Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...