Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

"ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುವುದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ಪ್ರತಿ ಸಲ ಹೊಸ ದಿನಾಂಕ...

ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್

ಬಿಜೆಪಿ ಜೊತೆ ಕೈಜೋಡಿಸುವ ಪ್ರಾದೇಶಿಗಳ ಪಕ್ಷಗಳು ಅಥವಾ ಸಣ್ಣ ಪಕ್ಷಗಳಿಗೆ ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಭಾನುವಾರ (ಜ.18) ಎಚ್ಚರಿಕೆ ನೀಡಿದ್ದು, ಕೇಸರಿ ಪಕ್ಷ ಆರಂಭದಲ್ಲಿ ಮೈತ್ರಿ ಮಾಡಿಕೊಂಡು...

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17)...

ಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರ ಖಾಲಿ ಮನೆಯಲ್ಲಿ ನಮಾಝ್ ಮಾಡಿದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ವರದಿಯಾಗಿದೆ. ಅನುಮತಿ ಪಡೆಯದೆ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು theprint.in ವರದಿ ಮಾಡಿದೆ....

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...