Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...