Homeಕರ್ನಾಟಕಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

ಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

15 ವರ್ಷಗಳಿಂದ ತೆರೆದೇ ಇದ್ದರೂ ಜನಸಾಮಾನ್ಯರ ಪಾಲಿಗೆ ಎಟುಕದ ‘ಅಂಗಡಿ’ಗೆ ಈ ಸಲ ಬೀಗ ಬೀಳಬಹುದೇ? ಎಂಬ ಮಾತುಗಳು ಬೆಳಗಾವಿ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ.

ಮೂರು ಸಲ ಬಿಜೆಪಿಯಿಂದ ಸಂಸದರಾಗಿರುವ ಸುರೇಶ ಅಂಗಡಿ ವಿರುದ್ಧ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಇದ್ದೇ ಇದೆ. ಕಳೆದ ಸಲವೇ ಸೋಲಬೇಕಿದ್ದ ಅವರಿಗೆ ಸೃಷ್ಟಿತ ಮೋದಿ ಹವಾ ನೆರವಿಗೆ ಬಂದಿತ್ತು. 15 ವರ್ಷ ಸಂಸದರಾದ ಮೇಲೂ, ಈಗಲೂ ಅವರು ಮೋದಿ ಮುಖ ತೋರಿಸಿ ಮತ ಕೇಳುತ್ತಿರುವುದೇ ಅವರ ‘ವೀಕ್’ ಪಾಯಿಂಟ್. ಅಷ್ಟರಮಟ್ಟಿಗೆ ಆಡಳಿತ ವಿರೋಧಿ ಅಲೆ ಜೋರಾಗಿದೆ.


ಬೆಳಗಾವಿಯ ಕಾಂಗ್ರೆಸ್ 15 ವರ್ಷಗಳಿಂದ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಕುರುಹುಗಳಿಲ್ಲ. ಆದರೆ, ಈ ಸಲ ಇಲ್ಲಿ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ. ಬೆಳಗಾವಿ ಸೀಟನ್ನು ಗೆಲ್ಲಿಸಿಕೊಡಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕಾಂಗ್ರೆಸ್ ತಾಕೀತು ಮಾಡಿದೆಯಂತೆ. ಸತೀಶ್ ಇಲ್ಲಿ ಸಕ್ರಿಯರಾಗಿದ್ದು, ‘ಅಂಗಡಿ’ಗೆ ಬೀಗ ಜಡಿಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ ಅವರ ಸಹೋದರ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಚುನಾವಣೆಯಿಂದ ಅಂತರ ಕಾಯ್ದುಕೊಂಡಿರುವುದು ಕಾಂಗ್ರೆಸ್‍ಗೆ ತಲೆನೋವಾಗಿದೆ.

ಕಾಂಗ್ರೆಸ್‍ನಿಂದ ಡಾ. ವಿರುಪಾಕ್ಷಪ್ಪ ಸಾಧುನವರ್‍ಗೆ ಟಿಕೆಟ್ ನೀಡಲಾಗಿದೆ. ಹಿಂದೊಮ್ಮೆ ಕಾಂಗ್ರೆಸ್‍ನಿಂದ ಬಂಡಾಯವೆದ್ದು ಎಂಎಲ್‍ಸಿ ಸೀಟಿಗೆ ಸ್ಪರ್ಧಿಸಿದ್ದ ಸಾಧುನವರ್‍ಗೆ ಈಗ ಸತೀಶ ಜಾರಕಿಹೊಳಿಯ ಸಪೋರ್ಟಿದೆ. ಜಾರಕಿಹೊಳಿಯ ಶಿಫಾರಸಿನ ಮೂಲಕವೇ ಸಾಧುನವರ್ ಟಿಕೆಟ್ ಪಡೆದಿದ್ದಾರೆ. ಬೈಲಹೊಂಗಲದ ಭಾಗದಲ್ಲಿ ಹಲವಾರು ಶೈಕ್ಷಣಿಕ ಸಂಸ್ಥೆಗಳನ್ನು, ಸಹಕಾರಿ ಬ್ಯಾಂಕುಗಳನ್ನು ನಡೆಸುತ್ತಿರುವ ಸಾಧುನವರ್ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು.


8 ವಿಧಾನಸಭಾ ಕೇತ್ರಗಳನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಐವರು ಬಿಜೆಪಿ ಶಾಸಕರು, ಮೂವರು ಕಾಂಗ್ರೆಸ್ ಶಾಸಕರಿದ್ದಾರೆ. ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ಚಿಕ್ಕೋಡಿ ವ್ಯಾಪ್ತಿಗೆ ಬಂದರೆ ಅವರ ಸಹೋದರ ರಮೇಶರ ಗೋಕಾಕ್ ಕ್ಷೇತ್ರ ಬೆಳಗಾವಿಯ ವ್ಯಾಪ್ತಿಗೆ ಬರುತ್ತದೆ.

ಸಂಖ್ಯೆಯ ಆಧಾರದಲ್ಲಿ ಕ್ರಮವಾಗಿ ಲಿಂಗಾಯತರು, ಮರಾಠರು ಮತ್ತು ದಲಿತರಿದ್ದಾರೆ. ಇಲ್ಲಿವರೆಗೆ ಬಿಜೆಪಿಯ ಅಂಗಡಿಯವರ ಕೈ ಹಿಡಿದದ್ದು ಲಿಂಗಾಯತ ಮತ್ತು ಮರಾಠ ಮತಗಳು. ಅಂಗಡಿ ಬಣಜಿಗ ಸಮುದಾಯಕ್ಕೆ ಸೇರಿದ್ದು, ಈಗ ಕಾಂಗ್ರೆಸ್‍ನಿಂದ ಸ್ಪರ್ಧಿಸಿರುವ ಸಾಧುನವರ್ ಪಂಚಮಸಾಲಿ ಸಮುದಾಯದವರು. ಲಿಂಗಾಯತರಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿಗಳು ಜಾತಿಪ್ರೀತಿಗಾಗಿ ಸಾಧುನವರ್ ಪರ ನಿಲ್ಲುವ ಸಾಧ್ಯತೆಗಳಿವೆ.

ಕಳೆದ ಸಲದ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರವು ಕಾಂಗ್ರೆಸ್ ಗೆ 50 ಸಾವಿರದಷ್ಟು ಲೀಡ್ ಕೊಟ್ಟಿತ್ತು. ಈ ಸಲ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ತಟಸ್ಥರಾಗಿ ಉಳಿದಿದ್ದು, ಅವರು ಸಕ್ರಿಯವಾಗಿತೊಡಗಿಕೊಂಡರೆ ಕಾಂಗ್ರೆಸ್ ಮುನ್ನಡೆಗೆ ಅನುಕೂಲ. ಆದರೆ ಅವರ ಇನ್ನೊರ್ವ ಸಹೋದರ ಲಖನ್ ಜಾರಕಿಹೊಳಿ ಕಾಂಗ್ರೆಸ್ ಪರ ಫೀಲ್ಡಿಗಿಳಿದಿದ್ದಾರೆ. ಅಣ್ಣ ಸತೀಶ್ ಜಾರಕಿಹೊಳಿಯ ಮೇಲಿನ ಗೌರವದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂಬ ಉಮೇದಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಳೆದ ಸಲ ಲೋಕಸಭೆಯಲ್ಲಿ ಅಂಗಡಿ ವಿರುದ್ಧ ಸ್ಪರ್ಧಿಸಿ 60 ಸಾವಿರ ಚಿಲ್ಲರೆ ಮತಗಳಿಂದ ಸೋಲುಂಡಿದ್ದ ಹಾಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಾಧುನವರ್ ಪರವಾಗಿ ಬಿರುಸಾದ ಪ್ರಚಾರ ನಡೆಸುತ್ತಿದ್ದಾರೆ. ಸತೀಶ ಜಾರಕಿಹೊಳಿ ತಂತ್ರಗಳು ಜಾರಿಗೆ ಬರುತ್ತಿವೆ. ಇನ್ನೊಂದು ಕಡೆ ಸುರೇಶ ಅಂಗಡಿ ಮೋದಿ ಮುಖ ತೋರಿಸಿ ಮತ ಬೇಡುತ್ತಿದ್ದಾರೆ.
ಬೆಳಗಾವಿ ಅಚ್ಚರಿಯ ಫಲಿತಾಂಶ ನೀಡುವ ಸಾಧ್ಯತೆ ಇವೆ. ಹಾಗೇ ಆದರೆ ಬಿಜೆಪಿ ‘ಅಂಗಡಿಗೆ ಬೀಗ ಬೀಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...