Homeಕರ್ನಾಟಕಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

ಬೆಳಗಾವಿ: ಬಿಜೆಪಿಯ ‘ಅಂಗಡಿ’ಗೆ ಬೀಳಲಿದೆಯಾ ಬೀಗ?

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

15 ವರ್ಷಗಳಿಂದ ತೆರೆದೇ ಇದ್ದರೂ ಜನಸಾಮಾನ್ಯರ ಪಾಲಿಗೆ ಎಟುಕದ ‘ಅಂಗಡಿ’ಗೆ ಈ ಸಲ ಬೀಗ ಬೀಳಬಹುದೇ? ಎಂಬ ಮಾತುಗಳು ಬೆಳಗಾವಿ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ.

ಮೂರು ಸಲ ಬಿಜೆಪಿಯಿಂದ ಸಂಸದರಾಗಿರುವ ಸುರೇಶ ಅಂಗಡಿ ವಿರುದ್ಧ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಇದ್ದೇ ಇದೆ. ಕಳೆದ ಸಲವೇ ಸೋಲಬೇಕಿದ್ದ ಅವರಿಗೆ ಸೃಷ್ಟಿತ ಮೋದಿ ಹವಾ ನೆರವಿಗೆ ಬಂದಿತ್ತು. 15 ವರ್ಷ ಸಂಸದರಾದ ಮೇಲೂ, ಈಗಲೂ ಅವರು ಮೋದಿ ಮುಖ ತೋರಿಸಿ ಮತ ಕೇಳುತ್ತಿರುವುದೇ ಅವರ ‘ವೀಕ್’ ಪಾಯಿಂಟ್. ಅಷ್ಟರಮಟ್ಟಿಗೆ ಆಡಳಿತ ವಿರೋಧಿ ಅಲೆ ಜೋರಾಗಿದೆ.


ಬೆಳಗಾವಿಯ ಕಾಂಗ್ರೆಸ್ 15 ವರ್ಷಗಳಿಂದ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಕುರುಹುಗಳಿಲ್ಲ. ಆದರೆ, ಈ ಸಲ ಇಲ್ಲಿ ಕಾಂಗ್ರೆಸ್ ಎಚ್ಚೆತ್ತುಕೊಂಡಿದೆ. ಬೆಳಗಾವಿ ಸೀಟನ್ನು ಗೆಲ್ಲಿಸಿಕೊಡಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕಾಂಗ್ರೆಸ್ ತಾಕೀತು ಮಾಡಿದೆಯಂತೆ. ಸತೀಶ್ ಇಲ್ಲಿ ಸಕ್ರಿಯರಾಗಿದ್ದು, ‘ಅಂಗಡಿ’ಗೆ ಬೀಗ ಜಡಿಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ ಅವರ ಸಹೋದರ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಚುನಾವಣೆಯಿಂದ ಅಂತರ ಕಾಯ್ದುಕೊಂಡಿರುವುದು ಕಾಂಗ್ರೆಸ್‍ಗೆ ತಲೆನೋವಾಗಿದೆ.

ಕಾಂಗ್ರೆಸ್‍ನಿಂದ ಡಾ. ವಿರುಪಾಕ್ಷಪ್ಪ ಸಾಧುನವರ್‍ಗೆ ಟಿಕೆಟ್ ನೀಡಲಾಗಿದೆ. ಹಿಂದೊಮ್ಮೆ ಕಾಂಗ್ರೆಸ್‍ನಿಂದ ಬಂಡಾಯವೆದ್ದು ಎಂಎಲ್‍ಸಿ ಸೀಟಿಗೆ ಸ್ಪರ್ಧಿಸಿದ್ದ ಸಾಧುನವರ್‍ಗೆ ಈಗ ಸತೀಶ ಜಾರಕಿಹೊಳಿಯ ಸಪೋರ್ಟಿದೆ. ಜಾರಕಿಹೊಳಿಯ ಶಿಫಾರಸಿನ ಮೂಲಕವೇ ಸಾಧುನವರ್ ಟಿಕೆಟ್ ಪಡೆದಿದ್ದಾರೆ. ಬೈಲಹೊಂಗಲದ ಭಾಗದಲ್ಲಿ ಹಲವಾರು ಶೈಕ್ಷಣಿಕ ಸಂಸ್ಥೆಗಳನ್ನು, ಸಹಕಾರಿ ಬ್ಯಾಂಕುಗಳನ್ನು ನಡೆಸುತ್ತಿರುವ ಸಾಧುನವರ್ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು.


8 ವಿಧಾನಸಭಾ ಕೇತ್ರಗಳನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಐವರು ಬಿಜೆಪಿ ಶಾಸಕರು, ಮೂವರು ಕಾಂಗ್ರೆಸ್ ಶಾಸಕರಿದ್ದಾರೆ. ಸತೀಶ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ಚಿಕ್ಕೋಡಿ ವ್ಯಾಪ್ತಿಗೆ ಬಂದರೆ ಅವರ ಸಹೋದರ ರಮೇಶರ ಗೋಕಾಕ್ ಕ್ಷೇತ್ರ ಬೆಳಗಾವಿಯ ವ್ಯಾಪ್ತಿಗೆ ಬರುತ್ತದೆ.

ಸಂಖ್ಯೆಯ ಆಧಾರದಲ್ಲಿ ಕ್ರಮವಾಗಿ ಲಿಂಗಾಯತರು, ಮರಾಠರು ಮತ್ತು ದಲಿತರಿದ್ದಾರೆ. ಇಲ್ಲಿವರೆಗೆ ಬಿಜೆಪಿಯ ಅಂಗಡಿಯವರ ಕೈ ಹಿಡಿದದ್ದು ಲಿಂಗಾಯತ ಮತ್ತು ಮರಾಠ ಮತಗಳು. ಅಂಗಡಿ ಬಣಜಿಗ ಸಮುದಾಯಕ್ಕೆ ಸೇರಿದ್ದು, ಈಗ ಕಾಂಗ್ರೆಸ್‍ನಿಂದ ಸ್ಪರ್ಧಿಸಿರುವ ಸಾಧುನವರ್ ಪಂಚಮಸಾಲಿ ಸಮುದಾಯದವರು. ಲಿಂಗಾಯತರಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿಗಳು ಜಾತಿಪ್ರೀತಿಗಾಗಿ ಸಾಧುನವರ್ ಪರ ನಿಲ್ಲುವ ಸಾಧ್ಯತೆಗಳಿವೆ.

ಕಳೆದ ಸಲದ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರವು ಕಾಂಗ್ರೆಸ್ ಗೆ 50 ಸಾವಿರದಷ್ಟು ಲೀಡ್ ಕೊಟ್ಟಿತ್ತು. ಈ ಸಲ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ತಟಸ್ಥರಾಗಿ ಉಳಿದಿದ್ದು, ಅವರು ಸಕ್ರಿಯವಾಗಿತೊಡಗಿಕೊಂಡರೆ ಕಾಂಗ್ರೆಸ್ ಮುನ್ನಡೆಗೆ ಅನುಕೂಲ. ಆದರೆ ಅವರ ಇನ್ನೊರ್ವ ಸಹೋದರ ಲಖನ್ ಜಾರಕಿಹೊಳಿ ಕಾಂಗ್ರೆಸ್ ಪರ ಫೀಲ್ಡಿಗಿಳಿದಿದ್ದಾರೆ. ಅಣ್ಣ ಸತೀಶ್ ಜಾರಕಿಹೊಳಿಯ ಮೇಲಿನ ಗೌರವದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂಬ ಉಮೇದಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಳೆದ ಸಲ ಲೋಕಸಭೆಯಲ್ಲಿ ಅಂಗಡಿ ವಿರುದ್ಧ ಸ್ಪರ್ಧಿಸಿ 60 ಸಾವಿರ ಚಿಲ್ಲರೆ ಮತಗಳಿಂದ ಸೋಲುಂಡಿದ್ದ ಹಾಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಾಧುನವರ್ ಪರವಾಗಿ ಬಿರುಸಾದ ಪ್ರಚಾರ ನಡೆಸುತ್ತಿದ್ದಾರೆ. ಸತೀಶ ಜಾರಕಿಹೊಳಿ ತಂತ್ರಗಳು ಜಾರಿಗೆ ಬರುತ್ತಿವೆ. ಇನ್ನೊಂದು ಕಡೆ ಸುರೇಶ ಅಂಗಡಿ ಮೋದಿ ಮುಖ ತೋರಿಸಿ ಮತ ಬೇಡುತ್ತಿದ್ದಾರೆ.
ಬೆಳಗಾವಿ ಅಚ್ಚರಿಯ ಫಲಿತಾಂಶ ನೀಡುವ ಸಾಧ್ಯತೆ ಇವೆ. ಹಾಗೇ ಆದರೆ ಬಿಜೆಪಿ ‘ಅಂಗಡಿಗೆ ಬೀಗ ಬೀಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...