Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...