Homeಕರ್ನಾಟಕಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

ಬೆಳಗಾವಿ ವಿವಾದ: ಶಿವಸೇನೆಯ ಪುಂಡಾಟಿಕೆ-ರಮೇಶ್‌ ಜಾರಕಿಹೊಳಿಯ ಮೂರ್ಖತನ

- Advertisement -
- Advertisement -

ಬೆಳಗಾವಿ ಗಡಿ ವಿವಾದವನ್ನು ಮತ್ತೊಮ್ಮೆ ಅನಗತ್ಯವಾಗಿ ಮುನ್ನೆಲೆಗೆ ತರುವ ಹುಚ್ಚು ನಾಟಕಗಳನ್ನು ಮಹಾರಾಷ್ಟ್ರದ ಶಿವಸೇನೆ ಆರಂಭಿಸಿರುವ ಹೊತ್ತಿನಲ್ಲೇ, ಇತ್ತ ಶಾಸಕ ರಮೇಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಭಾಗ ಮರಾಠಿಗರಿಗೆ ಸೇರಿದ್ದು ಎಂಬರ್ಥದ ಭಾಷಣ ಮಾಡುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ.

ಮಹಾಜನ್ ಆಯೋಗದ ವರದಿ ಎಂದೋ ಬೆಳಗಾವಿ ಜಿಲ್ಲೆ ಕರ್ನಾಟಕಕ್ಕೆ ಸೇರಿದ್ದೆಂದು ಹೇಳಿಯಾಗಿದೆ. ಗಡಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನಲ್ಲಿ ಮಹಾರಾಷ್ಟ್ರ ಸಲ್ಲಿಸಿರುವ ಒಂದು ಅರ್ಜಿ ದಶಕಗಳಿಂದ ಚಲನೆಯಿಲ್ಲದೇ ಮಲಗಿದೆ.

ಆದರೂ ಬೆಳಗಾವಿ ಜಿಲ್ಲೆಯ ಕೆಲ ಭಾಗಗಳಲ್ಲಿ ಮರಾಠಿಗರ ಹೆಸರಿನಲ್ಲಿ ಸ್ವಾರ್ಥ ರಾಜಕಾರಣ ಮಾಡುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಳಗಾವಿ ನಗರ ಮತ್ತು ಜಿಲ್ಲೆಯ ನೂರಾರು ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಹಾರಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಂದಿದೆ.
ಈಗ ಮಹಾರಾಷ್ಟ್ರದಲ್ಲಿ ಹೊಸ ಶಿವಸೇನೆ ನೇತೃತ್ವದ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಿವಸೇನಾಕ್ಕೆ ಸೇರಿದ ಕೆಲವು ಸಚಿವರು ಆಗಾಗ ಬೆಳಗಾವಿ ವಿಷಯ ಪ್ರಸ್ತಾಪಿಸಿ ಶಿವಸೇನೆಯ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ.

ಸುಪ್ರಿಂಕೋರ್ಟಿನಲ್ಲಿರುವ ಅರ್ಜಿಯ ಕುರಿತಾಗಿ ತ್ವರಿತ ಕ್ರಮಗಳನ್ನು ಕೈಗೊಳ್ಳಲು ತಮ್ಮ ಇಬ್ಬರು ಸಚಿವರಾದ ಚುಗನ್ ಭುಜಬಲ್ ಮತ್ತು ಏಕನಾಥ್ ಶಿಂಧೆ ಅವರನ್ನು ನೇಮಿಸುವ ಮೂಲಕ ಅನಗತ್ಯ ಉಸಾಬರಿಗೆ ಕೈ ಹಾಕಿದ್ದಾರೆ. ಇದರ ಪರಿಣಾಮವಾಗಿ ಕನ್ನಡಿಗರು ಗಣನೀಯವಾಗಿ ವಾಸಿಸುವ ಮಹಾರಾಷ್ಟ್ರದ ಪ್ರದೇಶಗಳಲ್ಲಿ ಶಿವಸೇನೆ ಈಗ ಈ ವಿಷಯವನ್ನು ಎತ್ತಿ ಗಲಾಟೆಗೆ ಯತ್ನಿಸುತ್ತಿದೆ.

ಹೀಗಾಗಿಯೇ ರವಿವಾರದಂದು ಕೊಲ್ಲಾಪುರದಲ್ಲಿ ಗೂಂಡಾಗಿರಿ ಶೈಲಿಯಲ್ಲಿ ಪ್ರತಿಭಟನೆ ನಡೆಸಿದ ಶಿವಸೈನಿಕರು, ಬೆಳಗಾವಿ ಜಿಲ್ಲೆ ತಮ್ಮದೇ ಎಂದು ಕೂಗುತ್ತ, ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರತಿಕೃತಿ ದಹನ ಮಾಡಿದ್ದಾರೆ, ಕನ್ನಡ ಚಿತ್ರವೊಂದರ ಪ್ರದರ್ಶನವನ್ನು ಬಲವಂತವಾಗಿ ನಿಲ್ಲಿಸಿದ್ದಾರೆ, ಸೊಲ್ಲಾಪುರ ಮತ್ತು ಕರ್ನಾಟಕದ ನಡುವೆ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಇದು ಉದ್ಧಟತನದ ನಡವಳಿಕೆ. ಮುಖ್ಯಮಂತ್ರಿಯಾದ ನಂತರ ಅನಗತ್ಯವಾಗಿ ಬೆಳಗಾವಿ ವಿಷಯದ ಬಗ್ಗೆ ತಲೆ ಕೆಡಿಸಿಕೊಂಡ ಉದ್ಧವ್ ಠಾಕ್ರೆಯವರ ಪ್ರಚೋದನೆ ಇದರ ಹಿಂದೆ ಕೆಲಸ ಮಾಡಿದೆ. ಹೀಗಾಗಿ ಶಿವಸೈನಿಕರು ಮತ್ತೆ ಇಂತಹ ಕೃತ್ಯಕ್ಕೆ ಇಳಿಯದಂತೆ ಸಂಯಮ ಹೇಳುವ ಜವಾಬ್ದಾರಿಯೂ ಅವರದೇ.

ಇನ್ನೊಂದು ಕಡೆ ಉಪ ಮುಖ್ಯಮಂತ್ರಿಯಾಗುವ ಮಹದಾಸೆ ಹೊಂದಿರುವ ಗೋಕಾಕಿನ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿಯ ಬಹಿರಂಗ ಸಭೆಯೊಂದರಲ್ಲಿ ಮಾತನಾಡುತ್ತ, ‘ಬೆಳಗಾವಿ ಗ್ರಾಮೀಣ ಪ್ರದೇಶ ಕ್ಷೇತ್ರದಲ್ಲಿ ಮರಾಠಿಗನೇ ಶಾಸಕನಾಗಬೇಕು, ಅಂತಹ ಅಭ್ಯರ್ಥಿಗೆ ನಾನು 5 ಕೋಟಿ ರೂ. ಆಫರ್ ನೀಡುವೆ’ ಎನ್ನುವ ಮೂಲಕ ಮೂರ್ಖತನ ಪ್ರದರ್ಶಿಸಿದ್ದಾರೆ. ಅಲ್ಲಿನ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರೋಧಿಸುವ ಭರದಲ್ಲಿ ಅವರು ರಾಜ್ಯಕ್ಕೆ ಮಾರಕವಾಗುವ ಹೇಳಿಕೆ ನೀಡಿರುವುದನ್ನು ರಾಜ್ಯದ ಎಲ್ಲ ಪಕ್ಷಗಳು ಮತ್ತು ನಾಗರಿಕರು ಖಂಡಿಸಲೇಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...