Homeಚಳವಳಿಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ

- Advertisement -
- Advertisement -

ಬ್ರಿಟಿಷರ ವಿರುದ್ದ ಕಿತ್ತೂರು ರಾಣಿ ಚೆನ್ನಮ್ಮ ಇದೇ ಬೆಳಗಾವಿಯಲ್ಲಿ ಹೋರಾಟ ಆರಂಭಿಸಿದ್ದರು. ಈಗ ನೀವುಗಳು ಅದೇ ಮಾದರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ರಸ್ತೆಗಳಿಗೆ ಇಳಿದು ಹೋರಾಟ ಆರಂಭಿಸಬೇಕಾಗಿದೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ’ರೈತರು ಹೋರಾಟಗಳಿಗೆ, ರೈತ ಸಭೆಗಳಿಗೆ ಸರ್ಕಾರದಿಂದ ಅನುಮತಿ ತೆಗೆದುಕೊಳ್ಳಬೇಕಿಲ್ಲ. 25 ವರ್ಷಗಳ ಸುಧೀರ್ಘ ಹೋರಾಟದಲ್ಲಿ ನಾವು ಎಂದೂ ಸರ್ಕಾರದಿಂದ ಅನುಮತಿ ಪಡೆದಿಲ್ಲ’ ಎಂದು  ಹೇಳಿದ್ದಾರೆ.

“ಬೆಳಗಾವಿಯ ರೈತರು ಅದೃಷ್ಟವಂತರಿದ್ದಿರಿ. ನೀವು ಹೋರಾಟ ನಡೆಸಲು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಏಕೆಂದರೇ ನಿಮ್ಮ ವಿಧಾನಸೌಧ ಇಲ್ಲಿಯೇ ಇದೆ. ‌ಇದೇ ವಿಧಾನಸೌಧವನ್ನು ಸುತ್ತುವರಿಯಿರಿ. ಎಂಎಸ್‌ಪಿ ಆಧಾರದಲ್ಲಿ ನಿಮ್ಮ ಬೆಳೆಗಳನ್ನು ಮಾರಾಟ ಮಾಡಿ. ಹೋರಾಟ ಮಾಡಿ, ಟ್ಯ್ರಾಕ್ಟರ್‌ಗಳಿಂದ ಬ್ಯಾರಿಕೇಡ್‌ಗಳನ್ನು ಮುರಿಯಿರಿ, ‌‌ಒಂದು ಬ್ಯಾರಿಕೇಡ್ ಮುರಿದರೆ ನಿಮ್ಮ ಆಂದೋಲನ ಯಶಸ್ಸಯ ಕಾಣುತ್ತದೆ’ ಎಂದು ಟಿಕಾಯತ್ ಹೇಳಿದ್ದಾರೆ.

“ಒಕ್ಕೂಟ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿತು. ಇದನ್ನೂ ವಿರೋಧಿಸಿ ರೈತರು ದೆಹಲಿಯನ್ನು ನಾಲ್ಕು ದಿಕ್ಕುಗಳಿಂದ ಆವರಿಸಿದ್ದಾರೆ. ಹೋರಾಟವನ್ನು ಮುರಿಯಲು ಸರ್ಕಾರ ಹಲವು ವಿಧಗಳಲ್ಲಿ ಪ್ರಯತ್ನಿಸಿತು. ಆದರೆ ರೈತ ಹೋರಾಟ ಮತ್ತಷ್ಟು ಗಟ್ಟಿಯಾಯಿತು. ’ದೆಹಲಿಯಲ್ಲಿ ಈಗ 40 ಡಿಗ್ರಿ ಬಿಸಿಲಿದೆ. ನಾವು ತೀವ್ರ ಚಳಿಯನ್ನು ನೋಡಿದ್ದೇವೆ. ಮುಂದೆ ಮಳೆಯೂ ಬರಲಿದೆ. ಆದರೆ, ರೈತರು ಅಲ್ಲಿಂದ ಕದಲುವುದಿಲ್ಲ” ಎಂದರು.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಕರ್ನಾಟಕದಲ್ಲಿ ಆಂದೋಲನ ಗಟ್ಟಿಯಾಗಿಲ್ಲ, ಅದನ್ನು ಮತ್ತಷ್ಟು ಜೋರು ಮಾಡಬೇಕೆಂದ  ಟಿಕಾಯತ್, “ನೀವು ಹೋರಾಟ ನಡೆಸಲು ಸರ್ಕಾರಕ್ಕೆ, ಪೊಲೀಸರಿಗೆ ಏಕೆ ಹೆದರುತ್ತಿರಿ…? ಜೈಲಿಗೆ ಹೋಗುವುದರಿಂದ ಹೆದರುತ್ತಿರ? ಇಷ್ಟು ದಿನಗಳ ಹೋರಾಟದಲ್ಲಿ ಇಲ್ಲಿ ಒಂದು ಲಾಠಿಚಾರ್ಜ್, ಒಂದು ಆಶ್ರುವಾಯು ಪ್ರಯೋಗ ನಡೆದಿಲ್ಲ ಎಂದ ಮೇಲೆ ಎಂತಹ ಹೋರಾಟ ನಿಮ್ಮದು…? ನೀವು ಗಟ್ಟಿಯಾಗಿ ಹೋರಾಟ ಮಾಡಿ, ನಿಮಗೆ ತೊಂದರೆಯಾದರೆ ದೆಹಲಿಯ ಸುತ್ತಲೂ ರೈತರಿದ್ದಾರೆ ನಿಮಗೆ ಚಿಕಿತ್ಸೆ ನೀಡುತ್ತಾರೆ” ಎಂದರು.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

’ಈ 2021 ರ ವರ್ಷ ಹೋರಾಟದ ವರ್ಷವಾಗಿದೆ. ದೇಶದಲ್ಲಿ ಹೋರಾಟ ಪಸರಿಸುತ್ತಿದೆ. ಮಹಾತ್ಮ ಗಾಂಧಿಯ ಅನುಯಾಯಿಗಳಾದ ರೈತರು, ಶಾಂತಿಯುತ ಹೋರಾಟ ಮಾಡುತ್ತಿದ್ದಾರೆ. ಆದರೆ ಯಾರಾದರೂ ಕ್ರಾಂತಿ ಮಾಡಲು ಬಯಸಿದರೇ ಅದಕ್ಕೂ ನಮ್ಮ ಬಳಿ ಪರಿಹಾರವಿದೆ. ಯಾರು ಹೆದರುವ ಯಾವ ಅವಶ್ಯಕತೆಯೂ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಪಕ್ಷ ಹಲವು ರಾಜ್ಯಗಳಲ್ಲೂ ಅಧಿಕಾರದಲ್ಲಿದೆ. ಆದರೆ, ಪಂಜಾಬ್, ಹರಿಯಾಣದಲ್ಲಿ ಈ ಪಕ್ಷದ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‌ ಇಳಿಸಲು ಸಾಧ್ಯವಿಲ್ಲ, ಕಾರ್ಯಕರ್ತರ ಸಭೆಗಳನ್ನು ನಡೆಸಲು ಬಿಡುತ್ತಿಲ್ಲ. ಹಾಗಾಗಿ ನೀವೂ ಹೊದರಬೇಕಿಲ್ಲ. ರೈತ ಹೋರಾಟ, ರೈತ ಸಭೆಗಳನ್ನು ನಡೆಸಿ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದಿದ್ದಾರೆ.

ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ ಎಂದರು.

ಒಂದು ಟ್ಯ್ರಾಕ್ಟರ್‌, ಒಂದು ಊರು, 15 ಜನರು, 10 ದಿನ ಇದು ಹೋರಾಟ ನಡೆಸಲು ನಮ್ಮ ಯೋಜನೆ. ಇದರಲ್ಲಿ 200 ಜನರಿದ್ದರೂ ನಡೆಯುತ್ತದೆ. ಈ ರೀತಿ ಹೋರಾಟಕ್ಕೆ ಯೋಜನೆ ರೂಪಿಸಿಕೊಂಡರೇ, ಯಾವ ಹೋರಾಟವು ಸೋಲುವುದಿಲ್ಲ. ಬಿಸಿಲಲ್ಲಿ, ಚಳಿಯಲ್ಲಿ ಬದುಕುವುದನ್ನು ಕಲಿಯಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ಮಾಡಿ, ಗ್ರಾಮ ಗ್ರಾಮಗಳಲ್ಲಿ ಕಮಿಟಿಗಳನ್ನು ಮಾಡಿರಿ. ನಿಮ್ಮ ಸಂಘಟನೆಯನ್ನು ಬಲಗೊಳಿಸಿ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ, ಇಲ್ಲದಿದ್ದರೇ ನಿಮ್ಮ ಭೂಮಿ ನಿಮ್ಮ ಬಳಿ ಉಳಿಯುವುದಿಲ್ಲ ಎಂದಿದ್ದಾರೆ.

ಕೊನೆಯಲ್ಲಿ, ’ನೆನಪಿಡಿ, ಇಂದಿನಿಂದ ಯಾರು ಸಭೆ, ಹೋರಾಟಕ್ಕೆ ಅನುಮತಿ ತೆಗೆದುಕೊಳ್ಳಬಾರದು. ಪೊಲೀಸರು ಹೋರಾಟ ನಿಲ್ಲಿಸಲು ಪ್ರಯತ್ನಿಸುತ್ತಾರೆ.  ಆದರೆ, ಅಲ್ಲೇ ನಿಮ್ಮ ಹೋರಾಟ ಶುರುವಾಗುತ್ತದೆ. ಅಲ್ಲೇ ಅಡುಗೆ ಮಾಡಿ, ನಿಮ್ಮ ಟ್ಯ್ರಾಕ್ಟರ್‌ಗಳ ಬಳಿ ಮೀಟಿಂಗ್ ಮಾಡಿ. ಒಟ್ಟಿನಲ್ಲಿ ಆಂದೋಲನ ನಡೆಸಿ. ಇವು ಟ್ಯ್ರಾಕ್ಟರ್‌ಗಳಲ್ಲ, ಟ್ಯಾಂಕರ್‌ಗಳು,  ಆಂದೋಲನ ನಡೆಸಿ… ಯುವಜನರಿಗೆ ಮಣ್ಣಿನೊಡನೆ ಸಂಬಂಧ ಬೆಳೆಸಬೇಕಿದೆ ಎಂದಿದ್ದಾರೆ.


ಇದನ್ನೂ ಓದಿ: ಕೆಲ ಬಿಜೆಪಿ ಮುಖಂಡರೆ ನಮ್ಮ ರೈತ ಆಂದೋಲನ ಮೆಚ್ಚಿಕೊಂಡಿದ್ದಾರೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...