Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...