Homeಕರ್ನಾಟಕಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ...

ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ

ಪ್ರಮುಖ ಆರೋಪಿ ಸಾಗರ್ ಪಾಟೀಲ್ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ , ಮಕ್ಕಳನ್ನು ಕೊಂದು ಶಿಕ್ಷಕನಿಗೆ ಕೆಟ್ಟ ಹೆಸರು ತರಲು ಯತ್ನಿಸಿದ ದುರುಳರು

- Advertisement -
- Advertisement -

ಬೆಳಗಾವಿ ಜಿಲ್ಲೆ ಸವದತ್ತಿ ‌ತಾಲೂಕು ಹೂಲಿಕಟ್ಟಿ ಗ್ರಾಮದ ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ (ಕೀಟನಾಶಕ) ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಗರ ಪಾಟೀಲ, ನಾಗನಗೌಡ ಪಾಟೀಲ ಮತ್ತು ಕೃಷ್ಣ ಮಾದರ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಗರ ಪಾಟೀಲ ಪ್ರಕರಣದ ಪ್ರಮುಖ ಆರೋಪಿ. ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಘಟಕದ ಅಧ್ಯಕ್ಷನಾಗಿರುವ ಈತ, ಸರ್ಕಾರಿ ಶಾಲೆಯಲ್ಲಿ 13 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿರುವ ಮುಸ್ಲಿಂ ಸಮುದಾಯದ ಸುಲೇಮಾನ್ ಗೋರಿನಾಯ್ಕ ಅವರಿಗೆ ಕೆಟ್ಟ ಹೆಸರು ತರಲು ಮತ್ತು ಅವರ ವರ್ಗಾವಣೆ ಆಗಬೇಕು ಎಂಬ ಉದ್ದೇಶದಿಂದ ಈ ದುಷ್ಕೃತ್ಯವೆಸಗಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಶನಿವಾರ (ಆ.2) ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಎಸ್ಪಿ) ಡಾ. ಭೀಮಾಶಂಕರ ಗುಳೇದ್‌ ಪ್ರಕರಣದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದರಿಂದ ಹಲವು ಮಕ್ಕಳು ಅಸ್ವಸ್ತಗೊಂಡಿದ್ದರು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಸವದತ್ತಿ ಠಾಣೆ ಪೊಲೀಸರು ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲೊಂದು ಬಾಟಲಿ ದೊರೆತಿತ್ತು. ಅದರಲ್ಲಿ ವಿಷದ ಅಂಶ ಇದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರ ಆಧಾರದ ಮೇಲೆ ಮತ್ತು ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸುಲೇಮಾನ್ ಗೋರಿನಾಯ್ಕ್ ಅವರು ನೀಡಿರುವ ದೂರಿನ ಆಧಾರ ಮೇಲೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದರು ಎಂದು ಹೇಳಿದ್ದಾರೆ.

ಸವದತ್ತಿ ಠಾಣೆಯ ಪೊಲೀಸರು ಬಹಳ ವೈಜ್ಞಾನಿಕವಾಗಿ, ತುಂಬಾ ಮುತುವರ್ಜಿ ವಹಿಸಿಕೊಂಡು ಈ ಪ್ರಕರಣವನ್ನು ಬೇಧಿಸಿದ್ದಾರೆ. ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಹೂಲಿಕಟ್ಟೆ ಗ್ರಾಮದ ಕೃಷ್ಣ ಮಾದರ, ನಾಗನಗೌಡ ಪಾಟೀಲ್ ಮತ್ತು ನಾಗನಗೌಡನ ಹತ್ತಿರದ ಸಂಬಂಧಿ ಸಾಗರ್ ಪಾಟೀಲ್ ಬಂಧಿತ ಆರೋಪಿಗಳು ಎಂದು ತಿಳಿಸಿದ್ದಾರೆ.
ದುರದೃಷ್ಟಕರ ಸಂಗತಿಯೆಂದರೆ ಬಂಧಿತರೆಲ್ಲ ಯುವಕರು. ನಾಡನ್ನು ಕಟ್ಟಿ ಬೆಳೆಸಬೇಕಾದ ವಯಸ್ಸಲ್ಲಿ ಈ ರೀತಿಯ ದುಷ್ಕೃತ್ಯಕ್ಕೆ ಕೈ ಹಾಕಿದ್ದಾರೆ. ತಮ್ಮ ಕೃತ್ಯಕ್ಕೆ ಒಬ್ಬರ ಬಾಲಕನನ್ನೂ ಬಳಸಿಕೊಂಡಿದ್ದಾರೆ. ಆದರೆ, ತನಿಖೆಯಲ್ಲಿ ಆತ ಅಮಾಯಕ ಎಂದು ಗೊತ್ತಾಗಿದೆ. ಆರೋಪಿಗಳು ಅವನ ಮುಗ್ದತೆಯನ್ನು ತಮ್ಮ ಹೀನಾಯ ಕೃತ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಸಾಗರ್ ಪಾಟೀಲ್. ಈತನೇ ಈ ದುಷ್ಕೃತ್ಯದ ಕಾರಣೀಕರ್ತ. ಈತ ಈ ಆಘಾತಕಾರಿ ಕೃತ್ಯವೆಸಗಲು ಎರಡ್ಮೂರು ತಿಂಗಳಿನಿಂದ ಪೂರ್ವ ತಯಾರಿ ಮಾಡಿಕೊಂಡಿದ್ದ. ಅದಕ್ಕೆ ತನ್ನ ಜೊತೆ ಕೆಲಸ ಮಾಡುತ್ತಿದ್ದ ಚಾಲಕ ಕೃಷ್ಣ ಮಾದರನ ಸಹಾಯ ಪಡೆದಿದ್ದ. ಕೃಷ್ಣಗೆ ಸ್ವಲ್ಪ ಹಣ ಕೊಟ್ಟಿದ್ದ. ಆತನ ಮೂಲಕವೇ ವಿಷ ಖರೀದಿ ಮಾಡಿಸಿದ್ದ. ಅಪ್ರಾಪ್ತ ಬಾಲಕನನ್ನೂ ಆತನ ಮೂಲಕವೇ ಕರೆ ತಂದಿದ್ದ ಎಂದು ವಿವರಿಸಿದ್ದಾರೆ.

ಆರೋಪಿಗಳಾದ ಕೃಷ್ಣ ಮಾದರ ಮತ್ತು ನಾಗನಗೌಡ ಪಾಟೀಲ್ ದುಷ್ಕೃತ್ಯ ಎಸಗುವುದಕ್ಕಿಂತ 6 ದಿನಗಳ ಮುಂಚೆ (8ನೇ ತಾರೀಖು) ಮುನವಲ್ಲಿಗೆ ಹೋಗಿ ರಸಗೊಬ್ಬ ಮತ್ತು ಕೀಟನಾಶಕದ ಅಂಗಡಿಯಿಂದ ವಿಷ ಖರೀದಿಸಿದ್ದರು.
ಅದಕ್ಕೂ ಮುನ್ನ ಹೂಲಿಕಟ್ಟೆಯಲ್ಲಿ ಸಾಗರ್ ಪಾಟೀಲ ಜೊತೆ ಚರ್ಚೆ ನಡೆಸಿದ್ದರು ಎಂದು ಎಸ್ಪಿ ಹೇಳಿದ್ದಾರೆ.

13ನೇ ತಾರೀಕು ಆರೋಪಿಗಳು ಮತ್ತೊಮ್ಮೆ ಪರಸ್ಪರ ಚರ್ಚೆ ನಡೆಸಿದ್ದರು. ಅಂದೇ ಸಾಗರ್ ಪಾಟೀಲ್‌ಗೆ ವಿಷದ ಬಾಟಲಿಯನ್ನು ಹಸ್ತಾಂತರಿಸಿದ್ದರು. ಮಾಝಾ ಜ್ಯೂಸ್ ಬಾಟಲಿಯಲ್ಲಿ ವಿಷವನ್ನು ತುಂಬಲಾಗಿತ್ತು. ಸಾಗರ್ ಪಾಟೀಲ್ ರೈತನಾಗಿರುವುದರಿಂದ ಆತನಿಗೆ ಕೀಟನಾಶಕ ಖರೀದಿಸುವ ಅವಕಾಶವಿತ್ತು. ಆತ ಕೃಷ್ಣ ಮಾದರ ಮತ್ತು ನಾಗನಗೌಡನ ಭೇಟಿಗೆ ಬರುವ ಮುನ್ನವೇ ಮಾಝಾ ಬಾಟಲಿಯಲ್ಲಿ ಕೀಟನಾಶಕ ತುಂಬಿಕೊಂಡು ಬಂದಿದ್ದ. ನಂತರ ಇವರಿಬ್ಬರು ತಂದ ಕೀಟನಾಶಕವನ್ನೂ ಅದಕ್ಕೆ ಸೇರಿಸಿದ್ದರು. ನಂತರ ಬಾಟಲಿಯನ್ನು ಕೃಷ್ಣ ಮಾದರ ಕೈಗೆ ಕೊಡಲಾಗಿತ್ತು ಎಂದು ವಿವರಿಸಿದ್ದಾರೆ.

ಕೃಷ್ಣ ಮಾದರ ವಿಷವನ್ನು ತೆಗೆದುಕೊಂಡು ಹೋಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಬಾಲಕನಿಗೆ ಕೊಟ್ಟಿದ್ದ. ಅದನ್ನು ಶಾಲೆಯ ಟ್ಯಾಂಕ್‌ಗೆ ಸುರಿಯುವಂತೆ ಸೂಚಿಸಿದ್ದ. ಇದಕ್ಕಾಗಿ ಬಾಲಕನಿಗೆ ಸ್ವಲ್ಪ ದುಡ್ಡು ಕೊಟ್ಟಿದ್ದ. ತಿಂಡಿ ತಿನಿಸುಗಳನ್ನು ನೀಡಿ ಪುಸಲಾಯಿಸಿದ್ದ. ಬಾಲಕ ಶಾಲೆಯ ಟ್ಯಾಂಕ್‌ಗೆ ಕೀಟನಾಶಕ ಸುರಿಯುವ ಮುನ್ನ ಈ ಬಾಟಲಿಯಲ್ಲಿ ಏನಿದೆ? ಎಂದು ಕೇಳಿದ್ದ. ಅದಕ್ಕೆ ಆರೋಪಿಗಳು ಇದರಲ್ಲಿ ಜ್ಯೂಸ್ ಇದೆ. ಟ್ಯಾಂಕ್‌ಗೆ ಸುರಿದರೆ ನೀರು ಸಿಹಿಯಾಗುತ್ತದೆ ಎಂದಿದ್ದರು. ಈ ಮಾತನ್ನು ನಂಬಿದ್ದ ಮುಗ್ದ ಬಾಲಕ ನೀರಿನ ಟ್ಯಾಂಕ್‌ಗೆ ಕೀಟನಾಶಕ ಸುರಿದಿದ್ದ. ಬಾಲಕ ವಿಷ ಸುರಿದು ಆ ಟ್ಯಾಂಕ್‌ನಿಂದ ಸ್ವಲ್ಪ ನೀರು ತೆಗೆದುಕೊಂಡು ಬರುವಾಗ ಕೊಂಚ ಗಲಿಬಿಲಿಗೊಂಡಿದ್ದ. ಈ ವೇಳೆ ಆತನ ಕೈಯಿಂದ ವಿಷದ ಬಾಟಲಿ ಕೆಳಗೆ ಬಿದ್ದಿತ್ತು. ಅದು ದುಷ್ಕೃತ್ಯದ ಸುಳಿವನ್ನು ನೀಡಿತ್ತು ಎಂದು ಹೇಳಿದ್ದಾರೆ.

ಪ್ರಮುಖ ಆರೋಪಿ ಸಾಗರ್ ಪಾಟೀಲ್, ಇನ್ನೊಬ್ಬ ಆರೋಪಿ ಕೃಷ್ಣ ಮಾದರ ಮೂಲಕ ದುಷ್ಕೃತ್ಯವನ್ನು ಮಾಡಿಸಿದ್ದ. ಮೂಲಗಳ ಪ್ರಕಾರ, ಈ ಕೃಷ್ಣ ಮಾದರ ಅನ್ಯಜಾತಿಯ ಹುಡುಗಿಯೊಬ್ಬರನ್ನು ಪ್ರೀತಿಸುತಿದ್ದಾರೆ. ಇದಕ್ಕೆ ಅಸ್ತ್ರವಾಗಿ ಮಾಡಿಕೊಂಡ ಸಾಗರ್ ಪಾಟೀಲ್, ತಾನು ಹೇಳಿದ ಕೆಲಸ ಮಾಡದಿದ್ದೆ “ನೀನು ಅನ್ಯಜಾತಿಯ ಹುಡುಗಿಯನ್ನು ಪ್ರೀತಿಸುತ್ತಿರುವ ವಿಷಯ ಬಹಿರಂಗಪಡಿಸುತ್ತೇನೆ” ಎಂದು ಬೆದರಿಸಿದ್ದ. ಹಾಗಾಗಿ, ಕೃಷ್ಣ ಮಾದರ ವಿಷ ಬೆರೆಸಲು ಒಪ್ಪಿಕೊಂಡಿದ್ದ ಎನ್ನಲಾಗಿದೆ.

ಧರ್ಮಸ್ಥಳ ಪ್ರಕರಣ: ನ್ಯಾಯಾಧೀಶರ ಮೇಲೆ ಆಕ್ಷೇಪ, ವಿಚಾರಣೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...