ್ಯೂಸ್ ಇದೆ. ಟ್ಯಾಂಕ್‌ಗೆ ಸುರಿದರೆ ನೀರು ಸಿಹಿಯಾಗುತ್ತದೆ ಎಂದಿದ್ದರು. ಈ ಮಾತನ್ನು ನಂಬಿದ್ದ ಮುಗ್ದ ಬಾಲಕ ನೀರಿನ ಟ್ಯಾಂಕ್‌ಗೆ ಕೀಟನಾಶಕ ಸುರಿದಿದ್ದ. ಬಾಲಕ ವಿಷ ಸುರಿದು ಆ ಟ್ಯಾಂಕ್‌ನಿಂದ ಸ್ವಲ್ಪ ನೀರು ತೆಗೆದುಕೊಂಡು ಬರುವಾಗ ಕೊಂಚ ಗಲಿಬಿಲಿಗೊಂಡಿದ್ದ. ಈ ವೇಳೆ ಆತನ ಕೈಯಿಂದ ವಿಷದ ಬಾಟಲಿ ಕೆಳಗೆ ಬಿದ್ದಿತ್ತು. ಅದು ದುಷ್ಕೃತ್ಯದ ಸುಳಿವನ್ನು ನೀಡಿತ್ತು ಎಂದು ಹೇಳಿದ್ದಾರೆ.

ಪ್ರಮುಖ ಆರೋಪಿ ಸಾಗರ್ ಪಾಟೀಲ್, ಇನ್ನೊಬ್ಬ ಆರೋಪಿ ಕೃಷ್ಣ ಮಾದರ ಮೂಲಕ ದುಷ್ಕೃತ್ಯವನ್ನು ಮಾಡಿಸಿದ್ದ. ಮೂಲಗಳ ಪ್ರಕಾರ, ಈ ಕೃಷ್ಣ ಮಾದರ ಅನ್ಯಜಾತಿಯ ಹುಡುಗಿಯೊಬ್ಬರನ್ನು ಪ್ರೀತಿಸುತಿದ್ದಾರೆ. ಇದಕ್ಕೆ ಅಸ್ತ್ರವಾಗಿ ಮಾಡಿಕೊಂಡ ಸಾಗರ್ ಪಾಟೀಲ್, ತಾನು ಹೇಳಿದ ಕೆಲಸ ಮಾಡದಿದ್ದೆ “ನೀನು ಅನ್ಯಜಾತಿಯ ಹುಡುಗಿಯನ್ನು ಪ್ರೀತಿಸುತ್ತಿರುವ ವಿಷಯ ಬಹಿರಂಗಪಡಿಸುತ್ತೇನೆ” ಎಂದು ಬೆದರಿಸಿದ್ದ. ಹಾಗಾಗಿ, ಕೃಷ್ಣ ಮಾದರ ವಿಷ ಬೆರೆಸಲು ಒಪ್ಪಿಕೊಂಡಿದ್ದ ಎನ್ನಲಾಗಿದೆ.

ಧರ್ಮಸ್ಥಳ ಪ್ರಕರಣ: ನ್ಯಾಯಾಧೀಶರ ಮೇಲೆ ಆಕ್ಷೇಪ, ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...