Homeಕರ್ನಾಟಕಬೆಳಗಾವಿ| ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ನಿರಾಕರಣೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ 'ಎದ್ದೇಳು ಕರ್ನಾಟಕ'

ಬೆಳಗಾವಿ| ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ನಿರಾಕರಣೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ‘ಎದ್ದೇಳು ಕರ್ನಾಟಕ’

- Advertisement -
- Advertisement -

ಜಾಗತಿಕ ಚುನಾವಣಾ ನಿರ್ವಹಣಾ ಸಂಸ್ಥೆಗಳು (ಇಎಂಬಿ) ಪರವಾಗಿ ಭಾರತದ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಆಗಮಿಸಿರುವ ವಿದೇಶಿ ಪ್ರತಿನಿಧಿಗಳ ತಂಡವನ್ನು ಭೇಟಿ ಮಾಡಲು ಸರ್ಕಾರ ಯಾರಿಗೂ ಅನುಮತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ವಿವಿಧ ದೇಶಗಳ ಪ್ರತಿನಿಧಿಗಳನ್ನೊಳಗೊಂಡ ನಿಯೋಗ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಭಾರತಕ್ಕೆ ಆಗಮಿಸಿದೆ. ಈ ಪೈಕಿ ಕಾಂಬೋಡಿಯಾ, ಮಾಲ್ಡೊವಾ, ನೇಪಾಳ, ಸಿಷೆಲ್ ಹಾಗೂ ಟ್ಯುನೇಷಿಯಾ ದೇಶಗಳ ಚುನಾವಣಾ ಆಯೋಗಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳ ತಂಡವೊಂದು ಬೆಳಗಾವಿಗೆ ಭೇಟಿ ಬಂದಿತ್ತು. ಈ ತಂಡವನ್ನು ಭೇಟಿ ಮಾಡಲು ಅಧಿಕಾರಿಗಳು ಅವಕಾಶ ನೀಡಿಲ್ಲ ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.

‘ಆಡಳಿತ ಪಕ್ಷದಿಂದ ಚುನಾವಣಾ ಆಯುಕ್ತರ ನೇಮಕ, ಚುನಾವಣಾ ಆಯೋಗ ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿರುವುದು, ಆಡಳಿತ ಪಕ್ಷ ನೀತಿ ಸಂಹಿತೆ ಉಲ್ಲಂಘಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು, ಪ್ರತಿಪಕ್ಷಗಳ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವುದು, ಪ್ರತಿಪಕ್ಷ ನಾಯಕರ ಬಂಧನ, ಅಲ್ಪ ಸಂಖ್ಯಾತರ ವಿರುದ್ಧದ ದ್ವೇಷ ಭಾಷಣ, ಇವಿಎಂ, ವಿವಿಪ್ಯಾಟ್‌ಗಳ ಮೂಲಕ ವಂಚನೆ’ ಸೇರಿದಂತೆ ಚುನಾವಣಾ ವ್ಯವಸ್ಥೆಯ ವಸ್ತುಸ್ಥಿತಿಯನ್ನು ವಿದೇಶಿ ಪ್ರತಿನಿಧಿಗಳಿಗೆ ತಿಳಿಸಲು ಎದ್ದೇಳು ಕರ್ನಾಟಕ ಮುಂದಾಗಿತ್ತು. ಆದರೆ, ಇದಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

ವಿದೇಶಿ ಪ್ರತಿನಿಧಿಗಳಿಗೆ ನೀಡಲು ಉದ್ದೇಶಿಸಿದ್ದ ವರದಿ 

“ವಿದೇಶಿ ಪ್ರತಿನಿಧಿಗಳ ತಂಡವನ್ನು ಭೇಟಿ ಮಾಡಲು ಯಾರಿಗೂ ಅವಕಾಶವಿಲ್ಲ. ನಮಗೆ ಸರ್ಕಾರದಿಂದ ಆದೇಶವಿದೆ. ನೀವು ಬೇಕಾದರೆ ಸುಪ್ರೀಂ ಕೋರ್ಟ್‌ಗೆ ತೆರಳಿ ಇದನ್ನು ಪ್ರಶ್ನಿಸಿ ಅಥವಾ ಚುನಾವಣಾ ಆಯೋಗದಿಂದ ಅನುಮತಿ ಪಡೆದುಕೊಂಡು ಬನ್ನಿ. ಆದರೆ, ನಾನು ಮಾತ್ರ ಅವಕಾಶ ನೀಡಲು ಸಾಧ್ಯವಿಲ್ಲ” ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೇಳಿದ್ದಾಗಿ ಎದ್ದೇಳು ಕರ್ನಾಟಕದ ಮುಖಂಡರು ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ವಿದೇಶಿ ಪ್ರತಿನಿಧಿಗಳನ್ನು ಜನರಿಂದ ದೂರವಿಡುವ ಮೂಲಕ ಸತ್ಯ ಮರೆಮಾಚಲು ಮುಂದಾಗಿದೆ. ಇವಿಎಂ ತೆರೆಯುವುದು, ಮತದಾನ ಮಾಡುವುದು ಸೇರಿದಂತೆ ಕೆಲ ಪ್ರಾಥಮಿಕ ವಿಷಯಗಳನ್ನು ಮಾತ್ರ ಅವರಿಗೆ ತಿಳಿಸಲಾಗುತ್ತಿದೆ. ಚುನಾವಣೆಯಲ್ಲಿ ನಡೆಯುತ್ತಿರುವ ವಂಚನೆಯ ವಸ್ತುಸ್ಥಿತಿ ವಿದೇಶಿ ತಂಡಕ್ಕೆ ತಿಳಿದಿಲ್ಲ. ಅದನ್ನು ತಿಳಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ. ಪ್ರತಿನಿಧಿಗಳನ್ನೂ ಕೂಡ ತಮಗೆ ಬೇಕಾದ ದೇಶಗಳಿಂದ ಆಯ್ಕೆ ಮಾಡಲಾಗಿದೆ. ಇಲ್ಲಿ ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಬಂದವರ ದೇಶಗಳಲ್ಲೇ ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎಂದು ಹೇಳಿದ್ದಾರೆ.

ವಿದೇಶಿ ಪ್ರತಿನಿಧಿಗಳ ಭೇಟಿಗೆ ಅವಕಾಶ ಸಿಗದ ಹಿನ್ನೆಲೆ ಎದ್ದೇಳು ಕರ್ನಾಟಕದ ಮುಖಂಡರು, ಇಎಂಬಿಗೆ ನೀಡಬೇಕಾದ ವರದಿ ಮತ್ತು ಮನವಿಯನ್ನು ಜಿಲ್ಲಾಧಿಕಾರಿಗೆ ನೀಡಿದ್ದಾರೆ.

ಇದನ್ನೂ ಓದಿ : ಬಿಜೆಪಿಯ ‘ಕೋಮು ದ್ವೇಷದ ಪೋಸ್ಟ್‌’ನ್ನು ತೆಗೆದು ಹಾಕುವಂತೆ ‘ಎಕ್ಸ್‌’ಗೆ ಸೂಚಿಸಿದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...