Homeಕರ್ನಾಟಕಬೆಳಗಾವಿ| ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ನಿರಾಕರಣೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ 'ಎದ್ದೇಳು ಕರ್ನಾಟಕ'

ಬೆಳಗಾವಿ| ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ನಿರಾಕರಣೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ‘ಎದ್ದೇಳು ಕರ್ನಾಟಕ’

- Advertisement -
- Advertisement -

ಜಾಗತಿಕ ಚುನಾವಣಾ ನಿರ್ವಹಣಾ ಸಂಸ್ಥೆಗಳು (ಇಎಂಬಿ) ಪರವಾಗಿ ಭಾರತದ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಆಗಮಿಸಿರುವ ವಿದೇಶಿ ಪ್ರತಿನಿಧಿಗಳ ತಂಡವನ್ನು ಭೇಟಿ ಮಾಡಲು ಸರ್ಕಾರ ಯಾರಿಗೂ ಅನುಮತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ವಿವಿಧ ದೇಶಗಳ ಪ್ರತಿನಿಧಿಗಳನ್ನೊಳಗೊಂಡ ನಿಯೋಗ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಭಾರತಕ್ಕೆ ಆಗಮಿಸಿದೆ. ಈ ಪೈಕಿ ಕಾಂಬೋಡಿಯಾ, ಮಾಲ್ಡೊವಾ, ನೇಪಾಳ, ಸಿಷೆಲ್ ಹಾಗೂ ಟ್ಯುನೇಷಿಯಾ ದೇಶಗಳ ಚುನಾವಣಾ ಆಯೋಗಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳ ತಂಡವೊಂದು ಬೆಳಗಾವಿಗೆ ಭೇಟಿ ಬಂದಿತ್ತು. ಈ ತಂಡವನ್ನು ಭೇಟಿ ಮಾಡಲು ಅಧಿಕಾರಿಗಳು ಅವಕಾಶ ನೀಡಿಲ್ಲ ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.

‘ಆಡಳಿತ ಪಕ್ಷದಿಂದ ಚುನಾವಣಾ ಆಯುಕ್ತರ ನೇಮಕ, ಚುನಾವಣಾ ಆಯೋಗ ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿರುವುದು, ಆಡಳಿತ ಪಕ್ಷ ನೀತಿ ಸಂಹಿತೆ ಉಲ್ಲಂಘಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು, ಪ್ರತಿಪಕ್ಷಗಳ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವುದು, ಪ್ರತಿಪಕ್ಷ ನಾಯಕರ ಬಂಧನ, ಅಲ್ಪ ಸಂಖ್ಯಾತರ ವಿರುದ್ಧದ ದ್ವೇಷ ಭಾಷಣ, ಇವಿಎಂ, ವಿವಿಪ್ಯಾಟ್‌ಗಳ ಮೂಲಕ ವಂಚನೆ’ ಸೇರಿದಂತೆ ಚುನಾವಣಾ ವ್ಯವಸ್ಥೆಯ ವಸ್ತುಸ್ಥಿತಿಯನ್ನು ವಿದೇಶಿ ಪ್ರತಿನಿಧಿಗಳಿಗೆ ತಿಳಿಸಲು ಎದ್ದೇಳು ಕರ್ನಾಟಕ ಮುಂದಾಗಿತ್ತು. ಆದರೆ, ಇದಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

ವಿದೇಶಿ ಪ್ರತಿನಿಧಿಗಳಿಗೆ ನೀಡಲು ಉದ್ದೇಶಿಸಿದ್ದ ವರದಿ 

“ವಿದೇಶಿ ಪ್ರತಿನಿಧಿಗಳ ತಂಡವನ್ನು ಭೇಟಿ ಮಾಡಲು ಯಾರಿಗೂ ಅವಕಾಶವಿಲ್ಲ. ನಮಗೆ ಸರ್ಕಾರದಿಂದ ಆದೇಶವಿದೆ. ನೀವು ಬೇಕಾದರೆ ಸುಪ್ರೀಂ ಕೋರ್ಟ್‌ಗೆ ತೆರಳಿ ಇದನ್ನು ಪ್ರಶ್ನಿಸಿ ಅಥವಾ ಚುನಾವಣಾ ಆಯೋಗದಿಂದ ಅನುಮತಿ ಪಡೆದುಕೊಂಡು ಬನ್ನಿ. ಆದರೆ, ನಾನು ಮಾತ್ರ ಅವಕಾಶ ನೀಡಲು ಸಾಧ್ಯವಿಲ್ಲ” ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೇಳಿದ್ದಾಗಿ ಎದ್ದೇಳು ಕರ್ನಾಟಕದ ಮುಖಂಡರು ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ವಿದೇಶಿ ಪ್ರತಿನಿಧಿಗಳನ್ನು ಜನರಿಂದ ದೂರವಿಡುವ ಮೂಲಕ ಸತ್ಯ ಮರೆಮಾಚಲು ಮುಂದಾಗಿದೆ. ಇವಿಎಂ ತೆರೆಯುವುದು, ಮತದಾನ ಮಾಡುವುದು ಸೇರಿದಂತೆ ಕೆಲ ಪ್ರಾಥಮಿಕ ವಿಷಯಗಳನ್ನು ಮಾತ್ರ ಅವರಿಗೆ ತಿಳಿಸಲಾಗುತ್ತಿದೆ. ಚುನಾವಣೆಯಲ್ಲಿ ನಡೆಯುತ್ತಿರುವ ವಂಚನೆಯ ವಸ್ತುಸ್ಥಿತಿ ವಿದೇಶಿ ತಂಡಕ್ಕೆ ತಿಳಿದಿಲ್ಲ. ಅದನ್ನು ತಿಳಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ. ಪ್ರತಿನಿಧಿಗಳನ್ನೂ ಕೂಡ ತಮಗೆ ಬೇಕಾದ ದೇಶಗಳಿಂದ ಆಯ್ಕೆ ಮಾಡಲಾಗಿದೆ. ಇಲ್ಲಿ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಬಂದವರ ದೇಶಗಳಲ್ಲೇ ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಹೇಳಿದ್ದಾರೆ.

ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ಸಿಗದ ಹಿನ್ನೆಲೆ ಎದ್ದೇಳು ಕರ್ನಾಟಕದ ಮುಖಂಡರು, ಇಎಂಬಿಗೆ ನೀಡಬೇಕಾದ ವರದಿ ಮತ್ತು ಮನವಿಯನ್ನು ಜಿಲ್ಲಾಧಿಕಾರಿಗೆ ನೀಡಿದ್ದಾರೆ.

ಇದನ್ನೂ ಓದಿ : ಬಿಜೆಪಿಯ ‘ಕೋಮು ದ್ವೇಷದ ಪೋಸ್ಟ್‌’ನ್ನು ತೆಗೆದು ಹಾಕುವಂತೆ ‘ಎಕ್ಸ್‌’ಗೆ ಸೂಚಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...