Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...