Homeಕರ್ನಾಟಕಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

ಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

- Advertisement -
- Advertisement -

ಬೆಳಗಾವಿ ಗಡಿ ವಿವಾದವನ್ನು ಮತ್ತೊಮ್ಮೆ ಅನಗತ್ಯವಾಗಿ ಮುನ್ನೆಲೆಗೆ ತರುವ ಹುಚ್ಚು ನಾಟಕಗಳನ್ನು ಮಹಾರಾಷ್ಟ್ರದ ಶಿವಸೇನೆ ಆರಂಭಿಸಿರುವ ಹೊತ್ತಿನಲ್ಲೇ, ಇತ್ತ ಶಾಸಕ ರಮೇಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಭಾಗ ಮರಾಠಿಗರಿಗೆ ಸೇರಿದ್ದು ಎಂಬರ್ಥದ ಭಾಷಣ ಮಾಡುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ.

ಮಹಾಜನ್ ಆಯೋಗದ ವರದಿ ಎಂದೋ ಬೆಳಗಾವಿ ಜಿಲ್ಲೆ ಕರ್ನಾಟಕಕ್ಕೆ ಸೇರಿದ್ದೆಂದು ಹೇಳಿಯಾಗಿದೆ. ಗಡಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನಲ್ಲಿ ಮಹಾರಾಷ್ಟ್ರ ಸಲ್ಲಿಸಿರುವ ಒಂದು ಅರ್ಜಿ ದಶಕಗಳಿಂದ ಚಲನೆಯಿಲ್ಲದೇ ಮಲಗಿದೆ.

ಆದರೂ ಬೆಳಗಾವಿ ಜಿಲ್ಲೆಯ ಕೆಲ ಭಾಗಗಳಲ್ಲಿ ಮರಾಠಿಗರ ಹೆಸರಿನಲ್ಲಿ ಸ್ವಾರ್ಥ ರಾಜಕಾರಣ ಮಾಡುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಳಗಾವಿ ನಗರ ಮತ್ತು ಜಿಲ್ಲೆಯ ನೂರಾರು ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಹಾರಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಂದಿದೆ.
ಈಗ ಮಹಾರಾಷ್ಟ್ರದಲ್ಲಿ ಹೊಸ ಶಿವಸೇನೆ ನೇತೃತ್ವದ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಿವಸೇನಾಕ್ಕೆ ಸೇರಿದ ಕೆಲವು ಸಚಿವರು ಆಗಾಗ ಬೆಳಗಾವಿ ವಿಷಯ ಪ್ರಸ್ತಾಪಿಸಿ ಶಿವಸೇನೆಯ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ.

ಸುಪ್ರಿಂಕೋರ್ಟಿನಲ್ಲಿರುವ ಅರ್ಜಿಯ ಕುರಿತಾಗಿ ತ್ವರಿತ ಕ್ರಮಗಳನ್ನು ಕೈಗೊಳ್ಳಲು ತಮ್ಮ ಇಬ್ಬರು ಸಚಿವರಾದ ಚುಗನ್ ಭುಜಬಲ್ ಮತ್ತು ಏಕನಾಥ್ ಶಿಂಧೆ ಅವರನ್ನು ನೇಮಿಸುವ ಮೂಲಕ ಅನಗತ್ಯ ಉಸಾಬರಿಗೆ ಕೈ ಹಾಕಿದ್ದಾರೆ. ಇದರ ಪರಿಣಾಮವಾಗಿ ಕನ್ನಡಿಗರು ಗಣನೀಯವಾಗಿ ವಾಸಿಸುವ ಮಹಾರಾಷ್ಟ್ರದ ಪ್ರದೇಶಗಳಲ್ಲಿ ಶಿವಸೇನೆ ಈಗ ಈ ವಿಷಯವನ್ನು ಎತ್ತಿ ಗಲಾಟೆಗೆ ಯತ್ನಿಸುತ್ತಿದೆ.

ಹೀಗಾಗಿಯೇ ರವಿವಾರದಂದು ಕೊಲ್ಲಾಪುರದಲ್ಲಿ ಗೂಂಡಾಗಿರಿ ಶೈಲಿಯಲ್ಲಿ ಪ್ರತಿಭಟನೆ ನಡೆಸಿದ ಶಿವಸೈನಿಕರು, ಬೆಳಗಾವಿ ಜಿಲ್ಲೆ ತಮ್ಮದೇ ಎಂದು ಕೂಗುತ್ತ, ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರತಿಕೃತಿ ದಹನ ಮಾಡಿದ್ದಾರೆ, ಕನ್ನಡ ಚಿತ್ರವೊಂದರ ಪ್ರದರ್ಶನವನ್ನು ಬಲವಂತವಾಗಿ ನಿಲ್ಲಿಸಿದ್ದಾರೆ, ಸೊಲ್ಲಾಪುರ ಮತ್ತು ಕರ್ನಾಟಕದ ನಡುವೆ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಇದು ಉದ್ಧಟತನದ ನಡವಳಿಕೆ. ಮುಖ್ಯಮಂತ್ರಿಯಾದ ನಂತರ ಅನಗತ್ಯವಾಗಿ ಬೆಳಗಾವಿ ವಿಷಯದ ಬಗ್ಗೆ ತಲೆ ಕೆಡಿಸಿಕೊಂಡ ಉದ್ಧವ್ ಠಾಕ್ರೆಯವರ ಪ್ರಚೋದನೆ ಇದರ ಹಿಂದೆ ಕೆಲಸ ಮಾಡಿದೆ. ಹೀಗಾಗಿ ಶಿವಸೈನಿಕರು ಮತ್ತೆ ಇಂತಹ ಕೃತ್ಯಕ್ಕೆ ಇಳಿಯದಂತೆ ಸಂಯಮ ಹೇಳುವ ಜವಾಬ್ದಾರಿಯೂ ಅವರದೇ.

ಇನ್ನೊಂದು ಕಡೆ ಉಪ ಮುಖ್ಯಮಂತ್ರಿಯಾಗುವ ಮಹದಾಸೆ ಹೊಂದಿರುವ ಗೋಕಾಕಿನ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿಯ ಬಹಿರಂಗ ಸಭೆಯೊಂದರಲ್ಲಿ ಮಾತನಾಡುತ್ತ, ‘ಬೆಳಗಾವಿ ಗ್ರಾಮೀಣ ಪ್ರದೇಶ ಕ್ಷೇತ್ರದಲ್ಲಿ ಮರಾಠಿಗನೇ ಶಾಸಕನಾಗಬೇಕು, ಅಂತಹ ಅಭ್ಯರ್ಥಿಗೆ ನಾನು 5 ಕೋಟಿ ರೂ. ಆಫರ್ ನೀಡುವೆ’ ಎನ್ನುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ. ಅಲ್ಲಿನ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರೋಧಿಸುವ ಭರದಲ್ಲಿ ಅವರು ರಾಜ್ಯಕ್ಕೆ ಮಾರಕವಾಗುವ ಹೇಳಿಕೆ ನೀಡಿರುವುದನ್ನು ರಾಜ್ಯದ ಎಲ್ಲ ಪಕ್ಷಗಳು ಮತ್ತು ನಾಗರಿಕರು ಖಂಡಿಸಲೇಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...