Homeಕರ್ನಾಟಕಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

ಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

- Advertisement -
- Advertisement -

ಬೆಳಗಾವಿ ಗಡಿ ವಿವಾದವನ್ನು ಮತ್ತೊಮ್ಮೆ ಅನಗತ್ಯವಾಗಿ ಮುನ್ನೆಲೆಗೆ ತರುವ ಹುಚ್ಚು ನಾಟಕಗಳನ್ನು ಮಹಾರಾಷ್ಟ್ರದ ಶಿವಸೇನೆ ಆರಂಭಿಸಿರುವ ಹೊತ್ತಿನಲ್ಲೇ, ಇತ್ತ ಶಾಸಕ ರಮೇಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಭಾಗ ಮರಾಠಿಗರಿಗೆ ಸೇರಿದ್ದು ಎಂಬರ್ಥದ ಭಾಷಣ ಮಾಡುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ.

ಮಹಾಜನ್ ಆಯೋಗದ ವರದಿ ಎಂದೋ ಬೆಳಗಾವಿ ಜಿಲ್ಲೆ ಕರ್ನಾಟಕಕ್ಕೆ ಸೇರಿದ್ದೆಂದು ಹೇಳಿಯಾಗಿದೆ. ಗಡಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನಲ್ಲಿ ಮಹಾರಾಷ್ಟ್ರ ಸಲ್ಲಿಸಿರುವ ಒಂದು ಅರ್ಜಿ ದಶಕಗಳಿಂದ ಚಲನೆಯಿಲ್ಲದೇ ಮಲಗಿದೆ.

ಆದರೂ ಬೆಳಗಾವಿ ಜಿಲ್ಲೆಯ ಕೆಲ ಭಾಗಗಳಲ್ಲಿ ಮರಾಠಿಗರ ಹೆಸರಿನಲ್ಲಿ ಸ್ವಾರ್ಥ ರಾಜಕಾರಣ ಮಾಡುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಳಗಾವಿ ನಗರ ಮತ್ತು ಜಿಲ್ಲೆಯ ನೂರಾರು ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಹಾರಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಂದಿದೆ.
ಈಗ ಮಹಾರಾಷ್ಟ್ರದಲ್ಲಿ ಹೊಸ ಶಿವಸೇನೆ ನೇತೃತ್ವದ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಿವಸೇನಾಕ್ಕೆ ಸೇರಿದ ಕೆಲವು ಸಚಿವರು ಆಗಾಗ ಬೆಳಗಾವಿ ವಿಷಯ ಪ್ರಸ್ತಾಪಿಸಿ ಶಿವಸೇನೆಯ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ.

ಸುಪ್ರಿಂಕೋರ್ಟಿನಲ್ಲಿರುವ ಅರ್ಜಿಯ ಕುರಿತಾಗಿ ತ್ವರಿತ ಕ್ರಮಗಳನ್ನು ಕೈಗೊಳ್ಳಲು ತಮ್ಮ ಇಬ್ಬರು ಸಚಿವರಾದ ಚುಗನ್ ಭುಜಬಲ್ ಮತ್ತು ಏಕನಾಥ್ ಶಿಂಧೆ ಅವರನ್ನು ನೇಮಿಸುವ ಮೂಲಕ ಅನಗತ್ಯ ಉಸಾಬರಿಗೆ ಕೈ ಹಾಕಿದ್ದಾರೆ. ಇದರ ಪರಿಣಾಮವಾಗಿ ಕನ್ನಡಿಗರು ಗಣನೀಯವಾಗಿ ವಾಸಿಸುವ ಮಹಾರಾಷ್ಟ್ರದ ಪ್ರದೇಶಗಳಲ್ಲಿ ಶಿವಸೇನೆ ಈಗ ಈ ವಿಷಯವನ್ನು ಎತ್ತಿ ಗಲಾಟೆಗೆ ಯತ್ನಿಸುತ್ತಿದೆ.

ಹೀಗಾಗಿಯೇ ರವಿವಾರದಂದು ಕೊಲ್ಲಾಪುರದಲ್ಲಿ ಗೂಂಡಾಗಿರಿ ಶೈಲಿಯಲ್ಲಿ ಪ್ರತಿಭಟನೆ ನಡೆಸಿದ ಶಿವಸೈನಿಕರು, ಬೆಳಗಾವಿ ಜಿಲ್ಲೆ ತಮ್ಮದೇ ಎಂದು ಕೂಗುತ್ತ, ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರತಿಕೃತಿ ದಹನ ಮಾಡಿದ್ದಾರೆ, ಕನ್ನಡ ಚಿತ್ರವೊಂದರ ಪ್ರದರ್ಶನವನ್ನು ಬಲವಂತವಾಗಿ ನಿಲ್ಲಿಸಿದ್ದಾರೆ, ಸೊಲ್ಲಾಪುರ ಮತ್ತು ಕರ್ನಾಟಕದ ನಡುವೆ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಇದು ಉದ್ಧಟತನದ ನಡವಳಿಕೆ. ಮುಖ್ಯಮಂತ್ರಿಯಾದ ನಂತರ ಅನಗತ್ಯವಾಗಿ ಬೆಳಗಾವಿ ವಿಷಯದ ಬಗ್ಗೆ ತಲೆ ಕೆಡಿಸಿಕೊಂಡ ಉದ್ಧವ್ ಠಾಕ್ರೆಯವರ ಪ್ರಚೋದನೆ ಇದರ ಹಿಂದೆ ಕೆಲಸ ಮಾಡಿದೆ. ಹೀಗಾಗಿ ಶಿವಸೈನಿಕರು ಮತ್ತೆ ಇಂತಹ ಕೃತ್ಯಕ್ಕೆ ಇಳಿಯದಂತೆ ಸಂಯಮ ಹೇಳುವ ಜವಾಬ್ದಾರಿಯೂ ಅವರದೇ.

ಇನ್ನೊಂದು ಕಡೆ ಉಪ ಮುಖ್ಯಮಂತ್ರಿಯಾಗುವ ಮಹದಾಸೆ ಹೊಂದಿರುವ ಗೋಕಾಕಿನ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿಯ ಬಹಿರಂಗ ಸಭೆಯೊಂದರಲ್ಲಿ ಮಾತನಾಡುತ್ತ, ‘ಬೆಳಗಾವಿ ಗ್ರಾಮೀಣ ಪ್ರದೇಶ ಕ್ಷೇತ್ರದಲ್ಲಿ ಮರಾಠಿಗನೇ ಶಾಸಕನಾಗಬೇಕು, ಅಂತಹ ಅಭ್ಯರ್ಥಿಗೆ ನಾನು 5 ಕೋಟಿ ರೂ. ಆಫರ್ ನೀಡುವೆ’ ಎನ್ನುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ. ಅಲ್ಲಿನ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರೋಧಿಸುವ ಭರದಲ್ಲಿ ಅವರು ರಾಜ್ಯಕ್ಕೆ ಮಾರಕವಾಗುವ ಹೇಳಿಕೆ ನೀಡಿರುವುದನ್ನು ರಾಜ್ಯದ ಎಲ್ಲ ಪಕ್ಷಗಳು ಮತ್ತು ನಾಗರಿಕರು ಖಂಡಿಸಲೇಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...