Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...