Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...