Homeಕರ್ನಾಟಕಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

ಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

15 ವರ್ಷಗಳಿಂದ ತೆರೆದೇ ಇದ್ದರೂ ಜನಸಾಮಾನ್ಯರ ಪಾಲಿಗೆ ಎಟುಕದ ‘ಅಂಗಡಿ’ಗೆ ಈ ಸಲ ಬೀಗ ಬೀಳಬಹುದೇ? ಎಂಬ ಮಾತುಗಳು ಬೆಳಗಾವಿ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ.

ಮೂರು ಸಲ ಬಿಜೆಪಿಯಿಂದ ಸಂಸದರಾಗಿರುವ ಸುರೇಶ ಅಂಗಡಿ ವಿರುದ್ಧ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಇದ್ದೇ ಇದೆ. ಕಳೆದ ಸಲವೇ ಸೋಲಬೇಕಿದ್ದ ಅವರಿಗೆ ಸೃಷ್ಟಿತ ಮೋದಿ ಹವಾ ನೆರವಿಗೆ ಬಂದಿತ್ತು. 15 ವರ್ಷ ಸಂಸದರಾದ ಮೇಲೂ, ಈಗಲೂ ಅವರು ಮೋದಿ ಮುಖ ತೋರಿಸಿ ಮತ ಕೇಳುತ್ತಿರುವುದೇ ಅವರ ‘ವೀಕ್’ ಪಾಯಿಂಟ್. ಅಷ್ಟರಮಟ್ಟಿಗೆ ಆಡಳಿತ ವಿರೋಧಿ ಅಲೆ ಜೋರಾಗಿದೆ.


ಬೆಳಗಾವಿಯ ಕಾಂಗ್ರೆಸ್ 15 ವರ್ಷಗಳಿಂದ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಕುರುಹುಗಳಿಲ್ಲ. ಆದರೆ, ಈ ಸಲ ಇಲ್ಲಿ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ. ಬೆಳಗಾವಿ ಸೀಟನ್ನು ಗೆಲ್ಲಿಸಿಕೊಡಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕಾಂಗ್ರೆಸ್ ತಾಕೀತು ಮಾಡಿದೆಯಂತೆ. ಸತೀಶ್ ಇಲ್ಲಿ ಸಕ್ರಿಯರಾಗಿದ್ದು, ‘ಅಂಗಡಿ’ಗೆ ಬೀಗ ಜಡಿಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ ಅವರ ಸಹೋದರ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಚುನಾವಣೆಯಿಂದ ಅಂತರ ಕಾಯ್ದುಕೊಂಡಿರುವುದು ಕಾಂಗ್ರೆಸ್‍ಗೆ ತಲೆನೋವಾಗಿದೆ.

ಕಾಂಗ್ರೆಸ್‍ನಿಂದ ಡಾ. ವಿರುಪಾಕ್ಷಪ್ಪ ಸಾಧುನವರ್‍ಗೆ ಟಿಕೆಟ್ ನೀಡಲಾಗಿದೆ. ಹಿಂದೊಮ್ಮೆ ಕಾಂಗ್ರೆಸ್‍ನಿಂದ ಬಂಡಾಯವೆದ್ದು ಎಂಎಲ್‍ಸಿ ಸೀಟಿಗೆ ಸ್ಪರ್ಧಿಸಿದ್ದ ಸಾಧುನವರ್‍ಗೆ ಈಗ ಸತೀಶ ಜಾರಕಿಹೊಳಿಯ ಸಪೋರ್ಟಿದೆ. ಜಾರಕಿಹೊಳಿಯ ಶಿಫಾರಸಿನ ಮೂಲಕವೇ ಸಾಧುನವರ್ ಟಿಕೆಟ್ ಪಡೆದಿದ್ದಾರೆ. ಬೈಲಹೊಂಗಲದ ಭಾಗದಲ್ಲಿ ಹಲವಾರು ಶೈಕ್ಷಣಿಕ ಸಂಸ್ಥೆಗಳನ್ನು, ಸಹಕಾರಿ ಬ್ಯಾಂಕುಗಳನ್ನು ನಡೆಸುತ್ತಿರುವ ಸಾಧುನವರ್ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು.


8 ವಿಧಾನಸಭಾ ಕೇತ್ರಗಳನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಐವರು ಬಿಜೆಪಿ ಶಾಸಕರು, ಮೂವರು ಕಾಂಗ್ರೆಸ್ ಶಾಸಕರಿದ್ದಾರೆ. ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ಚಿಕ್ಕೋಡಿ ವ್ಯಾಪ್ತಿಗೆ ಬಂದರೆ ಅವರ ಸಹೋದರ ರಮೇಶರ ಗೋಕಾಕ್ ಕ್ಷೇತ್ರ ಬೆಳಗಾವಿಯ ವ್ಯಾಪ್ತಿಗೆ ಬರುತ್ತದೆ.

ಸಂಖ್ಯೆಯ ಆಧಾರದಲ್ಲಿ ಕ್ರಮವಾಗಿ ಲಿಂಗಾಯತರು, ಮರಾಠರು ಮತ್ತು ದಲಿತರಿದ್ದಾರೆ. ಇಲ್ಲಿವರೆಗೆ ಬಿಜೆಪಿಯ ಅಂಗಡಿಯವರ ಕೈ ಹಿಡಿದದ್ದು ಲಿಂಗಾಯತ ಮತ್ತು ಮರಾಠ ಮತಗಳು. ಅಂಗಡಿ ಬಣಜಿಗ ಸಮುದಾಯಕ್ಕೆ ಸೇರಿದ್ದು, ಈಗ ಕಾಂಗ್ರೆಸ್‍ನಿಂದ ಸ್ಪರ್ಧಿಸಿರುವ ಸಾಧುನವರ್ ಪಂಚಮಸಾಲಿ ಸಮುದಾಯದವರು. ಲಿಂಗಾಯತರಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿಗಳು ಜಾತಿಪ್ರೀತಿಗಾಗಿ ಸಾಧುನವರ್ ಪರ ನಿಲ್ಲುವ ಸಾಧ್ಯತೆಗಳಿವೆ.

ಕಳೆದ ಸಲದ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರವು ಕಾಂಗ್ರೆಸ್ ಗೆ 50 ಸಾವಿರದಷ್ಟು ಲೀಡ್ ಕೊಟ್ಟಿತ್ತು. ಈ ಸಲ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ತಟಸ್ಥರಾಗಿ ಉಳಿದಿದ್ದು, ಅವರು ಸಕ್ರಿಯವಾಗಿತೊಡಗಿಕೊಂಡರೆ ಕಾಂಗ್ರೆಸ್ ಮುನ್ನಡೆಗೆ ಅನುಕೂಲ. ಆದರೆ ಅವರ ಇನ್ನೊರ್ವ ಸಹೋದರ ಲಖನ್ ಜಾರಕಿಹೊಳಿ ಕಾಂಗ್ರೆಸ್ ಪರ ಫೀಲ್ಡಿಗಿಳಿದಿದ್ದಾರೆ. ಅಣ್ಣ ಸತೀಶ್ ಜಾರಕಿಹೊಳಿಯ ಮೇಲಿನ ಗೌರವದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂಬ ಉಮೇದಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಳೆದ ಸಲ ಲೋಕಸಭೆಯಲ್ಲಿ ಅಂಗಡಿ ವಿರುದ್ಧ ಸ್ಪರ್ಧಿಸಿ 60 ಸಾವಿರ ಚಿಲ್ಲರೆ ಮತಗಳಿಂದ ಸೋಲುಂಡಿದ್ದ ಹಾಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಾಧುನವರ್ ಪರವಾಗಿ ಬಿರುಸಾದ ಪ್ರಚಾರ ನಡೆಸುತ್ತಿದ್ದಾರೆ. ಸತೀಶ ಜಾರಕಿಹೊಳಿ ತಂತ್ರಗಳು ಜಾರಿಗೆ ಬರುತ್ತಿವೆ. ಇನ್ನೊಂದು ಕಡೆ ಸುರೇಶ ಅಂಗಡಿ ಮೋದಿ ಮುಖ ತೋರಿಸಿ ಮತ ಬೇಡುತ್ತಿದ್ದಾರೆ.
ಬೆಳಗಾವಿ ಅಚ್ಚರಿಯ ಫಲಿತಾಂಶ ನೀಡುವ ಸಾಧ್ಯತೆ ಇವೆ. ಹಾಗೇ ಆದರೆ ಬಿಜೆಪಿ ‘ಅಂಗಡಿಗೆ ಬೀಗ ಬೀಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...