Homeಕರ್ನಾಟಕಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

ಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

15 ವರ್ಷಗಳಿಂದ ತೆರೆದೇ ಇದ್ದರೂ ಜನಸಾಮಾನ್ಯರ ಪಾಲಿಗೆ ಎಟುಕದ ‘ಅಂಗಡಿ’ಗೆ ಈ ಸಲ ಬೀಗ ಬೀಳಬಹುದೇ? ಎಂಬ ಮಾತುಗಳು ಬೆಳಗಾವಿ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ.

ಮೂರು ಸಲ ಬಿಜೆಪಿಯಿಂದ ಸಂಸದರಾಗಿರುವ ಸುರೇಶ ಅಂಗಡಿ ವಿರುದ್ಧ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಇದ್ದೇ ಇದೆ. ಕಳೆದ ಸಲವೇ ಸೋಲಬೇಕಿದ್ದ ಅವರಿಗೆ ಸೃಷ್ಟಿತ ಮೋದಿ ಹವಾ ನೆರವಿಗೆ ಬಂದಿತ್ತು. 15 ವರ್ಷ ಸಂಸದರಾದ ಮೇಲೂ, ಈಗಲೂ ಅವರು ಮೋದಿ ಮುಖ ತೋರಿಸಿ ಮತ ಕೇಳುತ್ತಿರುವುದೇ ಅವರ ‘ವೀಕ್’ ಪಾಯಿಂಟ್. ಅಷ್ಟರಮಟ್ಟಿಗೆ ಆಡಳಿತ ವಿರೋಧಿ ಅಲೆ ಜೋರಾಗಿದೆ.


ಬೆಳಗಾವಿಯ ಕಾಂಗ್ರೆಸ್ 15 ವರ್ಷಗಳಿಂದ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಕುರುಹುಗಳಿಲ್ಲ. ಆದರೆ, ಈ ಸಲ ಇಲ್ಲಿ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ. ಬೆಳಗಾವಿ ಸೀಟನ್ನು ಗೆಲ್ಲಿಸಿಕೊಡಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕಾಂಗ್ರೆಸ್ ತಾಕೀತು ಮಾಡಿದೆಯಂತೆ. ಸತೀಶ್ ಇಲ್ಲಿ ಸಕ್ರಿಯರಾಗಿದ್ದು, ‘ಅಂಗಡಿ’ಗೆ ಬೀಗ ಜಡಿಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ ಅವರ ಸಹೋದರ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಚುನಾವಣೆಯಿಂದ ಅಂತರ ಕಾಯ್ದುಕೊಂಡಿರುವುದು ಕಾಂಗ್ರೆಸ್‍ಗೆ ತಲೆನೋವಾಗಿದೆ.

ಕಾಂಗ್ರೆಸ್‍ನಿಂದ ಡಾ. ವಿರುಪಾಕ್ಷಪ್ಪ ಸಾಧುನವರ್‍ಗೆ ಟಿಕೆಟ್ ನೀಡಲಾಗಿದೆ. ಹಿಂದೊಮ್ಮೆ ಕಾಂಗ್ರೆಸ್‍ನಿಂದ ಬಂಡಾಯವೆದ್ದು ಎಂಎಲ್‍ಸಿ ಸೀಟಿಗೆ ಸ್ಪರ್ಧಿಸಿದ್ದ ಸಾಧುನವರ್‍ಗೆ ಈಗ ಸತೀಶ ಜಾರಕಿಹೊಳಿಯ ಸಪೋರ್ಟಿದೆ. ಜಾರಕಿಹೊಳಿಯ ಶಿಫಾರಸಿನ ಮೂಲಕವೇ ಸಾಧುನವರ್ ಟಿಕೆಟ್ ಪಡೆದಿದ್ದಾರೆ. ಬೈಲಹೊಂಗಲದ ಭಾಗದಲ್ಲಿ ಹಲವಾರು ಶೈಕ್ಷಣಿಕ ಸಂಸ್ಥೆಗಳನ್ನು, ಸಹಕಾರಿ ಬ್ಯಾಂಕುಗಳನ್ನು ನಡೆಸುತ್ತಿರುವ ಸಾಧುನವರ್ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು.


8 ವಿಧಾನಸಭಾ ಕೇತ್ರಗಳನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಐವರು ಬಿಜೆಪಿ ಶಾಸಕರು, ಮೂವರು ಕಾಂಗ್ರೆಸ್ ಶಾಸಕರಿದ್ದಾರೆ. ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ಚಿಕ್ಕೋಡಿ ವ್ಯಾಪ್ತಿಗೆ ಬಂದರೆ ಅವರ ಸಹೋದರ ರಮೇಶರ ಗೋಕಾಕ್ ಕ್ಷೇತ್ರ ಬೆಳಗಾವಿಯ ವ್ಯಾಪ್ತಿಗೆ ಬರುತ್ತದೆ.

ಸಂಖ್ಯೆಯ ಆಧಾರದಲ್ಲಿ ಕ್ರಮವಾಗಿ ಲಿಂಗಾಯತರು, ಮರಾಠರು ಮತ್ತು ದಲಿತರಿದ್ದಾರೆ. ಇಲ್ಲಿವರೆಗೆ ಬಿಜೆಪಿಯ ಅಂಗಡಿಯವರ ಕೈ ಹಿಡಿದದ್ದು ಲಿಂಗಾಯತ ಮತ್ತು ಮರಾಠ ಮತಗಳು. ಅಂಗಡಿ ಬಣಜಿಗ ಸಮುದಾಯಕ್ಕೆ ಸೇರಿದ್ದು, ಈಗ ಕಾಂಗ್ರೆಸ್‍ನಿಂದ ಸ್ಪರ್ಧಿಸಿರುವ ಸಾಧುನವರ್ ಪಂಚಮಸಾಲಿ ಸಮುದಾಯದವರು. ಲಿಂಗಾಯತರಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿಗಳು ಜಾತಿಪ್ರೀತಿಗಾಗಿ ಸಾಧುನವರ್ ಪರ ನಿಲ್ಲುವ ಸಾಧ್ಯತೆಗಳಿವೆ.

ಕಳೆದ ಸಲದ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರವು ಕಾಂಗ್ರೆಸ್ ಗೆ 50 ಸಾವಿರದಷ್ಟು ಲೀಡ್ ಕೊಟ್ಟಿತ್ತು. ಈ ಸಲ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ತಟಸ್ಥರಾಗಿ ಉಳಿದಿದ್ದು, ಅವರು ಸಕ್ರಿಯವಾಗಿತೊಡಗಿಕೊಂಡರೆ ಕಾಂಗ್ರೆಸ್ ಮುನ್ನಡೆಗೆ ಅನುಕೂಲ. ಆದರೆ ಅವರ ಇನ್ನೊರ್ವ ಸಹೋದರ ಲಖನ್ ಜಾರಕಿಹೊಳಿ ಕಾಂಗ್ರೆಸ್ ಪರ ಫೀಲ್ಡಿಗಿಳಿದಿದ್ದಾರೆ. ಅಣ್ಣ ಸತೀಶ್ ಜಾರಕಿಹೊಳಿಯ ಮೇಲಿನ ಗೌರವದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂಬ ಉಮೇದಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಳೆದ ಸಲ ಲೋಕಸಭೆಯಲ್ಲಿ ಅಂಗಡಿ ವಿರುದ್ಧ ಸ್ಪರ್ಧಿಸಿ 60 ಸಾವಿರ ಚಿಲ್ಲರೆ ಮತಗಳಿಂದ ಸೋಲುಂಡಿದ್ದ ಹಾಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಾಧುನವರ್ ಪರವಾಗಿ ಬಿರುಸಾದ ಪ್ರಚಾರ ನಡೆಸುತ್ತಿದ್ದಾರೆ. ಸತೀಶ ಜಾರಕಿಹೊಳಿ ತಂತ್ರಗಳು ಜಾರಿಗೆ ಬರುತ್ತಿವೆ. ಇನ್ನೊಂದು ಕಡೆ ಸುರೇಶ ಅಂಗಡಿ ಮೋದಿ ಮುಖ ತೋರಿಸಿ ಮತ ಬೇಡುತ್ತಿದ್ದಾರೆ.
ಬೆಳಗಾವಿ ಅಚ್ಚರಿಯ ಫಲಿತಾಂಶ ನೀಡುವ ಸಾಧ್ಯತೆ ಇವೆ. ಹಾಗೇ ಆದರೆ ಬಿಜೆಪಿ ‘ಅಂಗಡಿಗೆ ಬೀಗ ಬೀಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...