Homeಕರ್ನಾಟಕಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

ಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

- Advertisement -
- Advertisement -

ಬೆಳಗಾವಿ ಗಡಿ ವಿವಾದವನ್ನು ಮತ್ತೊಮ್ಮೆ ಅನಗತ್ಯವಾಗಿ ಮುನ್ನೆಲೆಗೆ ತರುವ ಹುಚ್ಚು ನಾಟಕಗಳನ್ನು ಮಹಾರಾಷ್ಟ್ರದ ಶಿವಸೇನೆ ಆರಂಭಿಸಿರುವ ಹೊತ್ತಿನಲ್ಲೇ, ಇತ್ತ ಶಾಸಕ ರಮೇಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಭಾಗ ಮರಾಠಿಗರಿಗೆ ಸೇರಿದ್ದು ಎಂಬರ್ಥದ ಭಾಷಣ ಮಾಡುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ.

ಮಹಾಜನ್ ಆಯೋಗದ ವರದಿ ಎಂದೋ ಬೆಳಗಾವಿ ಜಿಲ್ಲೆ ಕರ್ನಾಟಕಕ್ಕೆ ಸೇರಿದ್ದೆಂದು ಹೇಳಿಯಾಗಿದೆ. ಗಡಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನಲ್ಲಿ ಮಹಾರಾಷ್ಟ್ರ ಸಲ್ಲಿಸಿರುವ ಒಂದು ಅರ್ಜಿ ದಶಕಗಳಿಂದ ಚಲನೆಯಿಲ್ಲದೇ ಮಲಗಿದೆ.

ಆದರೂ ಬೆಳಗಾವಿ ಜಿಲ್ಲೆಯ ಕೆಲ ಭಾಗಗಳಲ್ಲಿ ಮರಾಠಿಗರ ಹೆಸರಿನಲ್ಲಿ ಸ್ವಾರ್ಥ ರಾಜಕಾರಣ ಮಾಡುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಳಗಾವಿ ನಗರ ಮತ್ತು ಜಿಲ್ಲೆಯ ನೂರಾರು ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಹಾರಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಂದಿದೆ.
ಈಗ ಮಹಾರಾಷ್ಟ್ರದಲ್ಲಿ ಹೊಸ ಶಿವಸೇನೆ ನೇತೃತ್ವದ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಿವಸೇನಾಕ್ಕೆ ಸೇರಿದ ಕೆಲವು ಸಚಿವರು ಆಗಾಗ ಬೆಳಗಾವಿ ವಿಷಯ ಪ್ರಸ್ತಾಪಿಸಿ ಶಿವಸೇನೆಯ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ.

ಸುಪ್ರಿಂಕೋರ್ಟಿನಲ್ಲಿರುವ ಅರ್ಜಿಯ ಕುರಿತಾಗಿ ತ್ವರಿತ ಕ್ರಮಗಳನ್ನು ಕೈಗೊಳ್ಳಲು ತಮ್ಮ ಇಬ್ಬರು ಸಚಿವರಾದ ಚುಗನ್ ಭುಜಬಲ್ ಮತ್ತು ಏಕನಾಥ್ ಶಿಂಧೆ ಅವರನ್ನು ನೇಮಿಸುವ ಮೂಲಕ ಅನಗತ್ಯ ಉಸಾಬರಿಗೆ ಕೈ ಹಾಕಿದ್ದಾರೆ. ಇದರ ಪರಿಣಾಮವಾಗಿ ಕನ್ನಡಿಗರು ಗಣನೀಯವಾಗಿ ವಾಸಿಸುವ ಮಹಾರಾಷ್ಟ್ರದ ಪ್ರದೇಶಗಳಲ್ಲಿ ಶಿವಸೇನೆ ಈಗ ಈ ವಿಷಯವನ್ನು ಎತ್ತಿ ಗಲಾಟೆಗೆ ಯತ್ನಿಸುತ್ತಿದೆ.

ಹೀಗಾಗಿಯೇ ರವಿವಾರದಂದು ಕೊಲ್ಲಾಪುರದಲ್ಲಿ ಗೂಂಡಾಗಿರಿ ಶೈಲಿಯಲ್ಲಿ ಪ್ರತಿಭಟನೆ ನಡೆಸಿದ ಶಿವಸೈನಿಕರು, ಬೆಳಗಾವಿ ಜಿಲ್ಲೆ ತಮ್ಮದೇ ಎಂದು ಕೂಗುತ್ತ, ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರತಿಕೃತಿ ದಹನ ಮಾಡಿದ್ದಾರೆ, ಕನ್ನಡ ಚಿತ್ರವೊಂದರ ಪ್ರದರ್ಶನವನ್ನು ಬಲವಂತವಾಗಿ ನಿಲ್ಲಿಸಿದ್ದಾರೆ, ಸೊಲ್ಲಾಪುರ ಮತ್ತು ಕರ್ನಾಟಕದ ನಡುವೆ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಇದು ಉದ್ಧಟತನದ ನಡವಳಿಕೆ. ಮುಖ್ಯಮಂತ್ರಿಯಾದ ನಂತರ ಅನಗತ್ಯವಾಗಿ ಬೆಳಗಾವಿ ವಿಷಯದ ಬಗ್ಗೆ ತಲೆ ಕೆಡಿಸಿಕೊಂಡ ಉದ್ಧವ್ ಠಾಕ್ರೆಯವರ ಪ್ರಚೋದನೆ ಇದರ ಹಿಂದೆ ಕೆಲಸ ಮಾಡಿದೆ. ಹೀಗಾಗಿ ಶಿವಸೈನಿಕರು ಮತ್ತೆ ಇಂತಹ ಕೃತ್ಯಕ್ಕೆ ಇಳಿಯದಂತೆ ಸಂಯಮ ಹೇಳುವ ಜವಾಬ್ದಾರಿಯೂ ಅವರದೇ.

ಇನ್ನೊಂದು ಕಡೆ ಉಪ ಮುಖ್ಯಮಂತ್ರಿಯಾಗುವ ಮಹದಾಸೆ ಹೊಂದಿರುವ ಗೋಕಾಕಿನ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿಯ ಬಹಿರಂಗ ಸಭೆಯೊಂದರಲ್ಲಿ ಮಾತನಾಡುತ್ತ, ‘ಬೆಳಗಾವಿ ಗ್ರಾಮೀಣ ಪ್ರದೇಶ ಕ್ಷೇತ್ರದಲ್ಲಿ ಮರಾಠಿಗನೇ ಶಾಸಕನಾಗಬೇಕು, ಅಂತಹ ಅಭ್ಯರ್ಥಿಗೆ ನಾನು 5 ಕೋಟಿ ರೂ. ಆಫರ್ ನೀಡುವೆ’ ಎನ್ನುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ. ಅಲ್ಲಿನ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರೋಧಿಸುವ ಭರದಲ್ಲಿ ಅವರು ರಾಜ್ಯಕ್ಕೆ ಮಾರಕವಾಗುವ ಹೇಳಿಕೆ ನೀಡಿರುವುದನ್ನು ರಾಜ್ಯದ ಎಲ್ಲ ಪಕ್ಷಗಳು ಮತ್ತು ನಾಗರಿಕರು ಖಂಡಿಸಲೇಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...