Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...