Homeಮುಖಪುಟಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಅರ್ಜಿ ತುಂಬಲು ಹೇಳಿದ ಶಾಸಕ: ಪ್ರಶ್ನಿಸಿದವರ ಮೇಲೆ ಪೊಲೀಸರಿಂದ ಧಮಕಿ!

ಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಅರ್ಜಿ ತುಂಬಲು ಹೇಳಿದ ಶಾಸಕ: ಪ್ರಶ್ನಿಸಿದವರ ಮೇಲೆ ಪೊಲೀಸರಿಂದ ಧಮಕಿ!

ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲು ಹರಸಾಹಸಪಡುತ್ತಿರುವಾಗಲೇ, ಇಲ್ಲಿರುವ ನೇಕಾರ ಕಾರ್ಮಿಕರು ಸಹ ಸಂಕಷ್ಟ ಒಳಗಾಗಿದ್ದಾರೆ.

- Advertisement -
- Advertisement -

ಕೊರೊನಾ ಕಾರಣಕ್ಕೆ ಹೇರಿದ ಲಾಕ್‌ಡೌನ್‌ಗೆ 50 ದಿನಗಳಾಗುತ್ತಾ ಬಂದಿದೆ. ಕೆಲಸವಿಲ್ಲದೇ ಸಂಕಷ್ಟದಲ್ಲಿ ಸಿಕ್ಕಿಕೊಂಡ ಬಡವರ, ಕೂಲಿಜನರ ಗೋಳು ಹೇಳತೀರದು. ಇಂತಹ ಸಂಕಷ್ಟದ ಸಮಯದಲ್ಲಿ ಬಡನೇಕಾರ ಕಾರ್ಮಿಕರ ಮೇಲೆ ಬೆಳಗಾವಿಯ ಪೊಲೀಸರು‌ ದರ್ಪ ಮೆರೆದಿರುವ ಅಮಾನವೀಯ ಘಟನೆ ವರದಿಯಾಗಿದೆ.

ನಡೆದುದಿಷ್ಟು..

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್‌ ಪಾಟೀಲ್‌‌ರವರ ಪರವಾಗಿ ಅದೇ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಗೀತಾ ಸುತಾರರವರು ಕರಪತ್ರ ಮತ್ತು ಅರ್ಜಿಯೊಂದನ್ನು ಮುದ್ರಿಸಿ ಖಾಸಬಾಗದ ಬಸವೇಶ್ವರ ಸರ್ಕಲ್‌ನಲ್ಲಿ ಹಂಚಲಾಗುವುದು ಎಂದು ಘೋಷಿಸಿದ್ದರು. ಲಾಕ್‌ಡೌನ್‌ ಕಾರಣಕ್ಕೆ ತೊಂದರೆಯಲ್ಲಿರುವ ಕಾರ್ಮಿಕರಿಗೆ ರೇಷನ್‌ ಕಿಟ್‌ ವಿತರಿಸಲು ಅರ್ಜಿಗಳನ್ನು ನೀಡುತ್ತಿದ್ದು, ಅದನ್ನು ತುಂಬಿದವರಲ್ಲಿ ಅರ್ಹರಿಗೆ ಮಾತ್ರ ಕಿಟ್‌ ವಿತರಿಸಲಾಗುವುದು ಎಂದು ಅದರಲ್ಲಿ ಬರೆದಿದ್ದು ಮೇ 03ರಂದು ಅರ್ಜಿ ತುಂಬ ಬೇಕು ಎಂದು ಪ್ರಕಟಣೆ ಹೊರಡಿಸಿದ್ದರು.

ಇದನ್ನು ಕಂಡ ಕೆಲ ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು ಈ ನಡೆಯನ್ನು ತೀವ್ರವಾಗಿ ವಿರೋಧಿಸಿದ್ದರು. ವಡಂಗಾವ್‌ನ ಖಾಸಬಾಗದಲ್ಲಿ ಬಹುತೇಕ ನೇಕಾರ ಸಮುದಾಯ ಬಡ ಕಾರ್ಮಿಕರೆ ವಾಸಿಸುತ್ತಿದ್ದು, ಅವರೆಲ್ಲರೂ ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡು ಕಷ್ಟದಲ್ಲಿದ್ದಾರೆ. ಅವರ ಪ್ರತಿ ಮನೆಗೂ ರೇಷನ್‌ ಕಿಟ್‌ ವಿತರಿಸುವುದನ್ನು ಬಿಟ್ಟು ಅರ್ಜಿ ಸಲ್ಲಿಸಿ. ಸಾಲಾಗಿ ನಿಲ್ಲಿ ಎಂದು ಆದೇಶ ಹೊರಡಿಸಿರುವುದು ಎಷ್ಟು ಸರಿ? ನಿಮಗೆ ಮತ ಹಾಕಿದ ಪ್ರಜೆಗಳನ್ನು ಇಷ್ಟು ಕೀಳಾಗಿ ಕಾಣುವುದು ಸರಿಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಎಂಥ ಚೀಪ್ ಗಿಮಿಕ್ ಗಳಪ್ಪ ನಮ್ಮ ಜನ ನಾಯಕರದ್ದು.. ???ಇಲ್ಲಿ ನೋಡಿ.. ಇವರು ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಭಯ ಪಾಟೀಲ್….

Posted by Sarala Satpute on Saturday, May 2, 2020

ಅಲ್ಲದೇ ಅಲ್ಲಿನ ಜನರು ಈ ಕುರಿತು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ನಂತರ ಶಾಸಕರು ಹಂಚಿದ್ದ ರೇಷನ್‌ ಕಿಟ್‌ಗಳು ಎರಡು ದಿನಕ್ಕೂ ಸಾಲುವುದಿಲ್ಲ, ಇದು ಪ್ರಚಾರ ತಂತ್ರವೇ ಹೊರತು ಇದರಿಂದ ಬಡವರಿಗೆ ಏನೇನು ಪ್ರಯೋಜನವಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ದೂರಿದ್ದರು.

ನಾವು ಇರಬೇಕೋ ಇಲ್ಲ ಸಾಯಬೇಕೋ? ನೇಕಾರರ ಆಕ್ರೋಶ

ನಾವು ಇರಬೇಕೋ ಇಲ್ಲ ಸಾಯಬೇಕೋ? ಬೆಳಗಾವಿಯಲ್ಲಿ ನೇಕಾರರ ಆಕ್ರೋಶ

Posted by Naanu Gauri on Wednesday, May 13, 2020

ಆದರೆ ಮೇ 11ರ ರಾತ್ರಿ ಕೆಲವು ಪೊಲೀಸ್‌ ಅಧಿಕಾರಿಗಳು ಬಂದು ಖಾಸಬಾಗದಲ್ಲಿ ವಾಸವಿದ್ದ ಸಾಮಾಜಿಕ ಕಾರ್ಯಕರ್ತ ಗಣಪತಿ ಸೊಂಟಕ್ಕಿಯವರನ್ನು ಪೊಲೀಸ್‌ ಠಾಣೆಗೆ ಬಾ ಎಂದು ಕರೆದಿದ್ದಾರೆ. ಅವರು ಕಾರಣ ಕೇಳಿದಾಗ ನಿಮ್ಮ ಮೇಲೆ ಕಂಪ್ಲೈಂಟ್‌ ಆಗಿದೆ ಎಂದು ಪೊಲೀಸರು ಉತ್ತರಿಸಿದ್ದಾರೆ. ಎಫ್‌ಆರ್‌ಐ ತೋರಿಸಿದರೆ ಮಾತ್ರ ನಾವು ಪೊಲೀಸ್‌ ಠಾಣೆಗೆ ಬರುತ್ತೇವೆ ಇಲ್ಲದಿದ್ದರೆ ಬರುವುದಿಲ್ಲ ಎಂದು ಗಣಪತಿಯವರು ಉತ್ತರಿಸಿದ್ದಾರೆ. ನಂತರ ಪೊಲೀಸರು ವಿಡಿಯೋ ಹೇಳಿಕೆ ನೀಡಿದ್ದ ಹಲವು ಕುಟುಂಬಗಳಿಗೆ ಪೊಲೀಸರು ಬೆದರಿಕೆ ಹಾಕಿದ್ದಾರೆ, ಮೂರು ಜನ ಕಾರ್ಮಿಕರನ್ನು ಬೆಳಿಗ್ಗೆ ಮಾರ್ಕೆಟ್‌ ಪೊಲೀಸ್‌ ಠಾಣೆಗೆ ಕರೆದೊಯ್ದು ಸಂಜೆವರೆಗೂ ಇರಿಸಿಕೊಂಡು ಮುಚ್ಚಳಿಕೆ ಬರೆಸಿಕೊಂಡು ಬಿಟ್ಟಿದ್ದಾರೆ ಎಂದು ಗಣಪತಿಯವರು ದೂರಿದ್ದಾರೆ.

ಜವಾಬ್ದಾರಿ ಹುದ್ದೆಯಲ್ಲಿರು ಪೊಲೀಸ್ ಅಧಿಕಾರಿಗಳೇ ಯಾವುದೇ ಘಟನೆ ನಡೆದ ಸಂಧರ್ಭದಲ್ಲಿ ಸ್ಥಳಕ್ಕೆ ಬೇಗನೆ ಬಾರದ ನೀವುಗಳು ಯಾವುದೇ ನೋಟೀಸು ಇಲ್ಲದೇ ವಿಚಾರಣೆಗೆ ಕರೆದೊಯ್ಯಲು ಪೊಲೀಸ್ ವಾಹನಸಹಿತ ಎಷ್ಟು ಬೇಗನೆ ಹಾಜರಾದ ನೀವುಗಳು ಯಾವ ಕಾರಣಕ್ಕೆ ಬಂದು ವಾಪಸು ಹೋಗಿದ್ದಿರಿ? ನಾನೇನು ಕೊಲೆ ಮಾಡಿದ್ದೇನಾ, ಇಲ್ಲಾ ಕಳ್ಳತನ ಮಾಡಿದ್ದೇನಾ, ಇಲ್ಲಾ "ಬಾಂಬ್ " ಇಡಲು ಹೊರಟಿದ್ದೇನಾ ಜನಗಳ ಪರವಾಗಿ ಶಾಸಕರನ್ನು ಪ್ರಶ್ನೆ ಮಾಡಿದ್ದಕ್ಕೆ ತಾನೇ ನೀವುಗಳು ಇಷ್ಟೇಲ್ಲಾ ಸಾಹಸ ಮಾಡಿದ್ದು, ಶಾಸಕತ್ವ ಅನ್ನೋದು ಶಾಸಕರ ವಯಕ್ತಿಕ ಆಸ್ತಿಯಲ್ಲ ತಪ್ಪು ಅನಿಸಿದ್ದನ್ನ ಪ್ರಶ್ನೆಮಾಡುವ ಹಕ್ಕು ಪ್ರತಿಯೊಬ್ಬ ನಾಗರೀಕನಿಗೆ ಇದೆ. ಇದರ ಬಗ್ಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರು ಈ ಘಟನೆ ಬಗ್ಗೆ ನನಗೆ ಬಹಿರಂಗವಾಗಿ ಉತ್ತರ ನೀಡಿ. ( ಇನ್ನು ಇಂತಹ ಕೀಳು ಮಟ್ಟದ ಗಿಮಿಕ್, ಮಾಡಿಸುವ ಧುರುಳರೇ ಸರಿಯಾಗಿ ಕೇಳಿಸಿಕೊಳ್ಳಿ, ಇವತ್ತು ನನಗೆ ನಾಳೆ ಆ( ಸರಳಾ ಸಾತಪುತೆ ) ಹೆಣ್ಣುಮಗಳಿಗೆ ಈ ರೀತಿಯ ಹೆದರಿಸುವ ಎಲ್ಲಾತರದ ಪ್ರಯತ್ನದಲ್ಲಿ ಇರಬಹುದು ಆದರೆ ಇದಕ್ಕೆಲ್ಲ ಹೆದರುವದಿಲ್ಲ ಇಂತಹ ಪ್ರಯತ್ನಗಳು ನಡೆದರೆ, ಮುಂದೆ ರಾಜ್ಯ ಮಟ್ಟದಲ್ಲೂ ಚೆರ್ಚೆಯಾಗುವದರಲ್ಲಿ ಯಾವುದೇ ಸಂದೇಹವಿಲ್ಲಾ. ) ಇನ್ನು ಇಂತಹ ಸಣ್ಣತನವನ್ನು ಬಿಟ್ಟು ನಿಮ್ಮಲ್ಲಿ ಧೈರ್ಯ ವಿದ್ದರೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾಧ್ಯಮ, ಹಾಗೂ ಬಹಿರಂಗವಾಗಿ ಚೆರ್ಚೆಗೆ ಬನ್ನಿ ಇದಕ್ಕೆ ನಮ್ಮ ಕೂಲಿ ನೇಕಾರರ ಬಳಗ ಸಿದ್ಧವಿದೆ. ( ಇದು ಬೆಳಗಾವಿ ದಕ್ಷಿಣ ಮತ ಕ್ಷೇತ್ರದಲ್ಲಿ ನಡೆಯುತ್ತಿರುವ ವಿದ್ಯಮಾನ )

Posted by Ganapati Sontakki on Monday, May 11, 2020

ನಾನು ವಿಕಲಚೇತನವಾಗಿದ್ದೇನೆ. ಪೊಲೀಸರು ನನ್ನ ವಿಕಲಚೇತನತೆ ಕುರಿತು ನಮ್ಮ ಅಳಿಯನಿಗೆ ಫೋನ್ ಮಾಡಿ ವ್ಯಂಗ್ಯವಾಡಿದ್ದಾರೆ. ಇದರಿಂದ ನನಗೆ ತೀವ್ರ ನೋವಾಗಿದೆ. ಒಟ್ಟಾರೆ ಪೊಲೀಸರು ಶಾಸಕರ ಕುಮ್ಮಕ್ಕಿನಿಂದ ಈ ರೀತಿ ನಿಯಮಬಾಹಿರವಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಪೊಲೀಸ್‌ ಕಮಿಷನರ್‌‌ನವರು ಈ ಕುರಿತ ನನಗೆ ಹೆಚ್ಚಿನ ಮಾಹಿತಿಯಿಲ್ಲ. ವಿಚಾರಿಸುತ್ತೇನೆ ಎಂದು ಹೇಳಿದ್ದಾರೆ. ಆದರೆ ಪೊಲೀಸರು ಮಾತ್ರ ಯಾವುದೇ ಕೇಸು ಇಲ್ಲದೇ ವಿಚಾರಣೆ ನೆಪದಲ್ಲಿ ಬಡಕಾರ್ಮಿಕರಿಗೆ ತೊಂದರೆ ನೀಡಿದ್ದಾರೆ. ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲು ಹರಸಾಹಸಪಡುತ್ತಿರುವಾಗಲೇ, ಇಲ್ಲಿರುವ ನೇಕಾರ ಕಾರ್ಮಿಕರು ಸಹ ಸಂಕಷ್ಟ ಒಳಗಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನೇಕರರ ಗೋಳು ಕೇಳುವವರಿಲ್ಲ. ಸೀರೆ ನೆಯ್ಯೆದು ಯಲ್ಲರ ಮಾನಾ ಮುಚ್ಹೋ ನೇಕರ್ ಜೀವನವೇ ಅರ್ತ ವಿಲ್ಲದಂತಾಗಿದೆ…?

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...