Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...