Homeಕರ್ನಾಟಕಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ...

ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ

ಪ್ರಮುಖ ಆರೋಪಿ ಸಾಗರ್ ಪಾಟೀಲ್ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ , ಮಕ್ಕಳನ್ನು ಕೊಂದು ಶಿಕ್ಷಕನಿಗೆ ಕೆಟ್ಟ ಹೆಸರು ತರಲು ಯತ್ನಿಸಿದ ದುರುಳರು

- Advertisement -
- Advertisement -

ಬೆಳಗಾವಿ ಜಿಲ್ಲೆ ಸವದತ್ತಿ ‌ತಾಲೂಕು ಹೂಲಿಕಟ್ಟಿ ಗ್ರಾಮದ ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ (ಕೀಟನಾಶಕ) ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಗರ ಪಾಟೀಲ, ನಾಗನಗೌಡ ಪಾಟೀಲ ಮತ್ತು ಕೃಷ್ಣ ಮಾದರ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ ಪಾಟೀಲ ಪ್ರಕರಣದ ಪ್ರಮುಖ ಆರೋಪಿ. ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಘಟಕದ ಅಧ್ಯಕ್ಷನಾಗಿರುವ ಈತ, ಸರ್ಕಾರಿ ಶಾಲೆಯಲ್ಲಿ 13 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿರುವ ಮುಸ್ಲಿಂ ಸಮುದಾಯದ ಸುಲೇಮಾನ್ ಗೋರಿನಾಯ್ಕ ಅವರಿಗೆ ಕೆಟ್ಟ ಹೆಸರು ತರಲು ಮತ್ತು ಅವರ ವರ್ಗಾವಣೆ ಆಗಬೇಕು ಎಂಬ ಉದ್ದೇಶದಿಂದ ಈ ದುಷ್ಕೃತ್ಯವೆಸಗಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಶನಿವಾರ (ಆ.2) ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಸ್ಪಿ) ಡಾ. ಭೀಮಾಶಂಕರ ಗುಳೇದ್‌ ಪ್ರಕರಣದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದರಿಂದ ಹಲವು ಮಕ್ಕಳು ಅಸ್ವಸ್ತಗೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಸವದತ್ತಿ ಠಾಣೆ ಪೊಲೀಸರು ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲೊಂದು ಬಾಟಲಿ ದೊರೆತಿತ್ತು. ಅದರಲ್ಲಿ ವಿಷದ ಅಂಶ ಇದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರ ಆಧಾರದ ಮೇಲೆ ಮತ್ತು ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುಲೇಮಾನ್ ಗೋರಿನಾಯ್ಕ್ ಅವರು ನೀಡಿರುವ ದೂರಿನ ಆಧಾರ ಮೇಲೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದ್ದಾರೆ.

ಸವದತ್ತಿ ಠಾಣೆಯ ಪೊಲೀಸರು ಬಹಳ ವೈಜ್ಞಾನಿಕವಾಗಿ, ತುಂಬಾ ಮುತುವರ್ಜಿ ವಹಿಸಿಕೊಂಡು ಈ ಪ್ರಕರಣವನ್ನು ಬೇಧಿಸಿದ್ದಾರೆ. ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಹೂಲಿಕಟ್ಟೆ ಗ್ರಾಮದ ಕೃಷ್ಣ ಮಾದರ, ನಾಗನಗೌಡ ಪಾಟೀಲ್ ಮತ್ತು ನಾಗನಗೌಡನ ಹತ್ತಿರದ ಸಂಬಂಧಿ ಸಾಗರ್ ಪಾಟೀಲ್ ಬಂಧಿತ ಆರೋಪಿಗಳು ಎಂದು ತಿಳಿಸಿದ್ದಾರೆ.
ದುರದೃಷ್ಟಕರ ಸಂಗತಿಯೆಂದರೆ ಬಂಧಿತರೆಲ್ಲ ಯುವಕರು. ನಾಡನ್ನು ಕಟ್ಟಿ ಬೆಳೆಸಬೇಕಾದ ವಯಸ್ಸಲ್ಲಿ ಈ ರೀತಿಯ ದುಷ್ಕೃತ್ಯಕ್ಕೆ ಕೈ ಹಾಕಿದ್ದಾರೆ. ತಮ್ಮ ಕೃತ್ಯಕ್ಕೆ ಒಬ್ಬರ ಬಾಲಕನನ್ನೂ ಬಳಸಿಕೊಂಡಿದ್ದಾರೆ. ಆದರೆ, ತನಿಖೆಯಲ್ಲಿ ಆತ ಅಮಾಯಕ ಎಂದು ಗೊತ್ತಾಗಿದೆ. ಆರೋಪಿಗಳು ಅವನ ಮುಗ್ದತೆಯನ್ನು ತಮ್ಮ ಹೀನಾಯ ಕೃತ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಸಾಗರ್ ಪಾಟೀಲ್. ಈತನೇ ಈ ದುಷ್ಕೃತ್ಯದ ಕಾರಣೀಕರ್ತ. ಈತ ಈ ಆಘಾತಕಾರಿ ಕೃತ್ಯವೆಸಗಲು ಎರಡ್ಮೂರು ತಿಂಗಳಿನಿಂದ ಪೂರ್ವ ತಯಾರಿ ಮಾಡಿಕೊಂಡಿದ್ದ. ಅದಕ್ಕೆ ತನ್ನ ಜೊತೆ ಕೆಲಸ ಮಾಡುತ್ತಿದ್ದ ಚಾಲಕ ಕೃಷ್ಣ ಮಾದರನ ಸಹಾಯ ಪಡೆದಿದ್ದ. ಕೃಷ್ಣಗೆ ಸ್ವಲ್ಪ ಹಣ ಕೊಟ್ಟಿದ್ದ. ಆತನ ಮೂಲಕವೇ ವಿಷ ಖರೀದಿ ಮಾಡಿಸಿದ್ದ. ಅಪ್ರಾಪ್ತ ಬಾಲಕನನ್ನೂ ಆತನ ಮೂಲಕವೇ ಕರೆ ತಂದಿದ್ದ ಎಂದು ವಿವರಿಸಿದ್ದಾರೆ.

ಆರೋಪಿಗಳಾದ ಕೃಷ್ಣ ಮಾದರ ಮತ್ತು ನಾಗನಗೌಡ ಪಾಟೀಲ್ ದುಷ್ಕೃತ್ಯ ಎಸಗುವುದಕ್ಕಿಂತ 6 ದಿನಗಳ ಮುಂಚೆ (8ನೇ ತಾರೀಖು) ಮುನವಲ್ಲಿಗೆ ಹೋಗಿ ರಸಗೊಬ್ಬ ಮತ್ತು ಕೀಟನಾಶಕದ ಅಂಗಡಿಯಿಂದ ವಿಷ ಖರೀದಿಸಿದ್ದರು.
ಅದಕ್ಕೂ ಮುನ್ನ ಹೂಲಿಕಟ್ಟೆಯಲ್ಲಿ ಸಾಗರ್ ಪಾಟೀಲ ಜೊತೆ ಚರ್ಚೆ ನಡೆಸಿದ್ದರು ಎಂದು ಎಸ್ಪಿ ಹೇಳಿದ್ದಾರೆ.

13ನೇ ತಾರೀಕು ಆರೋಪಿಗಳು ಮತ್ತೊಮ್ಮೆ ಪರಸ್ಪರ ಚರ್ಚೆ ನಡೆಸಿದ್ದರು. ಅಂದೇ ಸಾಗರ್ ಪಾಟೀಲ್‌ಗೆ ವಿಷದ ಬಾಟಲಿಯನ್ನು ಹಸ್ತಾಂತರಿಸಿದ್ದರು. ಮಾಝಾ ಜ್ಯೂಸ್ ಬಾಟಲಿಯಲ್ಲಿ ವಿಷವನ್ನು ತುಂಬಲಾಗಿತ್ತು. ಸಾಗರ್ ಪಾಟೀಲ್ ರೈತನಾಗಿರುವುದರಿಂದ ಆತನಿಗೆ ಕೀಟನಾಶಕ ಖರೀದಿಸುವ ಅವಕಾಶವಿತ್ತು. ಆತ ಕೃಷ್ಣ ಮಾದರ ಮತ್ತು ನಾಗನಗೌಡನ ಭೇಟಿಗೆ ಬರುವ ಮುನ್ನವೇ ಮಾಝಾ ಬಾಟಲಿಯಲ್ಲಿ ಕೀಟನಾಶಕ ತುಂಬಿಕೊಂಡು ಬಂದಿದ್ದ. ನಂತರ ಇವರಿಬ್ಬರು ತಂದ ಕೀಟನಾಶಕವನ್ನೂ ಅದಕ್ಕೆ ಸೇರಿಸಿದ್ದರು. ನಂತರ ಬಾಟಲಿಯನ್ನು ಕೃಷ್ಣ ಮಾದರ ಕೈಗೆ ಕೊಡಲಾಗಿತ್ತು ಎಂದು ವಿವರಿಸಿದ್ದಾರೆ.

ಕೃಷ್ಣ ಮಾದರ ವಿಷವನ್ನು ತೆಗೆದುಕೊಂಡು ಹೋಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಬಾಲಕನಿಗೆ ಕೊಟ್ಟಿದ್ದ. ಅದನ್ನು ಶಾಲೆಯ ಟ್ಯಾಂಕ್‌ಗೆ ಸುರಿಯುವಂತೆ ಸೂಚಿಸಿದ್ದ. ಇದಕ್ಕಾಗಿ ಬಾಲಕನಿಗೆ ಸ್ವಲ್ಪ ದುಡ್ಡು ಕೊಟ್ಟಿದ್ದ. ತಿಂಡಿ ತಿನಿಸುಗಳನ್ನು ನೀಡಿ ಪುಸಲಾಯಿಸಿದ್ದ. ಬಾಲಕ ಶಾಲೆಯ ಟ್ಯಾಂಕ್‌ಗೆ ಕೀಟನಾಶಕ ಸುರಿಯುವ ಮುನ್ನ ಈ ಬಾಟಲಿಯಲ್ಲಿ ಏನಿದೆ? ಎಂದು ಕೇಳಿದ್ದ. ಅದಕ್ಕೆ ಆರೋಪಿಗಳು ಇದರಲ್ಲಿ ಜ್ಯೂಸ್ ಇದೆ. ಟ್ಯಾಂಕ್‌ಗೆ ಸುರಿದರೆ ನೀರು ಸಿಹಿಯಾಗುತ್ತದೆ ಎಂದಿದ್ದರು. ಈ ಮಾತನ್ನು ನಂಬಿದ್ದ ಮುಗ್ದ ಬಾಲಕ ನೀರಿನ ಟ್ಯಾಂಕ್‌ಗೆ ಕೀಟನಾಶಕ ಸುರಿದಿದ್ದ. ಬಾಲಕ ವಿಷ ಸುರಿದು ಆ ಟ್ಯಾಂಕ್‌ನಿಂದ ಸ್ವಲ್ಪ ನೀರು ತೆಗೆದುಕೊಂಡು ಬರುವಾಗ ಕೊಂಚ ಗಲಿಬಿಲಿಗೊಂಡಿದ್ದ. ಈ ವೇಳೆ ಆತನ ಕೈಯಿಂದ ವಿಷದ ಬಾಟಲಿ ಕೆಳಗೆ ಬಿದ್ದಿತ್ತು. ಅದು ದುಷ್ಕೃತ್ಯದ ಸುಳಿವನ್ನು ನೀಡಿತ್ತು ಎಂದು ಹೇಳಿದ್ದಾರೆ.

ಪ್ರಮುಖ ಆರೋಪಿ ಸಾಗರ್ ಪಾಟೀಲ್, ಇನ್ನೊಬ್ಬ ಆರೋಪಿ ಕೃಷ್ಣ ಮಾದರ ಮೂಲಕ ದುಷ್ಕೃತ್ಯವನ್ನು ಮಾಡಿಸಿದ್ದ. ಮೂಲಗಳ ಪ್ರಕಾರ, ಈ ಕೃಷ್ಣ ಮಾದರ ಅನ್ಯಜಾತಿಯ ಹುಡುಗಿಯೊಬ್ಬರನ್ನು ಪ್ರೀತಿಸುತಿದ್ದಾರೆ. ಇದಕ್ಕೆ ಅಸ್ತ್ರವಾಗಿ ಮಾಡಿಕೊಂಡ ಸಾಗರ್ ಪಾಟೀಲ್, ತಾನು ಹೇಳಿದ ಕೆಲಸ ಮಾಡದಿದ್ದೆ “ನೀನು ಅನ್ಯಜಾತಿಯ ಹುಡುಗಿಯನ್ನು ಪ್ರೀತಿಸುತ್ತಿರುವ ವಿಷಯ ಬಹಿರಂಗಪಡಿಸುತ್ತೇನೆ” ಎಂದು ಬೆದರಿಸಿದ್ದ. ಹಾಗಾಗಿ, ಕೃಷ್ಣ ಮಾದರ ವಿಷ ಬೆರೆಸಲು ಒಪ್ಪಿಕೊಂಡಿದ್ದ ಎನ್ನಲಾಗಿದೆ.

ಧರ್ಮಸ್ಥಳ ಪ್ರಕರಣ: ನ್ಯಾಯಾಧೀಶರ ಮೇಲೆ ಆಕ್ಷೇಪ, ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...