Homeಕರ್ನಾಟಕಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

ಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

- Advertisement -
- Advertisement -

ಬೆಳಗಾವಿ ಗಡಿ ವಿವಾದವನ್ನು ಮತ್ತೊಮ್ಮೆ ಅನಗತ್ಯವಾಗಿ ಮುನ್ನೆಲೆಗೆ ತರುವ ಹುಚ್ಚು ನಾಟಕಗಳನ್ನು ಮಹಾರಾಷ್ಟ್ರದ ಶಿವಸೇನೆ ಆರಂಭಿಸಿರುವ ಹೊತ್ತಿನಲ್ಲೇ, ಇತ್ತ ಶಾಸಕ ರಮೇಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಭಾಗ ಮರಾಠಿಗರಿಗೆ ಸೇರಿದ್ದು ಎಂಬರ್ಥದ ಭಾಷಣ ಮಾಡುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ.

ಮಹಾಜನ್ ಆಯೋಗದ ವರದಿ ಎಂದೋ ಬೆಳಗಾವಿ ಜಿಲ್ಲೆ ಕರ್ನಾಟಕಕ್ಕೆ ಸೇರಿದ್ದೆಂದು ಹೇಳಿಯಾಗಿದೆ. ಗಡಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನಲ್ಲಿ ಮಹಾರಾಷ್ಟ್ರ ಸಲ್ಲಿಸಿರುವ ಒಂದು ಅರ್ಜಿ ದಶಕಗಳಿಂದ ಚಲನೆಯಿಲ್ಲದೇ ಮಲಗಿದೆ.

ಆದರೂ ಬೆಳಗಾವಿ ಜಿಲ್ಲೆಯ ಕೆಲ ಭಾಗಗಳಲ್ಲಿ ಮರಾಠಿಗರ ಹೆಸರಿನಲ್ಲಿ ಸ್ವಾರ್ಥ ರಾಜಕಾರಣ ಮಾಡುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಳಗಾವಿ ನಗರ ಮತ್ತು ಜಿಲ್ಲೆಯ ನೂರಾರು ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಹಾರಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಂದಿದೆ.
ಈಗ ಮಹಾರಾಷ್ಟ್ರದಲ್ಲಿ ಹೊಸ ಶಿವಸೇನೆ ನೇತೃತ್ವದ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಿವಸೇನಾಕ್ಕೆ ಸೇರಿದ ಕೆಲವು ಸಚಿವರು ಆಗಾಗ ಬೆಳಗಾವಿ ವಿಷಯ ಪ್ರಸ್ತಾಪಿಸಿ ಶಿವಸೇನೆಯ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ.

ಸುಪ್ರಿಂಕೋರ್ಟಿನಲ್ಲಿರುವ ಅರ್ಜಿಯ ಕುರಿತಾಗಿ ತ್ವರಿತ ಕ್ರಮಗಳನ್ನು ಕೈಗೊಳ್ಳಲು ತಮ್ಮ ಇಬ್ಬರು ಸಚಿವರಾದ ಚುಗನ್ ಭುಜಬಲ್ ಮತ್ತು ಏಕನಾಥ್ ಶಿಂಧೆ ಅವರನ್ನು ನೇಮಿಸುವ ಮೂಲಕ ಅನಗತ್ಯ ಉಸಾಬರಿಗೆ ಕೈ ಹಾಕಿದ್ದಾರೆ. ಇದರ ಪರಿಣಾಮವಾಗಿ ಕನ್ನಡಿಗರು ಗಣನೀಯವಾಗಿ ವಾಸಿಸುವ ಮಹಾರಾಷ್ಟ್ರದ ಪ್ರದೇಶಗಳಲ್ಲಿ ಶಿವಸೇನೆ ಈಗ ಈ ವಿಷಯವನ್ನು ಎತ್ತಿ ಗಲಾಟೆಗೆ ಯತ್ನಿಸುತ್ತಿದೆ.

ಹೀಗಾಗಿಯೇ ರವಿವಾರದಂದು ಕೊಲ್ಲಾಪುರದಲ್ಲಿ ಗೂಂಡಾಗಿರಿ ಶೈಲಿಯಲ್ಲಿ ಪ್ರತಿಭಟನೆ ನಡೆಸಿದ ಶಿವಸೈನಿಕರು, ಬೆಳಗಾವಿ ಜಿಲ್ಲೆ ತಮ್ಮದೇ ಎಂದು ಕೂಗುತ್ತ, ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರತಿಕೃತಿ ದಹನ ಮಾಡಿದ್ದಾರೆ, ಕನ್ನಡ ಚಿತ್ರವೊಂದರ ಪ್ರದರ್ಶನವನ್ನು ಬಲವಂತವಾಗಿ ನಿಲ್ಲಿಸಿದ್ದಾರೆ, ಸೊಲ್ಲಾಪುರ ಮತ್ತು ಕರ್ನಾಟಕದ ನಡುವೆ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಇದು ಉದ್ಧಟತನದ ನಡವಳಿಕೆ. ಮುಖ್ಯಮಂತ್ರಿಯಾದ ನಂತರ ಅನಗತ್ಯವಾಗಿ ಬೆಳಗಾವಿ ವಿಷಯದ ಬಗ್ಗೆ ತಲೆ ಕೆಡಿಸಿಕೊಂಡ ಉದ್ಧವ್ ಠಾಕ್ರೆಯವರ ಪ್ರಚೋದನೆ ಇದರ ಹಿಂದೆ ಕೆಲಸ ಮಾಡಿದೆ. ಹೀಗಾಗಿ ಶಿವಸೈನಿಕರು ಮತ್ತೆ ಇಂತಹ ಕೃತ್ಯಕ್ಕೆ ಇಳಿಯದಂತೆ ಸಂಯಮ ಹೇಳುವ ಜವಾಬ್ದಾರಿಯೂ ಅವರದೇ.

ಇನ್ನೊಂದು ಕಡೆ ಉಪ ಮುಖ್ಯಮಂತ್ರಿಯಾಗುವ ಮಹದಾಸೆ ಹೊಂದಿರುವ ಗೋಕಾಕಿನ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿಯ ಬಹಿರಂಗ ಸಭೆಯೊಂದರಲ್ಲಿ ಮಾತನಾಡುತ್ತ, ‘ಬೆಳಗಾವಿ ಗ್ರಾಮೀಣ ಪ್ರದೇಶ ಕ್ಷೇತ್ರದಲ್ಲಿ ಮರಾಠಿಗನೇ ಶಾಸಕನಾಗಬೇಕು, ಅಂತಹ ಅಭ್ಯರ್ಥಿಗೆ ನಾನು 5 ಕೋಟಿ ರೂ. ಆಫರ್ ನೀಡುವೆ’ ಎನ್ನುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ. ಅಲ್ಲಿನ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರೋಧಿಸುವ ಭರದಲ್ಲಿ ಅವರು ರಾಜ್ಯಕ್ಕೆ ಮಾರಕವಾಗುವ ಹೇಳಿಕೆ ನೀಡಿರುವುದನ್ನು ರಾಜ್ಯದ ಎಲ್ಲ ಪಕ್ಷಗಳು ಮತ್ತು ನಾಗರಿಕರು ಖಂಡಿಸಲೇಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...