Homeಕರ್ನಾಟಕಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

ಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

- Advertisement -
- Advertisement -

ಬೆಳಗಾವಿ ಗಡಿ ವಿವಾದವನ್ನು ಮತ್ತೊಮ್ಮೆ ಅನಗತ್ಯವಾಗಿ ಮುನ್ನೆಲೆಗೆ ತರುವ ಹುಚ್ಚು ನಾಟಕಗಳನ್ನು ಮಹಾರಾಷ್ಟ್ರದ ಶಿವಸೇನೆ ಆರಂಭಿಸಿರುವ ಹೊತ್ತಿನಲ್ಲೇ, ಇತ್ತ ಶಾಸಕ ರಮೇಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಭಾಗ ಮರಾಠಿಗರಿಗೆ ಸೇರಿದ್ದು ಎಂಬರ್ಥದ ಭಾಷಣ ಮಾಡುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ.

ಮಹಾಜನ್ ಆಯೋಗದ ವರದಿ ಎಂದೋ ಬೆಳಗಾವಿ ಜಿಲ್ಲೆ ಕರ್ನಾಟಕಕ್ಕೆ ಸೇರಿದ್ದೆಂದು ಹೇಳಿಯಾಗಿದೆ. ಗಡಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನಲ್ಲಿ ಮಹಾರಾಷ್ಟ್ರ ಸಲ್ಲಿಸಿರುವ ಒಂದು ಅರ್ಜಿ ದಶಕಗಳಿಂದ ಚಲನೆಯಿಲ್ಲದೇ ಮಲಗಿದೆ.

ಆದರೂ ಬೆಳಗಾವಿ ಜಿಲ್ಲೆಯ ಕೆಲ ಭಾಗಗಳಲ್ಲಿ ಮರಾಠಿಗರ ಹೆಸರಿನಲ್ಲಿ ಸ್ವಾರ್ಥ ರಾಜಕಾರಣ ಮಾಡುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಳಗಾವಿ ನಗರ ಮತ್ತು ಜಿಲ್ಲೆಯ ನೂರಾರು ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಹಾರಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಂದಿದೆ.
ಈಗ ಮಹಾರಾಷ್ಟ್ರದಲ್ಲಿ ಹೊಸ ಶಿವಸೇನೆ ನೇತೃತ್ವದ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಿವಸೇನಾಕ್ಕೆ ಸೇರಿದ ಕೆಲವು ಸಚಿವರು ಆಗಾಗ ಬೆಳಗಾವಿ ವಿಷಯ ಪ್ರಸ್ತಾಪಿಸಿ ಶಿವಸೇನೆಯ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ.

ಸುಪ್ರಿಂಕೋರ್ಟಿನಲ್ಲಿರುವ ಅರ್ಜಿಯ ಕುರಿತಾಗಿ ತ್ವರಿತ ಕ್ರಮಗಳನ್ನು ಕೈಗೊಳ್ಳಲು ತಮ್ಮ ಇಬ್ಬರು ಸಚಿವರಾದ ಚುಗನ್ ಭುಜಬಲ್ ಮತ್ತು ಏಕನಾಥ್ ಶಿಂಧೆ ಅವರನ್ನು ನೇಮಿಸುವ ಮೂಲಕ ಅನಗತ್ಯ ಉಸಾಬರಿಗೆ ಕೈ ಹಾಕಿದ್ದಾರೆ. ಇದರ ಪರಿಣಾಮವಾಗಿ ಕನ್ನಡಿಗರು ಗಣನೀಯವಾಗಿ ವಾಸಿಸುವ ಮಹಾರಾಷ್ಟ್ರದ ಪ್ರದೇಶಗಳಲ್ಲಿ ಶಿವಸೇನೆ ಈಗ ಈ ವಿಷಯವನ್ನು ಎತ್ತಿ ಗಲಾಟೆಗೆ ಯತ್ನಿಸುತ್ತಿದೆ.

ಹೀಗಾಗಿಯೇ ರವಿವಾರದಂದು ಕೊಲ್ಲಾಪುರದಲ್ಲಿ ಗೂಂಡಾಗಿರಿ ಶೈಲಿಯಲ್ಲಿ ಪ್ರತಿಭಟನೆ ನಡೆಸಿದ ಶಿವಸೈನಿಕರು, ಬೆಳಗಾವಿ ಜಿಲ್ಲೆ ತಮ್ಮದೇ ಎಂದು ಕೂಗುತ್ತ, ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರತಿಕೃತಿ ದಹನ ಮಾಡಿದ್ದಾರೆ, ಕನ್ನಡ ಚಿತ್ರವೊಂದರ ಪ್ರದರ್ಶನವನ್ನು ಬಲವಂತವಾಗಿ ನಿಲ್ಲಿಸಿದ್ದಾರೆ, ಸೊಲ್ಲಾಪುರ ಮತ್ತು ಕರ್ನಾಟಕದ ನಡುವೆ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಇದು ಉದ್ಧಟತನದ ನಡವಳಿಕೆ. ಮುಖ್ಯಮಂತ್ರಿಯಾದ ನಂತರ ಅನಗತ್ಯವಾಗಿ ಬೆಳಗಾವಿ ವಿಷಯದ ಬಗ್ಗೆ ತಲೆ ಕೆಡಿಸಿಕೊಂಡ ಉದ್ಧವ್ ಠಾಕ್ರೆಯವರ ಪ್ರಚೋದನೆ ಇದರ ಹಿಂದೆ ಕೆಲಸ ಮಾಡಿದೆ. ಹೀಗಾಗಿ ಶಿವಸೈನಿಕರು ಮತ್ತೆ ಇಂತಹ ಕೃತ್ಯಕ್ಕೆ ಇಳಿಯದಂತೆ ಸಂಯಮ ಹೇಳುವ ಜವಾಬ್ದಾರಿಯೂ ಅವರದೇ.

ಇನ್ನೊಂದು ಕಡೆ ಉಪ ಮುಖ್ಯಮಂತ್ರಿಯಾಗುವ ಮಹದಾಸೆ ಹೊಂದಿರುವ ಗೋಕಾಕಿನ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿಯ ಬಹಿರಂಗ ಸಭೆಯೊಂದರಲ್ಲಿ ಮಾತನಾಡುತ್ತ, ‘ಬೆಳಗಾವಿ ಗ್ರಾಮೀಣ ಪ್ರದೇಶ ಕ್ಷೇತ್ರದಲ್ಲಿ ಮರಾಠಿಗನೇ ಶಾಸಕನಾಗಬೇಕು, ಅಂತಹ ಅಭ್ಯರ್ಥಿಗೆ ನಾನು 5 ಕೋಟಿ ರೂ. ಆಫರ್ ನೀಡುವೆ’ ಎನ್ನುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ. ಅಲ್ಲಿನ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರೋಧಿಸುವ ಭರದಲ್ಲಿ ಅವರು ರಾಜ್ಯಕ್ಕೆ ಮಾರಕವಾಗುವ ಹೇಳಿಕೆ ನೀಡಿರುವುದನ್ನು ರಾಜ್ಯದ ಎಲ್ಲ ಪಕ್ಷಗಳು ಮತ್ತು ನಾಗರಿಕರು ಖಂಡಿಸಲೇಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...