Homeಕರ್ನಾಟಕಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

ಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

15 ವರ್ಷಗಳಿಂದ ತೆರೆದೇ ಇದ್ದರೂ ಜನಸಾಮಾನ್ಯರ ಪಾಲಿಗೆ ಎಟುಕದ ‘ಅಂಗಡಿ’ಗೆ ಈ ಸಲ ಬೀಗ ಬೀಳಬಹುದೇ? ಎಂಬ ಮಾತುಗಳು ಬೆಳಗಾವಿ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ.

ಮೂರು ಸಲ ಬಿಜೆಪಿಯಿಂದ ಸಂಸದರಾಗಿರುವ ಸುರೇಶ ಅಂಗಡಿ ವಿರುದ್ಧ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಇದ್ದೇ ಇದೆ. ಕಳೆದ ಸಲವೇ ಸೋಲಬೇಕಿದ್ದ ಅವರಿಗೆ ಸೃಷ್ಟಿತ ಮೋದಿ ಹವಾ ನೆರವಿಗೆ ಬಂದಿತ್ತು. 15 ವರ್ಷ ಸಂಸದರಾದ ಮೇಲೂ, ಈಗಲೂ ಅವರು ಮೋದಿ ಮುಖ ತೋರಿಸಿ ಮತ ಕೇಳುತ್ತಿರುವುದೇ ಅವರ ‘ವೀಕ್’ ಪಾಯಿಂಟ್. ಅಷ್ಟರಮಟ್ಟಿಗೆ ಆಡಳಿತ ವಿರೋಧಿ ಅಲೆ ಜೋರಾಗಿದೆ.


ಬೆಳಗಾವಿಯ ಕಾಂಗ್ರೆಸ್ 15 ವರ್ಷಗಳಿಂದ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಕುರುಹುಗಳಿಲ್ಲ. ಆದರೆ, ಈ ಸಲ ಇಲ್ಲಿ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ. ಬೆಳಗಾವಿ ಸೀಟನ್ನು ಗೆಲ್ಲಿಸಿಕೊಡಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕಾಂಗ್ರೆಸ್ ತಾಕೀತು ಮಾಡಿದೆಯಂತೆ. ಸತೀಶ್ ಇಲ್ಲಿ ಸಕ್ರಿಯರಾಗಿದ್ದು, ‘ಅಂಗಡಿ’ಗೆ ಬೀಗ ಜಡಿಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ ಅವರ ಸಹೋದರ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಚುನಾವಣೆಯಿಂದ ಅಂತರ ಕಾಯ್ದುಕೊಂಡಿರುವುದು ಕಾಂಗ್ರೆಸ್‍ಗೆ ತಲೆನೋವಾಗಿದೆ.

ಕಾಂಗ್ರೆಸ್‍ನಿಂದ ಡಾ. ವಿರುಪಾಕ್ಷಪ್ಪ ಸಾಧುನವರ್‍ಗೆ ಟಿಕೆಟ್ ನೀಡಲಾಗಿದೆ. ಹಿಂದೊಮ್ಮೆ ಕಾಂಗ್ರೆಸ್‍ನಿಂದ ಬಂಡಾಯವೆದ್ದು ಎಂಎಲ್‍ಸಿ ಸೀಟಿಗೆ ಸ್ಪರ್ಧಿಸಿದ್ದ ಸಾಧುನವರ್‍ಗೆ ಈಗ ಸತೀಶ ಜಾರಕಿಹೊಳಿಯ ಸಪೋರ್ಟಿದೆ. ಜಾರಕಿಹೊಳಿಯ ಶಿಫಾರಸಿನ ಮೂಲಕವೇ ಸಾಧುನವರ್ ಟಿಕೆಟ್ ಪಡೆದಿದ್ದಾರೆ. ಬೈಲಹೊಂಗಲದ ಭಾಗದಲ್ಲಿ ಹಲವಾರು ಶೈಕ್ಷಣಿಕ ಸಂಸ್ಥೆಗಳನ್ನು, ಸಹಕಾರಿ ಬ್ಯಾಂಕುಗಳನ್ನು ನಡೆಸುತ್ತಿರುವ ಸಾಧುನವರ್ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು.


8 ವಿಧಾನಸಭಾ ಕೇತ್ರಗಳನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಐವರು ಬಿಜೆಪಿ ಶಾಸಕರು, ಮೂವರು ಕಾಂಗ್ರೆಸ್ ಶಾಸಕರಿದ್ದಾರೆ. ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ಚಿಕ್ಕೋಡಿ ವ್ಯಾಪ್ತಿಗೆ ಬಂದರೆ ಅವರ ಸಹೋದರ ರಮೇಶರ ಗೋಕಾಕ್ ಕ್ಷೇತ್ರ ಬೆಳಗಾವಿಯ ವ್ಯಾಪ್ತಿಗೆ ಬರುತ್ತದೆ.

ಸಂಖ್ಯೆಯ ಆಧಾರದಲ್ಲಿ ಕ್ರಮವಾಗಿ ಲಿಂಗಾಯತರು, ಮರಾಠರು ಮತ್ತು ದಲಿತರಿದ್ದಾರೆ. ಇಲ್ಲಿವರೆಗೆ ಬಿಜೆಪಿಯ ಅಂಗಡಿಯವರ ಕೈ ಹಿಡಿದದ್ದು ಲಿಂಗಾಯತ ಮತ್ತು ಮರಾಠ ಮತಗಳು. ಅಂಗಡಿ ಬಣಜಿಗ ಸಮುದಾಯಕ್ಕೆ ಸೇರಿದ್ದು, ಈಗ ಕಾಂಗ್ರೆಸ್‍ನಿಂದ ಸ್ಪರ್ಧಿಸಿರುವ ಸಾಧುನವರ್ ಪಂಚಮಸಾಲಿ ಸಮುದಾಯದವರು. ಲಿಂಗಾಯತರಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿಗಳು ಜಾತಿಪ್ರೀತಿಗಾಗಿ ಸಾಧುನವರ್ ಪರ ನಿಲ್ಲುವ ಸಾಧ್ಯತೆಗಳಿವೆ.

ಕಳೆದ ಸಲದ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರವು ಕಾಂಗ್ರೆಸ್ ಗೆ 50 ಸಾವಿರದಷ್ಟು ಲೀಡ್ ಕೊಟ್ಟಿತ್ತು. ಈ ಸಲ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ತಟಸ್ಥರಾಗಿ ಉಳಿದಿದ್ದು, ಅವರು ಸಕ್ರಿಯವಾಗಿತೊಡಗಿಕೊಂಡರೆ ಕಾಂಗ್ರೆಸ್ ಮುನ್ನಡೆಗೆ ಅನುಕೂಲ. ಆದರೆ ಅವರ ಇನ್ನೊರ್ವ ಸಹೋದರ ಲಖನ್ ಜಾರಕಿಹೊಳಿ ಕಾಂಗ್ರೆಸ್ ಪರ ಫೀಲ್ಡಿಗಿಳಿದಿದ್ದಾರೆ. ಅಣ್ಣ ಸತೀಶ್ ಜಾರಕಿಹೊಳಿಯ ಮೇಲಿನ ಗೌರವದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂಬ ಉಮೇದಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಳೆದ ಸಲ ಲೋಕಸಭೆಯಲ್ಲಿ ಅಂಗಡಿ ವಿರುದ್ಧ ಸ್ಪರ್ಧಿಸಿ 60 ಸಾವಿರ ಚಿಲ್ಲರೆ ಮತಗಳಿಂದ ಸೋಲುಂಡಿದ್ದ ಹಾಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಾಧುನವರ್ ಪರವಾಗಿ ಬಿರುಸಾದ ಪ್ರಚಾರ ನಡೆಸುತ್ತಿದ್ದಾರೆ. ಸತೀಶ ಜಾರಕಿಹೊಳಿ ತಂತ್ರಗಳು ಜಾರಿಗೆ ಬರುತ್ತಿವೆ. ಇನ್ನೊಂದು ಕಡೆ ಸುರೇಶ ಅಂಗಡಿ ಮೋದಿ ಮುಖ ತೋರಿಸಿ ಮತ ಬೇಡುತ್ತಿದ್ದಾರೆ.
ಬೆಳಗಾವಿ ಅಚ್ಚರಿಯ ಫಲಿತಾಂಶ ನೀಡುವ ಸಾಧ್ಯತೆ ಇವೆ. ಹಾಗೇ ಆದರೆ ಬಿಜೆಪಿ ‘ಅಂಗಡಿಗೆ ಬೀಗ ಬೀಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...