Homeಮುಖಪುಟಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಅರ್ಜಿ ತುಂಬಲು ಹೇಳಿದ ಶಾಸಕ: ಪ್ರಶ್ನಿಸಿದವರ ಮೇಲೆ ಪೊಲೀಸರಿಂದ ಧಮಕಿ!

ಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಅರ್ಜಿ ತುಂಬಲು ಹೇಳಿದ ಶಾಸಕ: ಪ್ರಶ್ನಿಸಿದವರ ಮೇಲೆ ಪೊಲೀಸರಿಂದ ಧಮಕಿ!

ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲು ಹರಸಾಹಸಪಡುತ್ತಿರುವಾಗಲೇ, ಇಲ್ಲಿರುವ ನೇಕಾರ ಕಾರ್ಮಿಕರು ಸಹ ಸಂಕಷ್ಟ ಒಳಗಾಗಿದ್ದಾರೆ.

- Advertisement -
- Advertisement -

ಕೊರೊನಾ ಕಾರಣಕ್ಕೆ ಹೇರಿದ ಲಾಕ್‌ಡೌನ್‌ಗೆ 50 ದಿನಗಳಾಗುತ್ತಾ ಬಂದಿದೆ. ಕೆಲಸವಿಲ್ಲದೇ ಸಂಕಷ್ಟದಲ್ಲಿ ಸಿಕ್ಕಿಕೊಂಡ ಬಡವರ, ಕೂಲಿಜನರ ಗೋಳು ಹೇಳತೀರದು. ಇಂತಹ ಸಂಕಷ್ಟದ ಸಮಯದಲ್ಲಿ ಬಡನೇಕಾರ ಕಾರ್ಮಿಕರ ಮೇಲೆ ಬೆಳಗಾವಿಯ ಪೊಲೀಸರು‌ ದರ್ಪ ಮೆರೆದಿರುವ ಅಮಾನವೀಯ ಘಟನೆ ವರದಿಯಾಗಿದೆ.

ನಡೆದುದಿಷ್ಟು..

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್‌ ಪಾಟೀಲ್‌‌ರವರ ಪರವಾಗಿ ಅದೇ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಗೀತಾ ಸುತಾರರವರು ಕರಪತ್ರ ಮತ್ತು ಅರ್ಜಿಯೊಂದನ್ನು ಮುದ್ರಿಸಿ ಖಾಸಬಾಗದ ಬಸವೇಶ್ವರ ಸರ್ಕಲ್‌ನಲ್ಲಿ ಹಂಚಲಾಗುವುದು ಎಂದು ಘೋಷಿಸಿದ್ದರು. ಲಾಕ್‌ಡೌನ್‌ ಕಾರಣಕ್ಕೆ ತೊಂದರೆಯಲ್ಲಿರುವ ಕಾರ್ಮಿಕರಿಗೆ ರೇಷನ್‌ ಕಿಟ್‌ ವಿತರಿಸಲು ಅರ್ಜಿಗಳನ್ನು ನೀಡುತ್ತಿದ್ದು, ಅದನ್ನು ತುಂಬಿದವರಲ್ಲಿ ಅರ್ಹರಿಗೆ ಮಾತ್ರ ಕಿಟ್‌ ವಿತರಿಸಲಾಗುವುದು ಎಂದು ಅದರಲ್ಲಿ ಬರೆದಿದ್ದು ಮೇ 03ರಂದು ಅರ್ಜಿ ತುಂಬ ಬೇಕು ಎಂದು ಪ್ರಕಟಣೆ ಹೊರಡಿಸಿದ್ದರು.

ಇದನ್ನು ಕಂಡ ಕೆಲ ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರು ಈ ನಡೆಯನ್ನು ತೀವ್ರವಾಗಿ ವಿರೋಧಿಸಿದ್ದರು. ವಡಂಗಾವ್‌ನ ಖಾಸಬಾಗದಲ್ಲಿ ಬಹುತೇಕ ನೇಕಾರ ಸಮುದಾಯ ಬಡ ಕಾರ್ಮಿಕರೆ ವಾಸಿಸುತ್ತಿದ್ದು, ಅವರೆಲ್ಲರೂ ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡು ಕಷ್ಟದಲ್ಲಿದ್ದಾರೆ. ಅವರ ಪ್ರತಿ ಮನೆಗೂ ರೇಷನ್‌ ಕಿಟ್‌ ವಿತರಿಸುವುದನ್ನು ಬಿಟ್ಟು ಅರ್ಜಿ ಸಲ್ಲಿಸಿ. ಸಾಲಾಗಿ ನಿಲ್ಲಿ ಎಂದು ಆದೇಶ ಹೊರಡಿಸಿರುವುದು ಎಷ್ಟು ಸರಿ? ನಿಮಗೆ ಮತ ಹಾಕಿದ ಪ್ರಜೆಗಳನ್ನು ಇಷ್ಟು ಕೀಳಾಗಿ ಕಾಣುವುದು ಸರಿಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಎಂಥ ಚೀಪ್ ಗಿಮಿಕ್ ಗಳಪ್ಪ ನಮ್ಮ ಜನ ನಾಯಕರದ್ದು.. ???ಇಲ್ಲಿ ನೋಡಿ.. ಇವರು ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಭಯ ಪಾಟೀಲ್….

Posted by Sarala Satpute on Saturday, May 2, 2020

ಅಲ್ಲದೇ ಅಲ್ಲಿನ ಜನರು ಈ ಕುರಿತು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ನಂತರ ಶಾಸಕರು ಹಂಚಿದ್ದ ರೇಷನ್‌ ಕಿಟ್‌ಗಳು ಎರಡು ದಿನಕ್ಕೂ ಸಾಲುವುದಿಲ್ಲ, ಇದು ಪ್ರಚಾರ ತಂತ್ರವೇ ಹೊರತು ಇದರಿಂದ ಬಡವರಿಗೆ ಏನೇನು ಪ್ರಯೋಜನವಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ದೂರಿದ್ದರು.

ನಾವು ಇರಬೇಕೋ ಇಲ್ಲ ಸಾಯಬೇಕೋ? ನೇಕಾರರ ಆಕ್ರೋಶ

ನಾವು ಇರಬೇಕೋ ಇಲ್ಲ ಸಾಯಬೇಕೋ? ಬೆಳಗಾವಿಯಲ್ಲಿ ನೇಕಾರರ ಆಕ್ರೋಶ

Posted by Naanu Gauri on Wednesday, May 13, 2020

ಆದರೆ ಮೇ 11ರ ರಾತ್ರಿ ಕೆಲವು ಪೊಲೀಸ್‌ ಅಧಿಕಾರಿಗಳು ಬಂದು ಖಾಸಬಾಗದಲ್ಲಿ ವಾಸವಿದ್ದ ಸಾಮಾಜಿಕ ಕಾರ್ಯಕರ್ತ ಗಣಪತಿ ಸೊಂಟಕ್ಕಿಯವರನ್ನು ಪೊಲೀಸ್‌ ಠಾಣೆಗೆ ಬಾ ಎಂದು ಕರೆದಿದ್ದಾರೆ. ಅವರು ಕಾರಣ ಕೇಳಿದಾಗ ನಿಮ್ಮ ಮೇಲೆ ಕಂಪ್ಲೈಂಟ್‌ ಆಗಿದೆ ಎಂದು ಪೊಲೀಸರು ಉತ್ತರಿಸಿದ್ದಾರೆ. ಎಫ್‌ಆರ್‌ಐ ತೋರಿಸಿದರೆ ಮಾತ್ರ ನಾವು ಪೊಲೀಸ್‌ ಠಾಣೆಗೆ ಬರುತ್ತೇವೆ ಇಲ್ಲದಿದ್ದರೆ ಬರುವುದಿಲ್ಲ ಎಂದು ಗಣಪತಿಯವರು ಉತ್ತರಿಸಿದ್ದಾರೆ. ನಂತರ ಪೊಲೀಸರು ವಿಡಿಯೋ ಹೇಳಿಕೆ ನೀಡಿದ್ದ ಹಲವು ಕುಟುಂಬಗಳಿಗೆ ಪೊಲೀಸರು ಬೆದರಿಕೆ ಹಾಕಿದ್ದಾರೆ, ಮೂರು ಜನ ಕಾರ್ಮಿಕರನ್ನು ಬೆಳಿಗ್ಗೆ ಮಾರ್ಕೆಟ್‌ ಪೊಲೀಸ್‌ ಠಾಣೆಗೆ ಕರೆದೊಯ್ದು ಸಂಜೆವರೆಗೂ ಇರಿಸಿಕೊಂಡು ಮುಚ್ಚಳಿಕೆ ಬರೆಸಿಕೊಂಡು ಬಿಟ್ಟಿದ್ದಾರೆ ಎಂದು ಗಣಪತಿಯವರು ದೂರಿದ್ದಾರೆ.

ಜವಾಬ್ದಾರಿ ಹುದ್ದೆಯಲ್ಲಿರು ಪೊಲೀಸ್ ಅಧಿಕಾರಿಗಳೇ ಯಾವುದೇ ಘಟನೆ ನಡೆದ ಸಂಧರ್ಭದಲ್ಲಿ ಸ್ಥಳಕ್ಕೆ ಬೇಗನೆ ಬಾರದ ನೀವುಗಳು ಯಾವುದೇ ನೋಟೀಸು ಇಲ್ಲದೇ ವಿಚಾರಣೆಗೆ ಕರೆದೊಯ್ಯಲು ಪೊಲೀಸ್ ವಾಹನಸಹಿತ ಎಷ್ಟು ಬೇಗನೆ ಹಾಜರಾದ ನೀವುಗಳು ಯಾವ ಕಾರಣಕ್ಕೆ ಬಂದು ವಾಪಸು ಹೋಗಿದ್ದಿರಿ? ನಾನೇನು ಕೊಲೆ ಮಾಡಿದ್ದೇನಾ, ಇಲ್ಲಾ ಕಳ್ಳತನ ಮಾಡಿದ್ದೇನಾ, ಇಲ್ಲಾ "ಬಾಂಬ್ " ಇಡಲು ಹೊರಟಿದ್ದೇನಾ ಜನಗಳ ಪರವಾಗಿ ಶಾಸಕರನ್ನು ಪ್ರಶ್ನೆ ಮಾಡಿದ್ದಕ್ಕೆ ತಾನೇ ನೀವುಗಳು ಇಷ್ಟೇಲ್ಲಾ ಸಾಹಸ ಮಾಡಿದ್ದು, ಶಾಸಕತ್ವ ಅನ್ನೋದು ಶಾಸಕರ ವಯಕ್ತಿಕ ಆಸ್ತಿಯಲ್ಲ ತಪ್ಪು ಅನಿಸಿದ್ದನ್ನ ಪ್ರಶ್ನೆಮಾಡುವ ಹಕ್ಕು ಪ್ರತಿಯೊಬ್ಬ ನಾಗರೀಕನಿಗೆ ಇದೆ. ಇದರ ಬಗ್ಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರು ಈ ಘಟನೆ ಬಗ್ಗೆ ನನಗೆ ಬಹಿರಂಗವಾಗಿ ಉತ್ತರ ನೀಡಿ. ( ಇನ್ನು ಇಂತಹ ಕೀಳು ಮಟ್ಟದ ಗಿಮಿಕ್, ಮಾಡಿಸುವ ಧುರುಳರೇ ಸರಿಯಾಗಿ ಕೇಳಿಸಿಕೊಳ್ಳಿ, ಇವತ್ತು ನನಗೆ ನಾಳೆ ಆ( ಸರಳಾ ಸಾತಪುತೆ ) ಹೆಣ್ಣುಮಗಳಿಗೆ ಈ ರೀತಿಯ ಹೆದರಿಸುವ ಎಲ್ಲಾತರದ ಪ್ರಯತ್ನದಲ್ಲಿ ಇರಬಹುದು ಆದರೆ ಇದಕ್ಕೆಲ್ಲ ಹೆದರುವದಿಲ್ಲ ಇಂತಹ ಪ್ರಯತ್ನಗಳು ನಡೆದರೆ, ಮುಂದೆ ರಾಜ್ಯ ಮಟ್ಟದಲ್ಲೂ ಚೆರ್ಚೆಯಾಗುವದರಲ್ಲಿ ಯಾವುದೇ ಸಂದೇಹವಿಲ್ಲಾ. ) ಇನ್ನು ಇಂತಹ ಸಣ್ಣತನವನ್ನು ಬಿಟ್ಟು ನಿಮ್ಮಲ್ಲಿ ಧೈರ್ಯ ವಿದ್ದರೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾಧ್ಯಮ, ಹಾಗೂ ಬಹಿರಂಗವಾಗಿ ಚೆರ್ಚೆಗೆ ಬನ್ನಿ ಇದಕ್ಕೆ ನಮ್ಮ ಕೂಲಿ ನೇಕಾರರ ಬಳಗ ಸಿದ್ಧವಿದೆ. ( ಇದು ಬೆಳಗಾವಿ ದಕ್ಷಿಣ ಮತ ಕ್ಷೇತ್ರದಲ್ಲಿ ನಡೆಯುತ್ತಿರುವ ವಿದ್ಯಮಾನ )

Posted by Ganapati Sontakki on Monday, May 11, 2020

ನಾನು ವಿಕಲಚೇತನವಾಗಿದ್ದೇನೆ. ಪೊಲೀಸರು ನನ್ನ ವಿಕಲಚೇತನತೆ ಕುರಿತು ನಮ್ಮ ಅಳಿಯನಿಗೆ ಫೋನ್ ಮಾಡಿ ವ್ಯಂಗ್ಯವಾಡಿದ್ದಾರೆ. ಇದರಿಂದ ನನಗೆ ತೀವ್ರ ನೋವಾಗಿದೆ. ಒಟ್ಟಾರೆ ಪೊಲೀಸರು ಶಾಸಕರ ಕುಮ್ಮಕ್ಕಿನಿಂದ ಈ ರೀತಿ ನಿಯಮಬಾಹಿರವಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಪೊಲೀಸ್‌ ಕಮಿಷನರ್‌‌ನವರು ಈ ಕುರಿತ ನನಗೆ ಹೆಚ್ಚಿನ ಮಾಹಿತಿಯಿಲ್ಲ. ವಿಚಾರಿಸುತ್ತೇನೆ ಎಂದು ಹೇಳಿದ್ದಾರೆ. ಆದರೆ ಪೊಲೀಸರು ಮಾತ್ರ ಯಾವುದೇ ಕೇಸು ಇಲ್ಲದೇ ವಿಚಾರಣೆ ನೆಪದಲ್ಲಿ ಬಡಕಾರ್ಮಿಕರಿಗೆ ತೊಂದರೆ ನೀಡಿದ್ದಾರೆ. ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲು ಹರಸಾಹಸಪಡುತ್ತಿರುವಾಗಲೇ, ಇಲ್ಲಿರುವ ನೇಕಾರ ಕಾರ್ಮಿಕರು ಸಹ ಸಂಕಷ್ಟ ಒಳಗಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನೇಕರರ ಗೋಳು ಕೇಳುವವರಿಲ್ಲ. ಸೀರೆ ನೆಯ್ಯೆದು ಯಲ್ಲರ ಮಾನಾ ಮುಚ್ಹೋ ನೇಕರ್ ಜೀವನವೇ ಅರ್ತ ವಿಲ್ಲದಂತಾಗಿದೆ…?

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...