Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...