Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...