Homeಕರ್ನಾಟಕಬೆಳಗಾವಿ| ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ನಿರಾಕರಣೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ 'ಎದ್ದೇಳು ಕರ್ನಾಟಕ'

ಬೆಳಗಾವಿ| ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ನಿರಾಕರಣೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ‘ಎದ್ದೇಳು ಕರ್ನಾಟಕ’

- Advertisement -
- Advertisement -

ಜಾಗತಿಕ ಚುನಾವಣಾ ನಿರ್ವಹಣಾ ಸಂಸ್ಥೆಗಳು (ಇಎಂಬಿ) ಪರವಾಗಿ ಭಾರತದ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಆಗಮಿಸಿರುವ ವಿದೇಶಿ ಪ್ರತಿನಿಧಿಗಳ ತಂಡವನ್ನು ಭೇಟಿ ಮಾಡಲು ಸರ್ಕಾರ ಯಾರಿಗೂ ಅನುಮತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ವಿವಿಧ ದೇಶಗಳ ಪ್ರತಿನಿಧಿಗಳನ್ನೊಳಗೊಂಡ ನಿಯೋಗ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಭಾರತಕ್ಕೆ ಆಗಮಿಸಿದೆ. ಈ ಪೈಕಿ ಕಾಂಬೋಡಿಯಾ, ಮಾಲ್ಡೊವಾ, ನೇಪಾಳ, ಸಿಷೆಲ್ ಹಾಗೂ ಟ್ಯುನೇಷಿಯಾ ದೇಶಗಳ ಚುನಾವಣಾ ಆಯೋಗಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳ ತಂಡವೊಂದು ಬೆಳಗಾವಿಗೆ ಭೇಟಿ ಬಂದಿತ್ತು. ಈ ತಂಡವನ್ನು ಭೇಟಿ ಮಾಡಲು ಅಧಿಕಾರಿಗಳು ಅವಕಾಶ ನೀಡಿಲ್ಲ ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.

‘ಆಡಳಿತ ಪಕ್ಷದಿಂದ ಚುನಾವಣಾ ಆಯುಕ್ತರ ನೇಮಕ, ಚುನಾವಣಾ ಆಯೋಗ ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿರುವುದು, ಆಡಳಿತ ಪಕ್ಷ ನೀತಿ ಸಂಹಿತೆ ಉಲ್ಲಂಘಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು, ಪ್ರತಿಪಕ್ಷಗಳ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವುದು, ಪ್ರತಿಪಕ್ಷ ನಾಯಕರ ಬಂಧನ, ಅಲ್ಪ ಸಂಖ್ಯಾತರ ವಿರುದ್ಧದ ದ್ವೇಷ ಭಾಷಣ, ಇವಿಎಂ, ವಿವಿಪ್ಯಾಟ್‌ಗಳ ಮೂಲಕ ವಂಚನೆ’ ಸೇರಿದಂತೆ ಚುನಾವಣಾ ವ್ಯವಸ್ಥೆಯ ವಸ್ತುಸ್ಥಿತಿಯನ್ನು ವಿದೇಶಿ ಪ್ರತಿನಿಧಿಗಳಿಗೆ ತಿಳಿಸಲು ಎದ್ದೇಳು ಕರ್ನಾಟಕ ಮುಂದಾಗಿತ್ತು. ಆದರೆ, ಇದಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

ವಿದೇಶಿ ಪ್ರತಿನಿಧಿಗಳಿಗೆ ನೀಡಲು ಉದ್ದೇಶಿಸಿದ್ದ ವರದಿ 

“ವಿದೇಶಿ ಪ್ರತಿನಿಧಿಗಳ ತಂಡವನ್ನು ಭೇಟಿ ಮಾಡಲು ಯಾರಿಗೂ ಅವಕಾಶವಿಲ್ಲ. ನಮಗೆ ಸರ್ಕಾರದಿಂದ ಆದೇಶವಿದೆ. ನೀವು ಬೇಕಾದರೆ ಸುಪ್ರೀಂ ಕೋರ್ಟ್‌ಗೆ ತೆರಳಿ ಇದನ್ನು ಪ್ರಶ್ನಿಸಿ ಅಥವಾ ಚುನಾವಣಾ ಆಯೋಗದಿಂದ ಅನುಮತಿ ಪಡೆದುಕೊಂಡು ಬನ್ನಿ. ಆದರೆ, ನಾನು ಮಾತ್ರ ಅವಕಾಶ ನೀಡಲು ಸಾಧ್ಯವಿಲ್ಲ” ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೇಳಿದ್ದಾಗಿ ಎದ್ದೇಳು ಕರ್ನಾಟಕದ ಮುಖಂಡರು ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ವಿದೇಶಿ ಪ್ರತಿನಿಧಿಗಳನ್ನು ಜನರಿಂದ ದೂರವಿಡುವ ಮೂಲಕ ಸತ್ಯ ಮರೆಮಾಚಲು ಮುಂದಾಗಿದೆ. ಇವಿಎಂ ತೆರೆಯುವುದು, ಮತದಾನ ಮಾಡುವುದು ಸೇರಿದಂತೆ ಕೆಲ ಪ್ರಾಥಮಿಕ ವಿಷಯಗಳನ್ನು ಮಾತ್ರ ಅವರಿಗೆ ತಿಳಿಸಲಾಗುತ್ತಿದೆ. ಚುನಾವಣೆಯಲ್ಲಿ ನಡೆಯುತ್ತಿರುವ ವಂಚನೆಯ ವಸ್ತುಸ್ಥಿತಿ ವಿದೇಶಿ ತಂಡಕ್ಕೆ ತಿಳಿದಿಲ್ಲ. ಅದನ್ನು ತಿಳಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ. ಪ್ರತಿನಿಧಿಗಳನ್ನೂ ಕೂಡ ತಮಗೆ ಬೇಕಾದ ದೇಶಗಳಿಂದ ಆಯ್ಕೆ ಮಾಡಲಾಗಿದೆ. ಇಲ್ಲಿ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಬಂದವರ ದೇಶಗಳಲ್ಲೇ ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಹೇಳಿದ್ದಾರೆ.

ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ಸಿಗದ ಹಿನ್ನೆಲೆ ಎದ್ದೇಳು ಕರ್ನಾಟಕದ ಮುಖಂಡರು, ಇಎಂಬಿಗೆ ನೀಡಬೇಕಾದ ವರದಿ ಮತ್ತು ಮನವಿಯನ್ನು ಜಿಲ್ಲಾಧಿಕಾರಿಗೆ ನೀಡಿದ್ದಾರೆ.

ಇದನ್ನೂ ಓದಿ : ಬಿಜೆಪಿಯ ‘ಕೋಮು ದ್ವೇಷದ ಪೋಸ್ಟ್‌’ನ್ನು ತೆಗೆದು ಹಾಕುವಂತೆ ‘ಎಕ್ಸ್‌’ಗೆ ಸೂಚಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...