Homeಕರ್ನಾಟಕಬೆಳಗಾವಿ ಪಾಲಿಕೆ ಚುನಾವಣೆ: ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಬಿಜೆಪಿ

ಬೆಳಗಾವಿ ಪಾಲಿಕೆ ಚುನಾವಣೆ: ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಬಿಜೆಪಿ

- Advertisement -
- Advertisement -

ರಾಜ್ಯದ ಮೂರು ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬೆಳಗಾವಿ ಮಹಾನಗರ ಪಾಲಿಕೆಯ 58 ಸ್ಥಾನಗಳಲ್ಲಿ 35 ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ. ಈ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಸಿದ್ಧವಾಗಿದೆ.

ಬೆಳಗಾವಿ ಪಾಲಿಕೆಯ 58 ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಿದ್ದು, ಈ ಪೈಕಿ ಬಿಜೆಪಿ 35 ವಾರ್ಡ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 10, ಎಂಇಎಸ್ 2, ಪಕ್ಷೇತರ ಅಭ್ಯರ್ಥಿಗಳು 10 ಹಾಗೂ ಎಐಎಂಐಎಂ 1 ವಾರ್ಡ್‌‌ನಲ್ಲಿ ಗೆಲುವು ಸಾಧಿಸಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಜೆಡಿಎಸ್‌ ಪಕ್ಷ ಒಂದು ಸ್ಥಾನವನ್ನು ಗೆಲ್ಲುವಲ್ಲಿ ವಿಫಲವಾಗಿದ್ದು, ಶೂನ್ಯ ಸಾಧನೆ ಮಾಡಿದೆ.

ಇದನ್ನೂ ಓದಿ: ದಾಬೋಲ್ಕರ್‌ ಹತ್ಯೆ: ಸೆ.7ರಂದು ಯುಎಪಿಎ ಅಡಿಯಲ್ಲಿ ಐವರ ಮೇಲೆ ಚಾರ್ಜ್‌ಶೀಟ್ ಸಲ್ಲಿಕೆ?

ಬೆಳಗಾವಿಯಲ್ಲಿ ಬರೊಬ್ಬರಿ 25 ವರ್ಷಗಳ ಬಳಿಕ ಮೊದಲ ಬಾರಿಗೆ ಅಭ್ಯರ್ಥಿಗಳು ರಾಜಕೀಯ ಪಕ್ಷಗಳ ಚಿನ್ಹೆಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಇಳಿದಿದ್ದರು. ಈಗ ಬಿಜೆಪಿ 35 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರಕ್ಕೇರಲು ಸಿದ್ಧವಾಗಿದೆ. ಬಿಜೆಪಿ ಗೆಲುವಿಗೆ ಬೆಳಗಾವಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಸಂಭ್ರಮಾಚರಣೆ ವೇಳೆ ಬಿಜೆಪಿ ಕಾರ್ಯಕರ್ತರು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ, ಕಲಬುರ್ಗಿ ಪಾಲಿಕೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. ಹುಬ್ಬಳಿ-ಧಾರವಾಡ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ಇದೆ. ಅಲ್ಲದೆ, ಮೈಸೂರು ಮಹಾನಗರ ಪಾಲಿಕೆ ಮತ್ತು ದಾಂಡೇಲಿ ನಗರಸಭೆಗಳ ಒಂದೊಂದು ಸ್ಥಾನಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪುರಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಪುರಸಭೆಯ ಅಧಿಕಾರದ ಗದ್ದುಗೆಯನ್ನು ತನ್ನದಾಗಿಸಿಕೊಂಡಿದೆ. ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.


ಇದನ್ನೂ ಓದಿ: ತರೀಕೆರೆ ಪುರಸಭೆ ಚುನಾವಣೆ: ಕಾಂಗ್ರೆಸ್‌ಗೆ ಭರ್ಜರಿ ಜಯ, ಒಂದು ಸ್ಥಾನಕ್ಕೆ ತೃಪ್ತಿ ಪಟ್ಟ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...